ರಾಜಕೀಯ

ಕಾಂಗ್ರೆಸ್ ನಾಯಕರನ್ನು ಗುರಿ ಮಾಡಲು ಬಿಜೆಪಿ ಐಟಿ ಇಲಾಖೆ ಬಳಸುತ್ತಿದೆ: ಸಿದ್ದರಾಮಯ್ಯ

Manjula VN

ಬೆಂಗಳೂರು: ಮಾಜಿ ಉಪ ಮುಖ್ಯಮಂತ್ರಿ ಜಿ.ಪರಮೇಶ್ವರ್ ಅವರ ಆಪ್ತ ಸಹಾಯಕ ಆತ್ಮಹತ್ಯೆಗೆ ಶರಣಾಗಿರುವ ಹಿನ್ನಲೆಯಲ್ಲಿ ರಾಜ್ಯದ ಆಡಳಿತಾರೂಢ ಬಿಜೆಪಿ ಸರ್ಕಾರದ ವಿರುದ್ಧ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಶನಿವಾರ ತೀವ್ರವಾಗಿ ಕಿಡಿಕಾರಿದ್ದಾರೆ. 

ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಆತ್ಮಹತ್ಯೆಗೂ ಮುನ್ನ ರಮೇಶ್ ಮಾಧ್ಯಮಗಳೊಂದಿಗೆ ಮಾತನಾಡಿದ್ದಾರೆ. ಐಟಿ ಅಧಿಕಾರಿಗಳು ತೀವ್ರವಾಗಿ ಪ್ರಶ್ನಿಸುತ್ತಿದ್ದು, ಕಿರುಕುಳ ತಾಳಲಾರದೆ ಆತ್ಮಹತ್ಯೆಗೆ ಶರಣಾಗುತ್ತಿದ್ದೇನೆಂದು ಹೇಳಿಕೊಂಡಿದ್ದಾರೆ. ಕಾಂಗ್ರೆಸ್ ನಾಯಕರನ್ನು ಗುರಿ ಮಾಡಲು ಬಿಜೆಪಿ ಐಟಿ ಇಲಾಖೆಯನ್ನು ಬಳಸಿಕೊಳ್ಳುತ್ತಿದೆ. ಕಾಂಗ್ರೆಸ್ ನಾಯಕರಷ್ಟೇ ಶಿಕ್ಷಣ ಸಂಸ್ಥೆಗಳನ್ನು ನಡೆಸುತ್ತಿದ್ದಾರೆಯೇ? ಬಿಜೆಪಿ ನಾಯಕರು ಯಾವುದೇ ಸಂಸ್ಥೆಗಳನ್ನು ನಡೆಸುತ್ತಿಲ್ಲವೇ? ಎಂದು ಪ್ರಶ್ನಿಸಿದ್ದಾರೆ. 

ಇದರಂತೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಮಾತನಾಡಿ, ಐಟಿ ದಾಳಿ ರಾಜಕೀಯ ಪ್ರೇರಿತ ಎಂದು ತಿಳಿಸಿದ್ದಾರೆ. ಐಟಿ ದಾಳಿ ಅನಾಗರಿಕವಾಗಿದ್ದು, ಕಿರುಕುಳ ತಾಳಲಾರದೆ ರಮೇಶ್ ಆತ್ಮಹತ್ಯೆಗೆ ಶರಣಾಗಿದ್ದಾರೆಂದು ಹೇಳಿದ್ದಾರೆ. 

SCROLL FOR NEXT