ಪ್ರವೀಣ್ ತೊಗಾಡಿಯಾ 
ರಾಜಕೀಯ

ಮಂಗಳೂರು: ಪಾಲಿಕೆ ಚುನಾವಣೆಯಲ್ಲಿ ತೊಗಾಡಿಯಾ'ಸ್ಥಾಪಿತ ಹಿಂದೂಸ್ತಾನ್ ನಿರ್ಮಾಣ್ ದಳ ಕಣಕ್ಕೆ 

ಮುಂಬರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪ್ರವೀಣ್ ತೊಗಾಡಿಯಾ ಸ್ಥಾಪಿತ ಹೊಸ  ರಾಜಕೀಯ ಪಕ್ಷ  ಹಿಂದೂಸ್ತಾನ್ ನಿರ್ಮಾಣ ದಳ ಕಣಕ್ಕಿಳಿಯಲಿದೆ

ಮಂಗಳೂರು: ಮುಂಬರುವ ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪ್ರವೀಣ್ ತೊಗಾಡಿಯಾ ಸ್ಥಾಪಿತ ಹೊಸ  ರಾಜಕೀಯ ಪಕ್ಷ  ಹಿಂದೂಸ್ತಾನ್ ನಿರ್ಮಾಣ ದಳ ಕಣಕ್ಕಿಳಿಯಲಿದೆ. ಚುನಾವಣೆಯ ವೇಳಾಪಟ್ಟಿ ಇನ್ನೂ ಪ್ರಕಟಗೊಂಡಿಲ್ಲ.

ಪೋಷಕ ಸಂಘಟನೆ ಅಂತಾರಾಷ್ಟ್ರೀಯ ಹಿಂದೂ ಪರಿಷದ್ ನ ಭಾಗವಾಗಿರುವ ಹಿಂದೂಸ್ತಾನ್ ನಿರ್ಮಾಣ್ ದಳದ ಪದಾಧಿಕಾರಿಗಳು   ಮಂಗಳೂರು ಮಹಾನಗರ ಪಾಲಿಕೆ ಚುನಾವಣೆ ಸಂಬಂಧ ಚರ್ಚೆ ನಡೆಸಲಿದ್ದಾರೆ.60 ಸದಸ್ಯ ಬಲದ ಪಾಲಿಕೆಯಲ್ಲಿ ಎಷ್ಟು ಅಭ್ಯರ್ಥಿಗಳನ್ನು ಹಾಕಬೇಕೆಂಬ ಬಗ್ಗೆ ಮುಖಂಡರು  ಮೊದಲಿಗೆ ಚರ್ಚೆ ನಡೆಸಲಿದ್ದಾರೆ ಎಂದು ಪಕ್ಷದ ರಾಜ್ಯದ ಉಸ್ತುವಾರಿ ಪ್ರವೀಣ್ ವಾಲ್ಕೆ ತಿಳಿಸಿದ್ದಾರೆ.

ಕಳೆದ ಲೋಕಸಭಾ ಚುನಾವಣೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬಿಜೆಪಿ ಜಯಬೇರಿ ಭಾರಿಸಿದ್ದು, ಹಿಂದೂಸ್ತಾನ್ ನಿರ್ಮಾಣ್ ದಳವನ್ನು ಯುವಕರು ಬೆಂಬಲಿಸಲಿದ್ದಾರೆ ಎಂಬ ವಿಶ್ವಾಸ  ವ್ಯಕ್ತಪಡಿಸಿರುವ  ಪ್ರವೀಣ್ ವಾಲ್ಕೆ,  ನಮ್ಮ ಪಕ್ಷ ಸಾಮರ್ಥ್ಯವನ್ನು ಸಾಬೀತುಪಡಿಸಲು ಇದು ಸರಿಯಾದ ವೇಳೆಯಾಗಿದೆ ಎಂದಿದ್ದಾರೆ. 

ಹೊಸ ಪಕ್ಷವಾಗಿರುವುದರಿಂದ ಪ್ರಾಯೋಗಿಕವಾಗಿ 30 ಅದಕ್ಕಿಂತಲೂ ಹೆಚ್ಚಿನ ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನು ಚುನಾವಣಾ ಕಣಕ್ಕಿಳಿಸಲಾಗುವುದು, ಯಾವುದೇ ಪಕ್ಷದೊಂದಿಗೆ ಮೈತ್ರಿ ಮಾಡಿಕೊಳ್ಳುವುದಿಲ್ಲ, ಜಿಲ್ಲಾ ಘಟಕಗಳಲ್ಲಿ ಪಕ್ಷ ಸಂಘಟನೆ ಕಾರ್ಯವನ್ನು ರೂಪಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆ: ಒಂದಾದ ಜಾರಕಿಹೊಳಿ ಬ್ರದರ್ಸ್‌ಗೆ ಜಾಕ್‌ಪಾಟ್; ರಮೇಶ್ ಕತ್ತಿ ಬಣಕ್ಕೆ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

SCROLL FOR NEXT