ಲಕ್ಷ್ಮಣ ಸವದಿ 
ರಾಜಕೀಯ

ಮಹೇಶ್ ಕುಮಟಳ್ಳಿಗೆ ಆತಂಕ ಬೇಡ, ವಿಧಾನಸಭೆ ಉಪ ಚುನಾವಣೆಯಲ್ಲಿ ನಾನು ಸ್ಪರ್ಧಿಸಲ್ಲ: ಸವದಿ

ನಾನು ವಿಧನಾಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಹಾಗಾಗಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಭಯ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟ ಪಡಿಸಿದ್ದಾರೆ.

ಚಿತ್ರದುರ್ಗ: ನಾನು ವಿಧನಾಸಭೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ, ಹಾಗಾಗಿ ಅನರ್ಹ ಶಾಸಕ ಮಹೇಶ್ ಕುಮಟಳ್ಳಿ ಭಯ ಪಡುವ ಅಗತ್ಯವಿಲ್ಲ ಎಂದು ಡಿಸಿಎಂ ಹಾಗೂ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸ್ಪಷ್ಟ ಪಡಿಸಿದ್ದಾರೆ.

ಚಿತ್ರದುರ್ಗದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಳೆದ ವಿಧಾನ ಸಭೆ ಚುನಾವಣೆಯಲ್ಲಿ ದುರಾದೃಷ್ಟವಶಾತ್ ನಾನು ಸೋತೆ, ನನ್ನ ಪಕ್ಷ ನಿಷ್ಠೆಯಿಂದಾಗಿ ನಾನು ಡಿಸಿಎಂ ಆಗಿದ್ದೇನೆ, ನಾನು ಈ ಹುದ್ದೆಯಲ್ಲಿ ಮುಂದುವರೆಯಲು ಇನ್ನೂ 5 ತಿಂಗಳು ಸಮಯವಿದೆ ಎಂದು ಹೇಳಿದ್ದಾರೆ.

ಇದು ಬಿಜೆಪಿ ಹೈಕಮಾಂಡ್  ನಿರ್ದೇಶನದಂತೆ ನಾನು ವಿಧಾನ ಪರಿಷತ್ ಸದಸ್ಯನಾಗುವ ಮೂಲಕ ಶಾಸನಸಭೆಗೆ ಪ್ರವೇಶಿಸುತ್ತೇನೆ, ಎರಡು ಎಂಎಲ್ ಸಿ ಸ್ಥಾನಗಳು ಖಾಲಿ ಇವೆ, ಶೀಘ್ರವೇ ಆದರ ಆಯ್ಕೆ ನಡೆಯಲಿದೆ ಎಂದು ತಿಳಿಸಿದ್ದಾರೆ.

ಅಥಣಿ ವಿಧಾನಸಭೆ ಕ್ಷೇತ್ರದಿಂದ ಲಕ್ಷ್ಮಣ ಸವದಿ ಸ್ಪರ್ಧಿಸುತ್ತಾರೆ ಎಂದು ಅನರ್ಹ ಶಾಸಕ ಮಹೇಶ್ ಕುಮಟಳ್ಳಿ  ಆತಂಕಕ್ಕೊಳಗಾಗಿದ್ದರು, ಈ ಸಂಬಂಧ ಸವದಿ ಸ್ಪಷ್ಟನೆ ನೀಡಿದ್ದಾರೆ,

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT