ಮಾಜಿ ಸಚಿವ ಎಸ್ ಆರ್ ಶ್ರೀನಿವಾಸ್ 
ರಾಜಕೀಯ

ಜೆಡಿಎಸ್ ಮತ್ತೊಂದು ವಿಕೆಟ್ ಪತನ? ಗುಬ್ಬಿ ಶಾಸಕನಿಗೆ  ಬಿಜೆಪಿ ಗಾಳ!

ವಿಧಾನಸಭೆ ಉಪ-ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಬ್ಬ ಜೆಡಿಎಸ್ ಶಾಸಕನಿಗೆ ಗಾಳ ಹಾಕಲು ಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ತುಮಕೂರು: ವಿಧಾನಸಭೆ ಉಪ-ಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಮತ್ತೊಬ್ಬ ಜೆಡಿಎಸ್ ಶಾಸಕನಿಗೆ ಗಾಳ ಹಾಕಲು ಯತ್ನಿಸುತ್ತಿದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್ ಶ್ರೀನಿವಾಸ್ ಹೇಳಿಕೆ ಈ ಸುಳಿವಿಗೆ ಇನ್ನಷ್ಟು ಪುಷ್ಠಿಕೊಟ್ಟಿದೆ. ಬಿಜೆಪಿ ಮುಖಂಡ ಬೆಟ್ಟಸ್ವಾಮಿ ಅವರು ಎಸ್.ಆರ್ ಶ್ರೀನಿವಾಸ್ ಮನೆಗೆ ಹೋಗಿ ಬಿಜೆಪಿಯಿಂದ ಸ್ಪರ್ಧಿಸುವಂತೆ ಒತ್ತಡ ಹಾಕಿದ್ದಾರೆ. ಯಡಿಯೂರಪ್ಪಗೆ ಹೇಳಿ ಟಿಕೆಟ್ ಕೊಡಿಸುವುದಾಗಿ ಹೇಳಿದ್ದಾರೆ ಎಂದು ಎಸ್ ಆರ್ ಶ್ರೀನಿವಾಸ್ ತಿಳಿಸಿದ್ದಾರೆ.

ಬೇಕಿದ್ದರೆ ಅವರು ಬಂದಿರುವುದಕ್ಕೆ ಸಾಕ್ಷಿಯಾಗಿ ಮನೆಯ ಸಿಸಿಟಿವಿ ನೋಡಿ. ಬೆಟ್ಟಸ್ವಾಮಿಯೇ ಬಂದು ಬಿಜೆಪಿಗೆ ಬಾ ನಾವೆಲ್ಲ ಒಂದಾಗೋಣ ಎಂದು  ಹೇಳಿರುವುದಾಗಿ ಸ್ವತಃ ಶ್ರೀನಿವಾಸ್ ಅವರೇ ಹೇಳಿದ್ದಾರೆ.

ಗೊಲ್ಲ ಸಮುದಾಯದ ನಾಯಕನಾಗಿರುವ ಬೆಟ್ಟಸ್ವಾಮಿ ಕಳೆದ ಬಾರಿ ಗುಬ್ಬಿಕ್ಷೇತ್ರದ ಬಿಜೆಪಿ ಪರಾಜಿತ ಅಭ್ಯರ್ಥಿಯಾಗಿದ್ದಾರೆ. ಸತತ ಮೂರು ಬಾರಿ ಸೋತ ಬೆಟ್ಟಸ್ವಾಮಿಗೆ ಈ ಬಾರಿ ಟಿಕೆಟ್ ಸಿಗುವ ಸಾಧ್ಯತೆ ಇಲ್ಲ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

ಸಂಭಾಲ್ ದೇವಸ್ಥಾನದಿಂದ ಸಾಯಿಬಾಬಾ ವಿಗ್ರಹಕ್ಕೆ ಗೇಟ್ ಪಾಸ್! ಗಂಗಾ ನದಿಯಲ್ಲಿ ವಿಸರ್ಜನೆ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

SCROLL FOR NEXT