ವಾಟಾಳ್ ನಾಗರಾಜ್ 
ರಾಜಕೀಯ

ಮಾರ್ವಾಡಿಗೆ ಬಿಬಿಎಂಪಿ ಮೇಯರ್ ಪಟ್ಟ: ಬಿಜೆಪಿ ವಿರುದ್ಧ ವಾಟಾಳ್ ನಾಗರಾಜ್ ಪ್ರತಿಭಟನೆ

ಬೆಂಗಳೂರು ನಗರದ ಮೇಯರ್ ಹುದ್ದೆಗೆ ಮಾರ್ವಾಡಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ಬಿಜೆಪಿ ಕ್ರಮವನ್ನು ವಿರೋಧಿಸಿ ಕರ್ನಾಟಕ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಂಗಳವಾರ ಪ್ರತಿಭಟನೆ ನಡೆಸಿದರು.

ಬೆಂಗಳೂರು: ಬೆಂಗಳೂರು ನಗರದ ಮೇಯರ್ ಹುದ್ದೆಗೆ ಮಾರ್ವಾಡಿ ಅಭ್ಯರ್ಥಿಯನ್ನು ಆಯ್ಕೆ ಮಾಡಿದ ಬಿಜೆಪಿ ಕ್ರಮವನ್ನು ವಿರೋಧಿಸಿ ಕರ್ನಾಟಕ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಮಂಗಳವಾರ ಪ್ರತಿಭಟನೆ ನಡೆಸಿದರು.
  
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ಕೇಂದ್ರ ಕಚೇರಿ ಎದುರು ಪ್ರತಿಭಟನೆ ನಡೆಸಿ, ನೂತನ ಮೇಯರ್ ಗೌತಮ್ ವಿರುದ್ಧ ಘೋಷಣೆ ಕೂಗಿದ ಅವರು, ಬೆಂಗಳೂರು ನಗರ ಮಾರ್ವಾಡಿಗರ ಪಾಲಾಗಿರುವುದು ದುರದೃಷ್ಟಕರ ಎಂದರು. 
  
ಬೆಂಗಳೂರಿನ ಮೇಯರ್ ಸ್ಥಾನವನ್ನು ಅಚ್ಚ ಕನ್ನಡಿಗನಿಗೆ ನೀಡಬೇಕು. ಆದರೆ, ಇಲ್ಲಿ ಮಾರ್ವಾಡಿಗರು, ತೆಲುಗರು, ತಮಿಳರು, ಮಲೆಯಾಳಿಗಳ ಹಾವಳಿ ಜಾಸ್ತಿಯಾಗಿದೆ. ಇದರಿಂದ ಕೇವಲ ಬೆಂಗಳೂರಿಗೆ ಮಾತ್ರವಲ್ಲ ಇಡೀ ರಾಜ್ಯಕ್ಕೆ ಹಾನಿಯಾಗುತ್ತದೆ. ಬೇರೆಡೆಯಿಂದ ಇಲ್ಲಿಗೆ ಬಂದು ಬದುಕು ಕಟ್ಟಿಕೊಂಡವರಿಗೆ ಮಣೆ ಹಾಕುವ ಬದಲಿಗೆ, ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಒತ್ತಾಯಿಸಿದರು.
  
ಇನ್ನೊಂದೆಡೆ, ಮಾರ್ವಾಡಿಗರನ್ನು ಆಯ್ಕೆ ಮಾಡಿರುವುದರಿಂದ ಇತರ ಜಾತಿಯವರಿಗೆ ಅನ್ಯಾಯವಾಗಿದೆ ಎಂಬ ಕೂಗು ಕೂಡ ಕೇಳಿಬಂದಿತ್ತು. 
ಆದರೆ, ಆರೋಪಗಳಿಗೆ  ಆಕ್ಷೇಪ ವ್ಯಕ್ತಪಡಿಸಿದ ಕೇಂದ್ರ ರಸಗೊಬ್ಬರ ಹಾಗೂ ರಾಸಾಯನಿಕ ಖಾತೆ ಸಚಿವ ಡಿ.ವಿ.ಸದಾನಂದಗೌಡ, ಎಲ್ಲದರಲ್ಲೂ ಹುಳುಕು ಹುಡುಕಬೇಡಿ. ಗೌತಮ್ ಕನ್ನಡಿಗರಲ್ಲ ಎಂದು ಹೇಳುವುದು ಸರಿಯಲ್ಲ. ಅವರನ್ನು ಬಹುಮತದಿಂದ ಮೇಯರ್ ಆಗಿ ಆಯ್ಕೆ ಮಾಡಲಾಗಿದೆ. ಗೌಡರಿಗೆ ಅನ್ಯಾಯವಾಗಿದೆ, ಲಿಂಗಾಯತರಿಗೆ ಮೋಸವಾಗಿದೆ ಎಂದೆಲ್ಲ ಹೇಳುವುದು ಸರಿಯಲ್ಲ ಎಂದು ತಿರುಗೇಟು ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!