ಬ್ರಹ್ಮಾನಂದಂ ಪ್ರಚಾರ 
ರಾಜಕೀಯ

ಡಾ.ಕೆ.ಸುಧಾಕರ್ ಪರ ತೆಲುಗು ಹಾಸ್ಯ ನಟ ಬ್ರಹ್ಮಾನಂದಂ ಪ್ರಚಾರ

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ನೆರೆಯ ಆಂದ್ರಪ್ರದೇಶದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತಾಲೂಕಿನ ಪೆರೇಸಂದ್ರ ಕ್ರಾಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.

ಚಿಕ್ಕಬಳ್ಳಾಪುರ:  ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ.ಕೆ ಸುಧಾಕರ್ ಪರ ಪ್ರಚಾರಕ್ಕಾಗಿ ಚಂದನವನದ ನಟ ನಟಿಯರು ಕಳೆದ ಒಂದು ವಾರದಿಂದ ಕ್ಷೇತ್ರದಲ್ಲಿ ಬೀಡುಬಿಟ್ಟಿದ್ದಾರೆ. 

ಸ್ಯಾಂಡಲ್‍ವುಡ್ ನಟ ನಟಿಯರ ಜೊತೆಗೆ ಟಾಲಿವುಡ್‍ನ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ಸಹ ಸಾಥ್ ನೀಡಿದ್ದಾರೆ.

ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪರ ನೆರೆಯ ಆಂದ್ರಪ್ರದೇಶದ ಖ್ಯಾತ ಹಾಸ್ಯ ನಟ ಬ್ರಹ್ಮಾನಂದಂ ತಾಲೂಕಿನ ಪೆರೇಸಂದ್ರ ಕ್ರಾಸ್ ನಲ್ಲಿ ಬಿಜೆಪಿ ಅಭ್ಯರ್ಥಿ ಡಾ.ಕೆ.ಸುಧಾಕರ್ ಪರ ಭರ್ಜರಿ ರೋಡ್ ಶೋ ನಡೆಸುವ ಮೂಲಕ ಮತಯಾಚನೆ ಮಾಡಿದರು.

ಹೈದ್ರಾಬಾದ್ ನಿಂದ ಬೆಂಗಳೂರು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿ ಅಲ್ಲಿಂದ ರಾಷ್ಟ್ರೀಯ ಹೆದ್ದಾರಿ 7 ಮೂಲಕ ಚಿಕ್ಕಬಳ್ಳಾಪುರಕ್ಕೆ ಆಗಮಿಸಿದ ಬ್ರಹ್ಮಾನಂದಂ ಸುಧಾಕರ್ ಸ್ವಗ್ರಾಮ ಪೆರೇಸಂದ್ರದಲ್ಲಿ ಸುಧಾಕರ್ ಪರ ಚುನಾವಣೆ ಪ್ರಚಾರ ನಡೆಸಿದರು.

ಸುಧಾಕರ್ ನನಗೆ ಆತ್ಮೀಯ ಸ್ನೇಹಿತ, ಕ್ಷೇತ್ರದ ಅಭಿವೃದ್ಧಿಗೆ ಶ್ರಮಿಸುವ ವ್ಯಕ್ತಿ. ಇಂಥವರನ್ನು ಚುನಾವಣೆಯಲ್ಲಿ ಗೆಲ್ಲಿಸಿದರೆ ಕ್ಷೇತ್ರದ ಅಭಿವೃದ್ಧಿ ಆಗುತ್ತದೆ. ಆದ್ದರಿಂದ ನಾನು ಹೈದ್ರಾಬಾದ್ ನಿಂದ ಇವರ ಪರ ಪ್ರಚಾರಕ್ಕೆ ಬಂದಿದ್ದೇನೆ. ಇವರನ್ನು ಹೆಚ್ಚಿನ ಮತಗಳಿಂದ ಗೆಲ್ಲಿಸಿ ಅವರ ಗೆಲುವಿನ ವಿಜಯೋತ್ಸವ ಕಾರ್ಯಕ್ರಮದಲ್ಲಿ ಮತ್ತೆ ನಾನು ಭಾಗವಹಿಸುತ್ತೇನೆ ಎಂದು ನೆರದಿದ್ದ ಕಾರ್ಯಕರ್ತರನ್ನು ಹುರಿದುಂಬಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

ಬಿಗ್ ಬಾಸ್ 12 ಫಿನಾಲೆ ಹೊತ್ತಲ್ಲಿ ಕಿಚ್ಚ ಸುದೀಪ್‌ಗೆ ಸಂಕಷ್ಟ ತಂದ 'ರಣಹದ್ದು'!

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

ಉತ್ತರ ಪ್ರದೇಶ: "ಆಕ್ಷೇಪಾರ್ಹ" ಸ್ಥಿತಿಯಲ್ಲಿದ್ದ ಪ್ರೇಮಿಗಳನ್ನು ಹೊಡೆದು ಕೊಂದ ಕುಟುಂಬಸ್ಥರು!

ಮಹಾತ್ಮ ಗಾಂಧಿ ಸಂದೇಶಗಳು ಹಿಂದೆಂದಿಗಿಂತಲೂ ಈಗ ಹೆಚ್ಚು ಪ್ರಸ್ತುತ: ಸಬರಮತಿ ಆಶ್ರಮದಲ್ಲಿ ಜರ್ಮನ್ ಚಾನ್ಸೆಲರ್!

SCROLL FOR NEXT