ಸುಮಲತಾ 
ರಾಜಕೀಯ

ಜಿಲ್ಲೆಯ ಎಲ್ಲಾ ಸಮಸ್ಯೆಗಳನ್ನು ಸುಮಲತಾ ಬಗೆಹರಿಸುತ್ತಿದ್ದಾರೆ: ಅನ್ನದಾನಿ ವ್ಯಂಗ್ಯ

ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ನಾವೆಲ್ಲಾ ಓಡಾಡುತ್ತಿದ್ದೇವೆ. ನಾವು ಏನೂ ಕೆಲಸ ಮಾಡುತ್ತಾ ಇಲ್ಲ ಎಂದು ಜೆಡಿಎಸ್​ ಶಾಸಕ ಅನ್ನದಾನಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ತಿರುಗೇಟು ನೀಡಿದ್ದಾರೆ.

ಮಂಡ್ಯ: ಬಿಳಿ ಪಂಚೆ, ಶರ್ಟ್ ಹಾಕಿಕೊಂಡು ನಾವೆಲ್ಲಾ ಓಡಾಡುತ್ತಿದ್ದೇವೆ. ನಾವು ಏನೂ ಕೆಲಸ ಮಾಡುತ್ತಾ ಇಲ್ಲ ಎಂದು ಜೆಡಿಎಸ್​ ಶಾಸಕ ಅನ್ನದಾನಿ ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಗೆ ತಿರುಗೇಟು ನೀಡಿದ್ದಾರೆ.

ಮಳವಳ್ಳಿಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಿನ ನಿತ್ಯ ಜನರ ಕಷ್ಟ ಸುಖವನ್ನು ಸುಮಲತಾ ಅವರೇ ಕೇಳುತ್ತಿದ್ದಾರೆ. ತಾಲೂಕು ಕಚೇರಿ,ಪೊಲೀಸ್ ಠಾಣೆ ಎಲ್ಲೇ ಕೆಲಸ ಇದರೂ ಅವರೇ ಮಾಡುತ್ತಿದ್ದಾರೆ. ಕೆರೆ ತುಂಬಿಸಿದ್ದು, ಪಿಂಚಿಣಿ ಕೊಡಿಸುತ್ತಿರುವುದು ಮೇಡಂ ಸುಮಲತಾ ಅವರೇ .ಜಗಳವಾದರೂ ಬಿಡಿಸಿ ಬುದ್ದಿ ಹೇಳುತ್ತಾ ಇರುವುದೂ ಅವರೇ ಎಂದು ಅವರು ವ್ಯಂಗ್ಯ ಭರಿತ ತಿರುಗೇಟು ನೀಡಿದ್ದಾರೆ.

ಮಂಡ್ಯದಲ್ಲಿ ನಮ್ಮದೇನಿದೆ, ಮಳವಳ್ಳಿಯ ಕೆರೆಗಳಿಗೆ ನೀರು ತುಂಬಿಸುತ್ತಾ ಇರೋದೇ ಸುಮಲತಾ ಮೇಡಂ ಎಂದು ವ್ಯಂಗ್ಯವಾಡಿದ್ದಾರೆ. ಮಂಡ್ಯದಲ್ಲಿ ಪಕ್ಷೇತರ ಅಭ್ಯರ್ಥಿಯಾಗಿ ನಾನು ಗೆದ್ದೆ ಎಂದು, ಎಂಟು ಜನ ಶಾಸಕರು ಕೆಲಸ ಮಾಡಬಾರದು ಎನ್ನುವ ಕಾನೂನು ಏನಾದರೂ ಇದೆಯಾ" ಎಂದು ಸುಮಲತಾ, ಎರಡು ದಿನಗಳ ಹಿಂದೆ ಹೇಳಿಕೆಯನ್ನು ನೀಡಿದ್ದರು.
 
ಇದಕ್ಕೆ ಪ್ರತಿಕ್ರಿಯಿಸಿದ ಅನ್ನದಾನಿ, "ಕೆರೆಗೆ ನೀರು ತುಂಬಿಸುವುದು ಅವರೇ, ಕೆರೆಗೆ ಪೂಜೆ ಮಾಡುವುದೂ ಅವರೇ.. ನಮ್ಮದೇನಿದ್ದರೂ, ಊಟಮಾಡಿಕೊಂಡು ಹಾಯಾಗಿ ತಿರುಗಾಡಿಕೊಂಡಿರುವುದು" ಎಂದು ಹೇಳಿದ್ದಾರೆ.

"ಇಡೀ ನಮ್ಮ ಮಳವಳ್ಳಿ ತಾಲೂಕಿನ ಕೆಲಸಗಳನ್ನೆಲ್ಲಾ ಅವರೇ ತಮ್ಮ ಹೆಗಲ ಮೇಲೆ ಹಾಕಿಕೊಂಡು ಮಾಡಿಕೊಂಡು ಬರುತ್ತಿದ್ದಾರೆ. ನಾವೇನೂ ಇಲ್ಲಿ ಕೆಲಸಕಾರ್ಯಗಳನ್ನು ಮಾಡುತ್ತಿಲ್ಲ" ಎಂದು ಅನ್ನದಾನಿ ವ್ಯಂಗ್ಯವಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

US ವಲಸೆ ನೀತಿ ಮತ್ತಷ್ಟು ಕಠಿಣ: ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!