ವೆಂಕಟರಾವ್ ನಾಡಗೌಡ 
ರಾಜಕೀಯ

ಸರ್ಕಾರ ನಿಭಾಯಿಸಲಾಗದ ಯಡಿಯೂರಪ್ಪ ದಿಕ್ಕು ತಪ್ಪಿದ ಮಗನಂತಾಗಿದ್ದಾರೆ: ನಾಡಗೌಡ 

ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ನಿಭಾಯಿಸಲಾಗದೆ ದಿಕ್ಕು ತಪ್ಪಿದ ಮಗನಂತಾಗಿದ್ದಾರೆ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಸರ್ಕಾರವನ್ನು ನಿಭಾಯಿಸಲಾಗದೆ ದಿಕ್ಕು ತಪ್ಪಿದ ಮಗನಂತಾಗಿದ್ದಾರೆ ಎಂದು ಮಾಜಿ ಸಚಿವ ವೆಂಕಟರಾವ್ ನಾಡಗೌಡ ವಾಗ್ದಾಳಿ ನಡೆಸಿದ್ದಾರೆ.

ಜೆಡಿಎಸ್ ಕೇಂದ್ರ ಕಚೇರಿ ಜೆ. ಪಿ. ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ನೆರೆಯಿಂದ ಸಾಕಷ್ಟು ಹಾನಿಯುಂಟಾಗಿದ್ದು, ರೈತರ ಬದುಕು ನಾಶವಾಗಿದೆ. ಹೀಗಾಗಿ ದೇವೇಗೌಡರ ನೇತೃತ್ವದಲ್ಲಿ ಸರ್ಕಾರದ ವೈಫಲ್ಯತೆಯನ್ನು ಖಂಡಿಸಿ, ಪ್ರತಿಭಟನೆ ನಡೆಸುವ ಮೂಲಕ ಸರ್ಕಾರದ ಗಮನ ಸೆಳೆಯುತ್ತೇವೆ ಎಂದರು.

ಮೈತ್ರಿ ಸರ್ಕಾರದ ಸಂದರ್ಭದಲ್ಲಿ ರಾಜ್ಯದಲ್ಲಿ ತಲೆದೋರಿದ್ದ ನೆರೆ ಪರಿಸ್ಥಿತಿಗೆ ಕೇಂದ್ರದಿಂದ ಈಗ ಅನುದಾನ ಬಿಡುಗಡೆ ಆಗಿದೆ. ಕುಮಾರಸ್ವಾಮಿ ಸರ್ಕಾರದಲ್ಲಿ ಅನುದಾನ ಬಿಡುಗಡೆ ಮಾಡದೆ ಈಗ ಬಿಜೆಪಿ ಸರ್ಕಾರದಲ್ಲಿ ಬಿಡುಗಡೆ ಮಾಡಿದೆ ಎಂದು ಅವರು ಟೀಕಿಸಿದರು.

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ಗಮನಿಸಿದರೆ ಸರ್ಕಾರದಲ್ಲಿ ಏನೇನು ನಡೆಯುತ್ತಿದೆ ಎನ್ನುವುದು ಸ್ಪಷ್ಟವಾಗುತ್ತದೆ. ರೈತರ ಪರ ಮಾತಾಡಿದವರಿಗೆ ನೊಟೀಸ್ ನೀಡುತ್ತಿದ್ದಾರೆ.ಮೈತ್ರಿ ಸರ್ಕಾರದಲ್ಲಿನ ಯೋಜನೆಗಳಿಗೆ ತಡೆ ನೀಡಲಾಗಿದೆ. ತಮ್ಮ ಕ್ಷೇತ್ರದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮಂಜೂರಾಗಿದ್ದ ನೂರು ಕೋಟಿ ರೂ. ಅನುದಾನ ನಿಲ್ಲಿಸಲಾಗಿದೆ. ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿ ಸರ್ಕಾರವನ್ನು  ಸರಿಯಾಗಿ ನಿಭಾಯಿಸಲು ಸಾಧ್ಯವಾಗದೇ ಅವರು ದಿಕ್ಕುತಪ್ಪುತ್ತಿದ್ದಾರೆ ಎಂದರು.

ವಿಪಕ್ಷ ಶಾಸಕರ ಕ್ಷೇತ್ರಗಳಿಗೆ ತಡೆಯೊಡ್ಡಿರುವ ಹಣವನ್ನ ಯಾರಿಗೆ ಕೊಟ್ಟಿದ್ದಾರೆ, ಎಲ್ಲಿಗೆ ಹೋಗುತ್ತಿದೆ ಎನ್ನುವ  ಮಾಹಿತಿಯೇ ಇಲ್ಲ .
ಇದರ ವಿರುದ್ಧ ಸದನದಲ್ಲಿ ಧ್ವನಿಯೆತ್ತಲಾಗುವುದು ಎಂದರು. ಸದನದಲ್ಲಿ ವಿಪಕ್ಷಗಳ ಹೋರಾಟವನ್ನು ಎದುರಿಸಲಾಗದೆ  ಮಾಧ್ಯಮ ನಿರ್ಬಂಧ ಮಾಡಲಾಗಿದೆ. ಕಲಾಪವನ್ನು ಎದುರಿಸುವ ನೈತಿಕತೆ ಬಿಜೆಪಿಗೆ ಇಲ್ಲ ಎಂದು ಹರಿಹಾಯ್ದರು. 

ಮೇಲ್ಮನೆ‌ ಸದಸ್ಯ  ಶರವಣ ಮಾತನಾಡಿ,‌ ಮುಖ್ಯಮಂತ್ರಿ ಯಡಿಯೂರಪ್ಪ ಒಮ್ಮೆ ತಂತಿ ಮೇಲಿನ ನಡಿಗೆ ಎನ್ನುತ್ತಾರೆ. ಅವರ ಶಾಸಕರ ಬಾಯಲ್ಲೇ ಸರ್ಕಾರ ಬೀಳಿಸುವ ಮಾತು ಕೇಳಿ ಬರುತ್ತಿದೆ. ತಂತಿ ತುಂಡಾಗಿ ಯಡಿಯೂರಪ್ಪ ಯಾವಾಗ ಬೀಳುತ್ತಾರೆಯೋ ಗೊತ್ತಿಲ್ಲ ಎಂದು ಲೇವಡಿ ಮಾಡಿದರು.

ಮಾಧ್ಯಮಗಳು ಪ್ರಜಾಪ್ರಭುತ್ವ ದ ಒಂದು ಅಂಗ. ಅಂದು ಎಚ್.ಡಿ. ಕುಮಾರಸ್ವಾಮಿ ಮಾಧ್ಯಮ ನಿರ್ಬಂಧ ಮಾಡಲು ಹೊರಟಾಗ ಯಡಿಯೂರಪ್ಪ ಏನು ಹೇಳಿದ್ದರು ? ಎನ್ನುವುದನ್ನು ಅವರು ಒಮ್ಮೆ ನೆನಪಿಸಿಕೊಳ್ಳಬೇಕು ಎಂದು ತಿರುಗೇಟು ನೀಡಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

SCROLL FOR NEXT