ಸದಾನಂದಗೌಡ 
ರಾಜಕೀಯ

' ಸತ್ತವರ ಮನೆಯಲ್ಲೂ ಸದಾನಂದ ಗೌಡ ನಗುತ್ತಾರೆ : ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡಿದ್ರು ಸೋಮಣ್ಣ'

ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಸತ್ತವರ ಮನೆಗೆ ಹೋದರೂ ಹೀ ಅಂತ ನಗುತ್ತಾ ಇರುತ್ತಾರೆ. ಅದಕ್ಕೆ ಸತ್ತವರ ಮನೆಗೆ ಅವರನ್ನು ಕರೆದುಕೊಂಡು ಹೋಗಬೇಡಿ ಎಂದು ನಾನೇ ಹೇಳಿದ್ದೇನೆ.

ಬೆಂಗಳೂರು:  ಕೇಂದ್ರ ಸಚಿವ ಡಿವಿ ಸದಾನಂದ ಗೌಡ ಸತ್ತವರ ಮನೆಗೆ ಹೋದರೂ ಹೀ ಅಂತ ನಗುತ್ತಾ ಇರುತ್ತಾರೆ. ಅದಕ್ಕೆ ಸತ್ತವರ ಮನೆಗೆ ಅವರನ್ನು ಕರೆದುಕೊಂಡು ಹೋಗಬೇಡಿ ಎಂದು ನಾನೇ ಹೇಳಿದ್ದೇನೆ ಎಂದು ಕುಮಾರಸ್ವಾಮಿ ಅಪಹಾಸ್ಯ ಮಾಡಿದ್ದಾರೆ.

ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರದ ವೇಳೆ ಮಾತನಾಡುತ್ತಿದ್ದ ಅವರು, ಸದಾನಂದ ಗೌಡರು ಸತ್ತವರ ಮನೆಗೆ ಹೋಗಿ ,ಸತ್ತಿದ್ದಾರಾ ಅಂತ ನಗ್ತಾನೇ ಕೇಳುತ್ತಾರೆ ಎಂದು ಲೇವಡಿ ಮಾಡಿದ್ದಾರೆ.

ದೇವೇಗೌಡರು, ನಾನು ಇಲ್ಲದೇ ಇದ್ದಿದ್ದರೆ ಈ ಕ್ಷೇತ್ರದ ಅಭ್ಯರ್ಥಿ ಯಾವತ್ತೋ ಎನ್​ಕೌಂಟರ್ ಆಗಿಬಿಡುತ್ತಿದ್ದರು. ಪೊಲೀಸರಿಂದ ಮಾತ್ರ ಅಲ್ಲ, ರೌಡಿಗಳಿಂದಲೂ ಇವರ ಎನ್​ಕೌಂಟರ್ ಆಗತ್ತಾ ಇತ್ತು. ಇವರು ಬದಲಾಗುತ್ತಾರೆ ಎಂದು 2013ರಲ್ಲಿ ಒಂದು ಅವಕಾಶ ಕೊಟ್ಟೆ ಎಂದು ಕುಮಾರಸ್ವಾಮಿ ತಿಳಿಸಿದರು.

ಕಣ್ಣೀರು ಹಾಕೋದು ನಮ್ಮ ಕುಟುಂಬದ ಪೇಟೆಂಟ್. ನಾವು ಬಡ ಕುಟುಂಬದಿಂದ ಬಂದವರು. ಬಿಜೆಪಿಯವರ ಹಾಗೆ ಚಿನ್ನದ ಚಮಚ ಇಟ್ಟುಕೊಂಡು ಬೆಳೆದಿಲ್ಲ. ಬಡವರನ್ನು ನೋಡಿದಾಗ ನಮಗೆ ಕಣ್ಣೀರು ಬರುತ್ತದೆ. ಬಿಜೆಪಿ ನಾಯಕರಿಗೆ ಬಡವರ ಬಗ್ಗೆ ಕಾಳಜಿ ಇಲ್ಲ. ಹಾಗಾಗಿ ಅವರಿಗೆ ಕಣ್ಣೀರು ಬರಲ್ಲ  ಎಂದು ಕುಮಾರಸ್ವಾಮಿ ತಮ್ಮ ಕಣ್ಣೀರಿಗೆ ವಿಶ್ಲೇಷಣೆ ನೀಡಿದರು.

ಸೋಮಣ್ಣ ಯಾರ ಯಾರ ಕಾಲಿಗೆ ಯಾವ್ಯಾವಾಗೆಲ್ಲಾ ಬಿದ್ದಿದ್ದಾರೆ ಎನ್ನೋದು ಗೊತ್ತಿದೆ. ನಿಮಗೆ ದೇವೇಗೌಡರ ಬಗ್ಗೆ ಮಾತನಾಡುವ ಯೋಗ್ಯತೆ ಇಲ್ಲ. ಜನತಾ ಬಜಾರ್​ನಲ್ಲಿ ಬಟ್ಟೆ ಕದ್ದು ಸಿಕ್ಕಿಹಾಕಿಕೊಂಡವರು ಸೋಮಣ್ಣ. ಈ ವಯಸ್ಸಿನಲ್ಲಿ ದೇವೇಗೌಡರು ಪಕ್ಷಕ್ಕಾಗಿ ಹೋರಾಟ ಮಾಡುತ್ತಿದ್ದಾರೆ. ನಿಮ್ಮ ಹಾಗೆ ಪಕ್ಷದಲ್ಲಿ ಬೆಳೆದು ಆ ಮೆಲೆ ಆ ಪಕ್ಷಕ್ಕೆ ದ್ರೋಹ ಮಾಡಿಲ್ಲ” ಎಂದು ಸೋಮಣ್ಣರನ್ನು ಹೆಚ್​ಡಿಕೆ ಟೀಕಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

ಶಿವಮೊಗ್ಗ: 10 ಕಿಲೋ ವ್ಯಾಟ್ FM ಟ್ರಾನ್ಸ್ಮಿಟರ್ ಕೇಂದ್ರ ಉದ್ಘಾಟನೆ! ಆಕಾಶವಾಣಿ, ದೂರದರ್ಶನ ಅಭಿವೃದ್ದಿಗೆ 2,500 ಕೋಟಿ ಹಣ ವೆಚ್ಚ- ಡಾ. ಎಲ್ ಮುರುಗನ್

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಅಮ್ಮಾ....ಐ ಲವ್ ಯೂ ಸೋ ಮಚ್: ಕುವೈತ್ ನಲ್ಲಿದ್ದ ತಾಯಿಗೆ ಕೊನೆಯ ಸಂದೇಶ ಕಳಿಸಿ ಯೂಟ್ಯೂಬರ್ ಆತ್ಮಹತ್ಯೆ

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

SCROLL FOR NEXT