ಶರತ್ ಬಚ್ಚೇಗೌಡ ಮತ್ತು ಎಂಟಿಬಿ ನಾಗರಾಜ್ 
ರಾಜಕೀಯ

ಉಪ ಚುನಾವಣೆ: ‘ಸಮೀಕ್ಷೆಗಳ ಪ್ರಕಾರ ಎಂ.ಟಿ.ಬಿ ನಾಗರಾಜ್ ಗೆ ಸೋಲು ಖಚಿತ’

ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರಿಗೆ ನನ್ನ ವಿರುದ್ಧ ಯಾವುದೇ ವಿಷಯ ಸಿಗುತ್ತಿಲ್ಲ. ಹೀಗಾಗಿ ಅವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೊಸಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರತ್‌ ಬಚ್ಚೇಗೌಡ ಅವರು ಆರೋಪಿಸಿದ್ದಾರೆ.

ಬೆಂಗಳೂರು: ಬಿಜೆಪಿ ಅಭ್ಯರ್ಥಿ ಎಂಟಿಬಿ ನಾಗರಾಜ್ ಅವರಿಗೆ ನನ್ನ ವಿರುದ್ಧ ಯಾವುದೇ ವಿಷಯ ಸಿಗುತ್ತಿಲ್ಲ. ಹೀಗಾಗಿ ಅವರು ನನ್ನ ವಿರುದ್ಧ ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹೊಸಕೋಟೆ ಕ್ಷೇತ್ರದ ಪಕ್ಷೇತರ ಅಭ್ಯರ್ಥಿ ಶರತ್‌ ಬಚ್ಚೇಗೌಡ ಅವರು ಆರೋಪಿಸಿದ್ದಾರೆ. 

ಇಂದು ಹೊಸಕೋಟೆ ತಾಲೂಕಿನ ಅನುಗೊಂಡನಹಳ್ಳಿ ವ್ಯಾಪ್ತಿಯಲ್ಲಿ ನಡೆದ ಪ್ರಚಾರ ಕಾರ್ಯಕ್ರಮದಲ್ಲಿ ಮಾತನಾಡಿದ ಶರತ್ ಅವರು, ಈ ಬಾರಿ ನಡೆಯುತ್ತಿರುವ ಉಪ ಚುನಾವಣೆಯಲ್ಲಿ ನಾಗರಾಜ್ ಅವರಿಗೆ ನನ್ನ ವಿರುದ್ಧ ಬಳಸಿಕೊಳ್ಳಲು ಯಾವುದೇ ರೀತಿಯ ಅಸ್ತ್ರ ಸಿಗುತ್ತಿಲ್ಲ. ಹೀಗಾಗಿ ಕೆಲ ದಿನಗಳ ಹಿಂದೆ ಮಿನಿ ಬಿಹಾರ್‌ ಎಂದು ಎಂಟಿಬಿ ನಾಗರಾಜ್‌ ಅವರು ಅಪಪ್ರಚಾರ ನಡೆಸಿದ್ದರು. ಮೊದಲು ಮಾರಾಟವಾಗಿದ್ದಾನೆ, ಡೀಲ್‌ ಆಗಿದ್ದಾನೆ, ಚೇರ್ಮನ್‌ ಬೋರ್ಡ್‌ ತಿರಸ್ಕರಿಸಿದರು ಎಂದೆಲ್ಲಾ ಅಪಪ್ರಚಾರ ಮಾಡುತ್ತಾ ಬಂದರು. ಆದರೆ ಯಾವುದಕ್ಕೂ ತಾಲೂಕಿನ ಜನತೆ ಒಪ್ಪದ ಸಂದರ್ಭದಲ್ಲಿ ಈಗ ಗೂಂಡಾ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಈ ಅಪಪ್ರಚಾರ ನಿರಂತ​ರ​ವಾಗಿ ಸಾಗಿದೆ ಎಂದರು.

ಈಗಾಗಲೇ ಕೆಲವು ಸಮೀಕ್ಷೆಗಳ ಪ್ರಕಾರ ಎಂ.ಟಿ.ಬಿ. ನಾಗರಾಜ್‌ ಅವರಿಗೆ ಸೋಲು ಖಚಿತ ಎಂಬ ಮಾಹಿತಿ ಇದೆ. ಈ ಆಧಾರದ ಮೇಲೆ ಹಾಗೂ ತಾಲೂಕಿನ ಮತದಾರರು ಆಮಿಷಗಳಿಗೆ ಒಳಗಾಗದೆ ಸ್ವಾಭಿಮಾನಿಗಳಾಗಿ ಪಕ್ಷೇತರ ಅಭ್ಯರ್ಥಿಗೆ ಬೆಂಬಲ ಸೂಚಿಸಲಿದ್ದಾರೆ. ಇ​ದ​ನ್ನು ಅರಿತ ಅವರು, ಈಗ ಈ ರೀತಿಯಾದ ಅಪಪ್ರಚಾರ ಮಾಡುತ್ತಿದ್ದಾರೆ. ಯಾರು ಏನೇ ಮಾಡಿದರೂ, ಈ ಚುನಾವಣೆಯಲ್ಲಿ ತಾಲೂಕಿನ ಮತದಾರರೇ ಇದಕ್ಕೆಲ್ಲಾ ಸರಿಯಾದ ಉತ್ತರ ನೀಡಲಿದ್ದಾರೆ. ಹೊಸಕೋಟೆ ತಾಲೂಕಿನ ಸ್ವಾಭಿಮಾನವನ್ನು ಎತ್ತಿ ಹಿಡಿಯಲಿದ್ದಾರೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

SCROLL FOR NEXT