ರಾಜಕೀಯ

ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸಲ್ಲ: ದೇವೇಗೌಡ

Manjula VN

ಮೈಸೂರು: ವಿಧಾನಸಭಾ ಉಪ ಚುನಾವಣೆಯಲ್ಲಿ ನಮ್ಮ ಕುಟುಂಬದಿಂದ ಯಾರೂ ಸ್ಪರ್ಧಿಸುವುದಿಲ್ಲ ಎಂದು ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೇಗೌಡ ಅವರು ಶುಕ್ರವಾರ ಹೇಳಿದ್ದಾರೆ. 

ಹುಣಸೂರು ತಾಲೂಕಿನ ಗಡ್ಡಿಗೆ ಪಕ್ಷದ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡಿದ ಅವರು, ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಬಿಜೆಪಿ ನೇತೃತ್ವದ ಸರ್ಕಾರ ಮತ್ತೆ ರಾಜ್ಯದಲ್ಲಿ ಚುನಾವಣೆ ಎದುರಾಗುವಂತೆ ಮಾಡಲಿದೆ. 17 ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ನಡೆಯುವುದೂ ಕೂಡ ಸಂಶಯವೇ ಎಂದು ಹೇಳಿದ್ದಾರೆ. 

ಸುಪ್ರೀಂಕೋರ್ಟ್ ಆದೇಶದ ಬಳಿಕವೇ ಉಪ ಚುನಾವಣೆಯೇ ಅಥವಾ ವಿಧಾನಸಭಾ ಚುನಾವಣೆ ನಡೆಯಲಿದೆಯೇ ಎಂಬುದನ್ನು ಊಹಿಸಲು ಸಾಧ್ಯ. ಹುಣಸೂರು ಕ್ಷೇತ್ರದಿಂದ ನಮ್ಮ ಕುಟುಂಬದ ಯಾರೊಬ್ಬರೂ ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಪ್ರಜ್ವಲ್ ರೇವಣ್ಣ ಈಗಾಗಲೇ ಸಂಸದರಾಗಿದ್ದು, ಚುನಾವಣೆಯಲ್ಲಿ ಅವರು ಸ್ಪರ್ಧಿಸುವುದಿಲ್ಲ. ಉಪ ಚುನಾವಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಕೂಡ ಸ್ಪರ್ಧಿಸುವುದಿಲ್ಲ. ಸ್ಥಳೀಯ ನಾಯಕರನ್ನು ಸ್ಪರ್ಧೆಗಿಳಿಸಲಾಗುವುದು ಎಂದು ತಿಳಿಸಿದ್ದಾರೆ.

SCROLL FOR NEXT