ದಿನೇಶ್ ಗುಂಡೂರಾವ್, ಬಿ.ಸಿ. ಪಾಟೀಲ್ 
ರಾಜಕೀಯ

'ಸಿದ್ದರಾಮಯ್ಯರ ಚೇಲಾ ದಿನೇಶ್ ಗುಂಡೂರಾವ್' - ಬಿ. ಸಿ. ಪಾಟೀಲ್  ಕಿಡಿ

ಉಪ ಚುನಾವಣೆಗೆ ಇನ್ನೂ ಐದು ದಿನಗಳು ಬಾಕಿ ಇರುವಂತೆಯೇ ಪ್ರಚಾರದ ಅಖಾಡ ಮತ್ತಷ್ಟು ರಂಗೇರಿದ್ದು,  ನಾಯಕರ ನಡುವಿನ ವೈಯಕ್ತಿಕ ಟೀಕೆ, ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿದೆ

ಯಲ್ಲಾಪುರ: ಉಪ ಚುನಾವಣೆಗೆ ಇನ್ನೂ ಐದು ದಿನಗಳು ಬಾಕಿ ಇರುವಂತೆಯೇ ಪ್ರಚಾರದ ಅಖಾಡ ಮತ್ತಷ್ಟು ರಂಗೇರಿದ್ದು,  ನಾಯಕರ ನಡುವಿನ ವೈಯಕ್ತಿಕ ಟೀಕೆ, ಆರೋಪ, ಪ್ರತ್ಯಾರೋಪಗಳು ತಾರಕಕ್ಕೇರಿದೆ.

ಹಿರೇಕೆರೂರು ವಿಧಾನಸಭಾ ಕ್ಷೇತ್ರದ ಯಲ್ಲಾಪುರದಲ್ಲಿ ಬಿರುಸಿನ ಪ್ರಚಾರ ನಡೆಸಿದ ಅನರ್ಹ ಶಾಸಕ ಬಿ. ಸಿ. ಪಾಟೀಲ್, ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಹಿಗ್ಗಾಮುಗ್ಗಾ ವಾಗ್ದಾಳಿ ನಡೆಸಿದರು. ದಿನೇಶ್ ಗುಂಡೂರಾವ್  ಸಿದ್ದರಾಮಯ್ಯ ಅವರ ಚೇಲಾ, ಚಮಚಾ ಎಂದು ಕಿಡಿಕಾರಿದರು. 

ದಿನೇಶ್ ಗುಂಡೂರಾವ್ ಯಾರ ಕಾಲಿನ ದೂಳಿಗೆ ಸಮ ಎಂದು ಪ್ರಶ್ನಿಸಿದ ಅವರು,  ದಿನೇಶ್ ಗುಂಡೂರಾವ್  ಸಿದ್ದರಾಮಯ್ಯ ಅವರಿಗೆ ಸರಿ ಸಮ ಅಂತಾ ನಾನು ಹೇಳಿಲ್ಲ ಎಂದು ಸ್ಪಷ್ಟಪಡಿಸಿದರು.

ಗುರುವಾರ ಯಲ್ಲಾಪುರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಭೀಮಣ್ಣ ನಾಯ್ಕ್ ಪರ  ಪ್ರಚಾರ ನಡೆಸಿದ್ದ ದಿನೇಶ್ ಗುಂಡೂರಾವ್,  ಈ ಚುನಾವಣೆ ಸ್ವಾಭಿಮಾನದ ಪ್ರಶ್ನೆ ಆಗಿದ್ದು, ಶಾಸಕರು, ರಾಜಕಾರಣಿಗಳು ಆಗುವ ಅರ್ಹತೆ ಕಳೆದುಕೊಂಡ ಅನರ್ಹರನ್ನು ಚುನಾವಣೆಯಲ್ಲಿ ಸೋಲಿಸುವ ಮೂಲಕ ಪಕ್ಷಾಂತರಿಗೆ ಸೂಕ್ತ ಎಚ್ಚರಿಕೆ ನೀಡಬೇಕಿದೆ ಎಂದು ಮತದಾರರಲ್ಲಿ ಮನವಿ ಮಾಡಿಕೊಂಡಿದ್ದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಚೀನಾಗೆ ಕೌಂಟರ್: ಇಂಡೋ-ಪೆಸಿಫಿಕ್‌ನಲ್ಲಿ ಭದ್ರತಾ ಸಹಕಾರ ಹೆಚ್ಚಿಸಲು 'Quad' ಮಹತ್ವದ ತೀರ್ಮಾನ, ಹೊಸ ಕಾರ್ಯಯೋಜನೆ ಘೋಷಿಸಿದ ಮಾರ್ಕೊ ರುಬಿಯೋ..!

ದೆಹಲಿಯಲ್ಲಿ ಸಿದ್ದರಾಮಯ್ಯ-ಡಿಕೆ.ಶಿವಕುಮಾರ್; ನಾಯಕತ್ವ ಬದಲಾವಣೆ ಊಹಾಪೋಹಗಳಿಗೆ ಬೀಳುತ್ತಾ ತೆರೆ? ಕುತೂಹಲ ಮೂಡಿಸಿದ ಕಾಂಗ್ರೆಸ್ ಸಭೆ..!

ಪ್ಯಾಲೆಸ್ಟೀನ್ ರಾಷ್ಟ್ರ ಸ್ಥಾಪನೆವರೆಗೆ ಇಸ್ರೇಲ್‌ಗೆ ಮಾನ್ಯತೆ ಇಲ್ಲ: ಅಬ್ರಹಾಂ ಒಪ್ಪಂದಕ್ಕೆ 'NO' ಎಂದ ಪಾಕಿಸ್ತಾನ, ಟ್ರಂಪ್ ರಾಜತಾಂತ್ರಿಕ ಯತ್ನಕ್ಕೆ ಹಿನ್ನೆಡೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ನನಗೆ 'CM ವಿಜಯ್' ಕಂಡ್ರೆ ಅಸೂಯೆ: ಸಾರ್ವಜನಿಕವಾಗಿ ಸತ್ಯ ಒಪ್ಪಿಕೊಂಡ ಆಂಧ್ರ DCM ಪವನ್ ಕಲ್ಯಾಣ್!

SCROLL FOR NEXT