ರಾಜಕೀಯ

ಮಾಜಿ ಸಿಎಂ ಸಿದ್ದರಾಮಯ್ಯಗೆ ಸ್ವಾತಂತ್ರ್ಯ ಹೋರಾಟದ ಗಂಧಗಾಳಿ ಗೊತ್ತಿಲ್ಲ: ರವಿಕುಮಾರ್

Manjula VN

ಕಲಬುರಗಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಾತಂತ್ರ್ಯ ಹೋರಾಟದ ಗಂಧಗಾಳಿ ಗೊತ್ತಿಲ್ಲ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ರವಿಕುಮಾರ್ ಕಿಡಿಕಾರಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವೀರ್ ಸಾವರ್ಕರ್ ಅವರಿಗೆ ಭಾರತ ರತ್ನ ಕೊಡಬೇಕೆಂಬ ಚರ್ಚೆ ನಡೆಯುತ್ತಿದೆ. ಆದರೆ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧೀಜಿ ಹತ್ಯೆಗೆ ಸಾವರ್ಕರ್ ಸಂಚು ರೂಪಿಸಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಸಿದ್ದರಾಮಯ್ಯ ಅವರೇನು ಹತ್ಯೆಗೆ ಸಂಚು ರೂಪಿಸಿದ್ದರ ಬಗ್ಗೆ ಅಧ್ಯಾಯನ ಮಾಡಿದ್ದಾರಾ? ಎಂದು ಅವರು ಪ್ರಶ್ನಿಸಿದರು‌.

ಮಹಾತ್ಮ ಗಾಂಧಿ ಅವರ ಹತ್ಯೆಯಲ್ಲಿ ವೀರ್ ಸಾವರ್ಕರ್, ಆರ್ ಎಸ್ ಎಸ್ ಪಾತ್ರ ಇಲ್ಲ ಎಂದು ನ್ಯಾಯಾಲಯವೇ ಸ್ಪಷ್ಟಪಡಿಸಿದೆ ಎಂದರು.

SCROLL FOR NEXT