ನಳಿನ್ ಕುಮಾರ್ ಕಟೀಲ್ 
ರಾಜಕೀಯ

ನೋಟಿಸ್‌ಗೆ ಪ್ರತಿಕ್ರಿಯಿಸದ ಬಿಜೆಪಿ ಶಾಸಕ ಯತ್ನಾಳ್‌ಗೆ ಕಟೀಲ್ ಎಚ್ಚರಿಕೆ

ಪಕ್ಷದ ಶಿಸ್ತು ಸಮಿತಿ ನೀಡುವ ಪ್ರತಿ ನೋಟಿಸ್‌ಗೆ ಉತ್ತರಿಸುವುದು ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತರ ಕರ್ತವ್ಯ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.

ಯಾದಗಿರಿ: ಪಕ್ಷದ ಶಿಸ್ತು ಸಮಿತಿ ನೀಡುವ ಪ್ರತಿ ನೋಟಿಸ್‌ಗೆ ಉತ್ತರಿಸುವುದು ಪ್ರತಿಯೊಬ್ಬ ಪಕ್ಷದ ಕಾರ್ಯಕರ್ತರ ಕರ್ತವ್ಯ ಎಂದು ಬಿಜೆಪಿ ರಾಜ್ಯ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹೇಳಿದರು.
  
ವಿಜಯಪುರದ ಬಿಜೆಪಿ ಶಾಸಕ ಬಸವರಾಜ್ ಪಾಟೀಲ್ ಯತ್ನಾಳ್‌ ಅವರು ಪ್ರವಾಹ ಪರಿಹಾರಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಟ್ವೀಟ್ ಮಾಡಿದ್ದಕ್ಕಾಗಿ ಅವರಿಗೆ ಪಕ್ಷ ನೀಡಿದ್ದ ಶೋಕಾಸ್‌ ನೋಟಿಸ್‌ಗೆ ಸ್ಪಂದಿಸದ ಬೆನ್ನಲ್ಲೇ ಕಟೀಲ್‌ ಈ ಹೇಳಿಕೆ ನೀಡಿದ್ದಾರೆ. 
  
ಸುದ್ದಿಗಾರರೊಂದಿಗೆ ಮಾತನಾಡಿದ ಕಟೀಲ್, ಯತ್ನಾಳ್‌ ಅವರ ಚಟುವಟಿಕೆಗಳನ್ನು ರಾಷ್ಟ್ರೀಯ ನಾಯಕತ್ವದಿಂದ ಮೇಲ್ವಿಚಾರಣೆ ಮಾಡಲಾಗುತ್ತದೆ ಮತ್ತು ಚೆಂಡು ಅವರ ಕೈಯ್ಯಲ್ಲಿರುವುದರಿಂದ ಯಾವ ಕ್ರಮ ಬೇಕು ಎಂದು ಅವರು ನಿರ್ಧರಿಸುತ್ತಾರೆ. ಒಂದು ವೇಳೆ
ನೋಟಿಸ್‌ಗೆ ಪ್ರತಿಕ್ರಿಯಿಸಲು ಯತ್ನಾಳ್‌ ವಿಫಲವಾದರೆ ಕ್ರಮ ತೆಗೆದುಕೊಳ್ಳಬಹುದು ಎಂದರು. ಅಲ್ಲದೆ ನೋಟಿಸ್‌ಗೆ ಪ್ರತಿಕ್ರಿಯಿಸಿದಿರುವುದು ದುರಹಂಕಾರವಾಗುತ್ತದೆ ಎಂದು ಕಟೀಲ್‌ ಹೇಳಿದರು.
  
ಕಳೆದ ವಾರ ರಾಜ್ಯದ ಪ್ರವಾಹ ಪರಿಸ್ಥಿತಿಯ ಬಗ್ಗೆ ಕೇಂದ್ರದ ‘ಅಸಡ್ಡೆ ವರ್ತನೆ’ಯನ್ನು ಯತ್ನಾಳ್‌ ಟೀಕಿಸಿ ತಮ್ಮದೇ ಪಕ್ಷವನ್ನು ಮುಜುಗರಕ್ಕೀಡು ಮಾಡಿದ್ದರು. ಇದರ ಬೆನ್ನಲ್ಲೇ ಪಕ್ಷದ ಶಿಸ್ತಿನ ಸಮಿತಿಯು ನೋಟಿಸ್ ನೀಡಿದ್ದು, ಬಿಜೆಪಿಯ ಶಿಸ್ತಿನ ಮಾನದಂಡಗಳನ್ನು ಉಲ್ಲಂಘಿಸಿದೆ ಎಂದು ಆರೋಪಿಸಿದ್ದು, ಕ್ರಮಕ್ಕೆ ಉತ್ತರ ಕೋರಿತ್ತು.

ಪ್ರಶ್ನೆಯೊಂದಕ್ಕೆ ಉತ್ತರಿಸಿದ ಕಟೀಲ್, 'ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಹಿರಿಯ ನಾಯಕ ಮತ್ತು ಅವರು ಮತ್ತು ನನ್ನ ನಡುವೆ ಯಾವುದೇ ತಪ್ಪು ತಿಳುವಳಿಕೆ ಅಥವಾ ಭಿನ್ನಾಭಿಪ್ರಾಯಗಳಿಲ್ಲ' ಎಂದರು.

ಡಿಕೆ ಶಿವಕುಮಾರ್ ಜಾಮೀನು ಅರ್ಜಿ ತೀರ್ಪು ಕಾಯ್ದಿರಿಸಿದ ದೆಹಲಿ ಹೈಕೋರ್ಟ್

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT