ಸಂಸದ ಕರಡಿ ಸಂಗಣ್ಣ 
ರಾಜಕೀಯ

ಕಾಂಗ್ರೆಸ್ ನ ತಂಗಡಗಿ, ರಾಯರೆಡ್ಡಿ ಮಿಂಚಿಂಗ್ ಸ್ಟಾರ್ಸ್: ಸಂಸದ ಕರಡಿ ಸಂಗಣ್ಣ ಆರೋಪ

ಮಾಜಿ ಸಚಿವ ಶಿವರಾಜ್ ತಂಗಡಗಿ, ಬಸವರಾಜ ರಾಯರೆಡ್ಡಿ ಮಿಂಚಿಂಗ್ ಸ್ಟಾರ್ಸ್. ಸದಾ ಬೆಂಗಳೂರಿನಲ್ಲೇ ಇರುವ ಇವರು ಅಪರೂಪಕ್ಕೆ ಕ್ಷೇತ್ರದ ಕಡೆಗೆ ಮುಖ ಮಾಡುತ್ತಾರೆ. ಆದರೂ ಅವರು ಮಾಡಿ ದಬ್ಬಾಕಿದ್ದು ಏನು ಇಲ್ಲ ಎಂದು ಬಿಜೆಪಿ ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ.

ಕೊಪ್ಪಳ: ಮಾಜಿ ಸಚಿವ ಶಿವರಾಜ್ ತಂಗಡಗಿ, ಬಸವರಾಜ ರಾಯರೆಡ್ಡಿ ಮಿಂಚಿಂಗ್ ಸ್ಟಾರ್ಸ್. ಸದಾ ಬೆಂಗಳೂರಿನಲ್ಲೇ ಇರುವ ಇವರು ಅಪರೂಪಕ್ಕೆ ಕ್ಷೇತ್ರದ ಕಡೆಗೆ ಮುಖ ಮಾಡುತ್ತಾರೆ. ಆದರೂ ಅವರು ಮಾಡಿ ದಬ್ಬಾಕಿದ್ದು ಏನು ಇಲ್ಲ ಎಂದು ಬಿಜೆಪಿ ಸಂಸದ ಕರಡಿ ಸಂಗಣ್ಣ ಆರೋಪಿಸಿದ್ದಾರೆ. 

ಕ್ಷೇತ್ರಕ್ಕೆ ಬಂದರೂ ಜನರ ಸಮಸ್ಯೆ ಕೇಳೋದನ್ನ ಬಿಟ್ಟು ಮಾಧ್ಯಮದವರ ಎದುರು ಅಡ್ಡಾದಿಡ್ಡಿ ಮಾತಾಡಿ ಮಿಂಚುತ್ತಾರೆ. ಬಾಯಿಗೆ ಬಂದಂತೆ ಮಾತನಾಡಿ ಮಾಧ್ಯಮದಲ್ಲಿ ಪ್ರಚಾರ ಗಿಟ್ಟಿಸೊ ಮಿಂಚಿಂಗ್ ಸ್ಟಾರ್ಸ್ ಇವರು ಎಂದು ನವಲಿಯಿಂದ ಸಂಸದ ಕರಡಿ ಸಂಗಣ್ಣ ಹೇಳಿದ್ದಾರೆ. 

ನವಲಿಯಿಂದ ಕಾರಟಗಿಗೆ ಮಹಾತ್ಮ ಗಾಂಧಿ ಸಂಕಲ್ಪ ಪಾದಯಾತ್ರೆ ವೇಳೆ ಸಂಗಣ್ಣ ಈ ಭಾಗದಲ್ಲಿ ಸಮಾಂತರ ಜಲಾಶಯ ನಿರ್ಮಾಣ ಅಗತ್ಯವಿದೆ. ಅದಕ್ಕಿರುವ ಸಮಸ್ಯೆ ತಿಳಿಯಲು ಜನಾಭಿಪ್ರಾಯ ಸಂಗ್ರಹಿಸಲು ಈ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ ಎಂದರು.

ತಂಗಡಗಿ ಸೋತಿದ್ದಾರೆ. ಮಾಡೋಕೆ ಬೇರೆ ಕೆಲಸ ಇಲ್ಲ. ಅದಕ್ಕೆ ಆಗಾಗ್ಗೆ ಮಾಧ್ಯಮ ಎದುರು ಶೋ ಮಾಡುತ್ತಾರೆ ಎಂದು ಸಂಗಣ್ಣ ಕರಡಿ ಆರೋಪಿಸಿದ್ದಾರೆ. 

ವರದಿ: ಬಸವರಾಜ್ ಕರುಗಲ್

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ