ರಾಜಕೀಯ

ಐಟಿ ದಾಳಿ ರಾಜಕೀಯ ಪ್ರೇರಿತ: ದೇವೇಗೌಡ

Manjula VN

ಮೈಸೂರು: ಮಾಜಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಹಾಗೂ ಮಾಜಿ ಸಚಿವ ಆರ್.ಎಲ್.ಜಾಲಪ್ಪ ನಿವಾಸಗಳು ಹಾಗೂ ಕಚೇರಿ ಮೇಲೆ ನಡೆದ ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ಮಾಜಿ ಪ್ರಧಾನಮಂತ್ರಿ ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ. 

ಮಾಧ್ಯಮಗಳೊಂದಿಗೆ ಮಾತನಾಡಿರುವ ಅವರು, ಐಟಿ ದಾಳಿ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ವಿರುದ್ಧ ತೀವ್ರವಾಗಿ ಕಿಡಿಕಾರಿದ್ದಾರೆ. 

ಕೇಂದ್ರದ ಮೋದಿ ಸರ್ಕಾರ ಐಟಿ ಹಾಗೂ ಇಡಿ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಬಿಜೆಪಿಯವರೇನು ಮುಗ್ದರೇ? ರಾಜಕೀಯದಲ್ಲಿ ಯಾರೂ ಪರಿಪೂರ್ಣರಲ್ಲ ಎಂದು ಹೇಳಿದ್ದಾರೆ. 

ತಮ್ಮ ತಂದೆಯವರು ನಡೆಸುತ್ತಿದ್ದ ಹಲವಾರು ಶಿಕ್ಷಣ ಸಂಸ್ಥೆಗಳನ್ನು ಪರಮೇಶ್ವರ ಅವರು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಸಿಕ್ಕಿರುವ ರೂ.6 ಕೋಟಿ ಹಣ ಪರಮೇಶ್ವರ ಅವರ ತಂದೆ ಸಂಪಾದನೆ ಮಾಡಿದ್ದು. ರಾತ್ರೋರಾತ್ರಿ ಏನು ಅವರು ಆಸ್ತಿಯನ್ನು ಕಬಳಿಸಿಲ್ಲ ಎಂದು ತಿಳಿಸಿದ್ದಾರೆ. 

SCROLL FOR NEXT