ಎಚ್.ಡಿದೇವೇಗೌಡ 
ರಾಜಕೀಯ

ತುಮಕೂರಿನ ಸೋಲನ್ನು ಕೆ.ಆರ್ ಪೇಟೆ ಗೆಲುವಿನಲ್ಲಿ ಮರೆಯುತ್ತೇನೆ: ಎಚ್.ಡಿ ದೇವೇಗೌಡ

ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ಕೆ.ಆರ್ ಪೇಟೆ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಪರವಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಚಾರ ನಡೆಸಿದರು.

ಮೈಸೂರು: ಡಿಸೆಂಬರ್ 5 ರಂದು ನಡೆಯುವ ಉಪಚುನಾವಣೆ ಹಿನ್ನೆಲೆಯಲ್ಲಿ ಕೆ.ಆರ್ ಪೇಟೆ ವಿಧಾನಸಭೆ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಪರವಾಗಿ ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಪ್ರಚಾರ ನಡೆಸಿದರು.

ಈ ವೇಳೆ ಭಾವುಕವರಾಗಿ ಮಾತನಾಡಿದ ಅವರು, ಕಳೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರಿನಲ್ಲಿ ಉಂಟಾದ ಸೋಲನ್ನು ಕೆ.ಆರ್ ಪೇಟೆ ಗೆಲುವಿನಲ್ಲಿ ಮರೆಯುತ್ತೇನೆ, ಹೀಗಾಗಿ ತಾವು ದೇವರಾಜು ಅವರನ್ನು ಗೆಲ್ಲಿಸಬೇಕು, ಕೆ.ಆರ್ ಪೇಟೆಯಲ್ಲಿನ ಗೆಲುವು ನನಗೆ ಮತ್ತಷ್ಟು ಶಕ್ತಿ ತುಂಬಿಸುತ್ತದೆ ಎಂದು ಹೇಳಿದ್ದಾರೆ.

ಬಿಜೆಪಿ ಅಭ್ಯರ್ಥಿ ನಾರಾಯಣ ಗೌಡ ಅವರ ಬಗ್ಗೆ ತಮಗೆ ಆಸಕ್ತಿಯಿಲ್ಲ ಎಂದು ಹೇಳಿದ ದೇವೇಗೌಡರು, ಎರಡು ರಾಷ್ಟ್ರೀಯ ಪಕ್ಷಗಳಿಗೆ ಪ್ರಾದೇಶಿಕ ಪಕ್ಷಗಳ ಜೊತೆ ವ್ಯವಹಾರ ನಡೆಸಲು ಬರುವುದಿಲ್ಲ ಎಂದು ಆರೋಪಿಸಿದ್ದಾರೆ

ರಾಜ್ಯದ ಹಾಗಬೂಪಕ್ಷದ ಹಿತದೃಷ್ಟಿಯಿಂದ ಚಿಕ್ಕಬಳ್ಳಾಪುರ ಮತ್ತು ಗೋಕಾಕ್ ನಲ್ಲಿ ಪ್ರಚಾರ ನಡೆಸುವುದಾಗಿ ತಿಳಿಸಿದ್ದಾರೆ. ಬಿಜೆಪಿ ಕೇವಲ ಆರು ಸ್ಥಾನಗಳನ್ನು ಮಾತ್ರ ಗೆಲ್ಲಲು ಸಾಧ್ಯ, ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಆತಂಕಕ್ಕೀಡಾಗದ್ದಾರೆ ಎಂದು ಹೇಳಿದ್ದಾರೆ.

ನಾರಾಯಣಗೌಡರಿಗೆ ಪಕ್ಷ ಒಂದು ಗುರುತು ಹಾಗೂ ಜನಪ್ರಿಯತೆ ತಂದುಕೊಟ್ಟಿತ್ತು, ಆದರೆ ನಾರಾಯಣಗೌಡ ಜನತೆ ಹಾಗೂ ಪಕ್ಷದ ಆಶಯವನ್ನು ಮಣ್ಣುಪಾಲು ಮಾಡಿದ್ದಾರೆ ಎಂದು ಕೆ,ಆರ್ ಪೇಟೆ ಜೆಡಿಎಸ್ ಅಭ್ಯರ್ಥಿ ಬಿ.ಎಲ್ ದೇವರಾಜು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT