ರಾಜಕೀಯ

ಮುಖ್ಯಮಂತ್ರಿ ಬದಲಾವಣೆ ಪ್ರಶ್ನೆಯೇ ಇಲ್ಲ: ಸಚಿವ ಸಿ.ಟಿ.ರವಿ

Srinivasamurthy VN

ರಾಮನಗರ: ರಾಜ್ಯ ಬಿಜೆಪಿ ಸರ್ಕಾರದಲ್ಲಿ ಮುಖ್ಯಮಂತ್ರಿ ಬದಲಾವಣೆಯ ಯಾವುದೇ ಪ್ರಸ್ತಾಪವಿಲ್ಲ. ಚುನಾವಣೆಗೂ ಮುನ್ನವೇ ಬಿ.ಎಸ್. ಯಡಿಯೂರಪ್ಪ ಅವರನ್ನು‌ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿತ್ತು ಎಂದು‌ ಪ್ರವಾಸೋದ್ಯಮ ಸಚಿವ ಸಿ.ಟಿ.ರವಿ ಹೇಳಿದ್ದಾರೆ.

ರಾಮನಗರದಲ್ಲಿ‌ ಪ್ರವಾಸೋದ್ಯಮ‌ ಇಲಾಖೆ ವತಿಯಿಂದ ಅಯೋಜಿಸಿರುವ ಆಹಾರ ಮೇಳಕ್ಕೆ ಸೋಮವಾರ ಭೇಟಿ ನೀಡಿದ್ದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಇತಿಹಾಸದಲ್ಲಿ 75 ವರ್ಷ ಆಗಿರುವವರಿಗೆ ಅಧಿಕಾರ ಕೊಟ್ಟಿರುವುದು ಯಡಿಯೂರಪ್ಪನವರಿಗೆ ಮಾತ್ರ. ಚುನಾವಣೆಯ ಪೂರ್ವದಲ್ಲಿಯೇ ಅವರೇ ನಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಘೋಷಣೆ ಮಾಡಿದ್ದೆವು.

ಅವರನ್ನು ನಾವೆಲ್ಲಾ ಸರ್ವಾನುಮತದಿಂದ ಆಯ್ಕೆ ಮಾಡಿದ್ದೆವು. ಸರ್ಕಾರದ ಅವಧಿ ಮುಗಿಯುವವರೆಗೂ ಅವರೇ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಪ್ರತಿಕ್ರಿಯಿಸಿದರು.

SCROLL FOR NEXT