ಸಂಗ್ರಹ ಚಿತ್ರ 
ರಾಜಕೀಯ

ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು: ಸಿದ್ದರಾಮಯ್ಯ ಲೇವಡಿ

ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಿಎಸ್ ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು ಎಂದು ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದಲ್ಲಿರುವ ಬಿಎಸ್ ಯಡಿಯೂರಪ್ಪ ಬಿಜೆಪಿ ನಾಯಕರೇ ಒಪ್ಪದ ಕೂಸು ಎಂದು ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ.

ಗುರುವಾರ ನೆರೆ ಪರಿಸ್ಥಿತಿ ಕುರಿತ ಚರ್ಚೆ ವೇಳೆ ಮಾತನಾಡಿದ ಅವರು, 'ರಾಜ್ಯದಲ್ಲಿ ಹಿಂದೆಂದೂ ಕಾಣದ ಪ್ರವಾಹ ಪರಿಸ್ಥಿತಿ ಉಂಟಾಗಿದರೂ ಸಮಪರ್ಕವಾದ ಪರಿಹಾರ ನೀಡದೆ ಕೇಂದ್ರ ಸರ್ಕಾರವು ರಾಜ್ಯಕ್ಕೆ ಅನಾಯ ಎಸಗಿದ್ದು, 56 ಇಂಚು ಎದೆವುಳ್ಳ ಪ್ರಧಾನಿಗೆ ತಾಯಿ ಹೃದಯ ಇಲ್ಲವಲ್ಲ ಎಂಬುದೇ ನೋವಿನ ಸಂಗತಿ.ರಾಜ್ಯಕ್ಕೆ ಬಂದು ಪ್ರವಾಹ ಪರಿಸ್ಥಿತಿ ಕುರಿತು ಪ್ರಧಾನಿ ನರೇಂದ್ರ ಮೋದಿ ಸಮೀಕ್ಷೆ ನಡೆಸಬೇಕು ಎಂದು ಆಗ್ರಹಿಸಿದರು.

'ಪ್ರಧಾನಿಯವರು 56 ಇಂಚು ಎದೆ ಇದೆ ಎಂದು ಹೇಳಿಕೊಳ್ಳುತ್ತಾರೆ. ಪೈಲ್ವಾನ್, ಬಾಡಿಬಿಲ್ಡರ್‌ಗಳಿಗೂ ಎದೆ ಇರುತ್ತದೆ. ಆದರೆ, ಆ ಎದೆಯಲ್ಲಿ ತಾಯಿ ಹೃದಯ ಇಲ್ಲವಲ್ಲ ಎಂಬುದೇ ಬೇಸರ. ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಹಿಂದೆಂದೂ ಕಾಣದ ನೆರೆ ಎದುರಾದರೂ ಸಮರ್ಪಕವಾದ ಪರಿಹಾರ ನೀಡದೆ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ. ಪ್ರಧಾನಿಗಳು ವಿದೇಶ ಪ್ರವಾಸ ಕೈಗೊಳ್ಳಲು ಅಭ್ಯಂತರ ಇಲ್ಲ. ಆದರೆ, ಯಾವುದಕ್ಕೆ ಆದ್ಯತೆ ನೀಡಬೇಕು ಎಂಬುದು ಗೊತ್ತಿರಬೇಕು. ವಿದೇಶಕ್ಕೆ ಹೋಗದಿದ್ದರೆ ಪ್ರಳಯವಾಗುವುದಿಲ್ಲ. ಅದನ್ನು ಮುಂದೂಡಬಹುದು. ಪ್ರವಾಹದಿಂದ ಲಕ್ಷಾಂತರ ಕುಟುಂಬಗಳ ಬದುಕು ಬೀದಿಗೆ ಬಿದ್ದಿದೆ. ಈ ಬಗ್ಗೆ ಗಮನ ಹರಿಸಬೇಕಿತ್ತಲ್ಲವೇ?' ಎಂದು ಅವರು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT