ಪ್ರತಾಪ್ ಸಿಂಹ 
ರಾಜಕೀಯ

ಜೇಬಿನಿಂದ ಪರಿಹಾರ ನೀಡುವುದಕ್ಕೆ ಸಾಧ್ಯವಿಲ್ಲ: ಸಂಸದ ಪ್ರತಾಪ್ ಸಿಂಹ

ಬಿಜೆಪಿಯ 25 ಜನ ಸಂಸದರನ್ನು ಕಾಂಗ್ರೆಸ್ಸಿಗರು ನಿಂದಿಸಿ ಸಾಕಾಗಿದ್ದು ಈಗ ಪ್ರಧಾನಿ ಮೋದಿಯವರನ್ನು ಬೈಯುವುದಕ್ಕೆ ಶುರು ಮಾಡಿದ್ದಾರೆ. ಈ ತರಹದ ಪ್ರಯತ್ನಕ್ಕೆ ಕೈ ಹಾಕದೆ ಇರುವುದು ಒಳ್ಳೆಯದು. ಏಕೆಂದರೆ ಆಕಾಶವನ್ನು ನೋಡಿ ಉಗುಳಿದಂಗೆ ಆಗುತ್ತದೆ...

ಮೈಸೂರು: ಬಿಜೆಪಿಯ 25 ಜನ ಸಂಸದರನ್ನು ಕಾಂಗ್ರೆಸ್ಸಿಗರು ನಿಂದಿಸಿ ಸಾಕಾಗಿದ್ದು ಈಗ ಪ್ರಧಾನಿ ಮೋದಿಯವರನ್ನು ಬೈಯುವುದಕ್ಕೆ ಶುರು ಮಾಡಿದ್ದಾರೆ. ಈ ತರಹದ ಪ್ರಯತ್ನಕ್ಕೆ ಕೈ ಹಾಕದೆ ಇರುವುದು ಒಳ್ಳೆಯದು. ಏಕೆಂದರೆ ಆಕಾಶವನ್ನು ನೋಡಿ ಉಗುಳಿದಂಗೆ ಆಗುತ್ತದೆ ಅದು ಅವರ ಮುಖಕ್ಕೆ ಬಂದು ಬೀಳುತ್ತದೆ. ಯೋಚನೆ ಮಾಡಿ ಎಂದು ಸಂಸದ ಪ್ರತಾಪ್ ಸಿಂಹ ವಿಪಕ್ಷದ ನಾಯಕರಿಗೆ ತಿರುಗೇಟು ನೀಡಿದ್ದಾರೆ.

ಇಂದು ದಸರಾ ಕಾರ್ಯಕ್ರಮದಲ್ಲಿ ಭಾಗವಹಿಸಿ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ ವಿರೋಧ ಪಕ್ಷದವರು ನೆರೆ ಪರಿಹಾರದಲ್ಲಿ ಕೇಂದ್ರದಿಂದ ಯಾವುದೇ ಪರಿಹಾರ ಬಂದಿಲ್ಲ ಎಂದು ಎಲ್ಲಾ ಕಡೆ ಹೇಳಿಕೊಂಡು ತಿರುಗಾಡುತ್ತಿದ್ದಾರೆ. ಜೊತೆಗೆ ಬಿಜೆಪಿ ಸಂಸದರನ್ನು ಬೈದು ಸಾಕಾಯಿತು ಇನ್ನೂ ಪ್ರಧಾನಿ ಮೋದಿಯವರ ವಿರುದ್ಧ ಮಾತನಾಡುತ್ತಿದ್ದು, ‌ ಇದೊಂದು ರೀತಿ ಆಕಾಶಕ್ಕೆ ಉಗುಳಿದಂಗೆ ಆಗುತ್ತದೆ. ಅದು ನಮ್ಮ ಮೇಲೆ ಬೀಳಲಿದೆ ಎಂದು ವ್ಯಂಗ್ಯವಾಡಿದರು.

ಮೋದಿ ಕರ್ನಾಟಕದ ನೆರೆ ಕುರಿತು ಟ್ವೀಟ್​ ಮಾಡಿಲ್ಲ ಎನ್ನುತ್ತಾರೆ. ಆದರೆ ಅವರು ರಾಜ್ಯಕ್ಕೆ ಗೃಹ ಸಚಿವ ಅಮಿತ್ ಶಾ ಅವರನ್ನು ಕಳುಹಿಸಿದ್ದರು,ಅವರು ವೈಮಾನಿಕ ಸಮೀಕ್ಷೆ ನಡೆಸಿದ್ದು ನಿಮಗೆ ಕಾಣುವುದಿಲ್ಲವೇ? ಮೋದಿ ಬಗ್ಗೆ ಮಾತನಾಡುವ ಸಂಸದರಿಗೆ ಧೈರ್ಯ ಇಲ್ಲವೇ ಎಂದು ಪ್ರಶ್ನಿಸುತ್ತಾರೆ. ಕೆಲಸ ಮಾಡುವುದಕ್ಕೆಕೆ ಧೈರ್ಯ ಯಾಕೆ ಬೇಕು? ಪದಬಳಕೆ, ಶಬ್ಧ ಬಳಕೆ ಮಾಡಿ ಟೀಕಿಸುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

GBA ಆಯ್ತು.. ಈಗ ಗ್ರೇಟರ್ ಮೈಸೂರು ಸಿಟಿ ಕಾರ್ಪೋರೇಷನ್ ಗೆ ಸಂಪುಟ ಅನುಮೋದನೆ!

'ಮಾತು' ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಮಹಿಳೆಗೆ ಕಚ್ಚಿದ ನಾಯಿ, ಪ್ರಶ್ನೆ ಮಾಡಿದ ಸಂತ್ರಸ್ಥೆಗೆ ಮಾಲಕಿ ಕಪಾಳಮೋಕ್ಷ, Video Viral

ಸಂಸತ್ತಿನಲ್ಲಿ 'ವಂದೇ ಮಾತರಂ', 'ಜೈ ಹಿಂದ್' ಘೋಷಣೆಗಳಿಗೆ ಆಕ್ಷೇಪಣೆ ಯಾಕೆ?: ಬಿಜೆಪಿ ಪ್ರಶ್ನಿಸಿದ ಕಾಂಗ್ರೆಸ್

ಯುದ್ಧ ಸಾರಿದ ನ್ಯೂಜಿಲೆಂಡ್, 25 ಲಕ್ಷ Stone Cold Killers ನಿರ್ಮೂಲನೆ ಮಾಡುವ ಶಪಥ!

SCROLL FOR NEXT