ಬಿಜೆಪಿ ಸಭೆ 
ರಾಜಕೀಯ

ಉಪಚುನಾವಣೆಗಾಗಿ ಬಿಜೆಪಿ ನಾಯಕರ ರಣತಂತ್ರ

ಡಿಸೆಂಬರ್ 5 ರಂದು ರಾಜ್ಯದಲ್ಲಿ ನಡೆಯುವ ಉಪ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದೆ, ಅನರ್ಹ ಶಾಸಕರು ಮತ್ತು ಸ್ಥಳೀಯ ಮುಖಂಡರ ನಡುವೆ ಹೊಂದಾಣಿಕೆ ಸೃಷ್ಟಿಸುವುದು ಬಿಜೆಪಿಗೆ ಪ್ರಮುಖ ಸವಾಲಾಗಿದೆ.

ಬೆಂಗಳೂರು:  ಡಿಸೆಂಬರ್ 5 ರಂದು ರಾಜ್ಯದಲ್ಲಿ ನಡೆಯುವ ಉಪ ಚುನಾವಣೆಗೆ ಬಿಜೆಪಿ ಸಿದ್ಧತೆ ನಡೆಸಿದೆ, ಅನರ್ಹ ಶಾಸಕರು ಮತ್ತು ಸ್ಥಳೀಯ ಮುಖಂಡರ ನಡುವೆ ಹೊಂದಾಣಿಕೆ ಸೃಷ್ಟಿಸುವುದು ಬಿಜೆಪಿಗೆ ಪ್ರಮುಖ ಸವಾಲಾಗಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಹಾಗೂ ಸಿಎಂ ಯಡಿಯೂರಪ್ಪ ಸೇರಿದಂತೆ ಹಲವು ಪ್ರಮುಖ ನಾಯಕರು ಬುಧವಾರ ಬೆಂಗಳೂರಿನಲ್ಲಿ ಸಭೆ ನಡೆಸಿ ಚುನಾವಣಾ ಕಾರ್ಯತಂತ್ರದ ಬಗ್ಗೆ ಚರ್ಚಿಸಿದ್ದಾರೆ.

ಪಕ್ಷದ ಕೋರ್ ಕಮಿಟಿ ಸಭೆಯ ನಂತರ, ಹಳೆಯ ಮೈಸೂರು ಪ್ರದೇಶದ ಎಂಟು ಕ್ಷೇತ್ರಗಳಲ್ಲಿ ಉಪಚುನಾವಣೆಗಳ ತಯಾರಿ ಕುರಿತು ಚರ್ಚಿಸಲಾಗಿದೆ ಎಂದು ಸಿಎಂ ಹೇಳಿದರು. ಜೊತೆಗೆ ಎಲ್ಲಾ ನಾಯಕರು ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಕರೆ ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿ ಅಕ್ಟೋಬರ್ 26 ರಂದು ಪಕ್ಷದ ಕೋರ್ ಕಮಿಟಿ ಸಭೆ ನಡೆಯಲಿದೆ, ಉತ್ತರ ಕರ್ನಾಟಕ ಭಾಗಗಳ ವಿಧಾನ ಸಭೆ ಉಪ ಚುನಾವಣೆ ಸಿದ್ಧತೆಗಳ ಚರ್ಚೆ ನಡೆಸಲಾಗುವುದು ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದ್ದಾರೆ, 

ಕೋರ್ ಕಮಿಟಿ ಸಭೆಗೂ ಮುನ್ನ ಬೆಂಗಳೂರಿನ ಎಲ್ಲಾ ಪ್ರಮುಖ ನಾಯಕರುಗಳ ಜೊತೆ ಚರ್ಚಿಸಿ ಚುನಾವಣೆಗಾಗಿ ಸಿದ್ಧತೆ ನಡೆಸುವಂತೆ ಸೂಚಿಸಲಾಗುವುದು ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಅರವಿಂದ ಲಿಂಬಾವಲಿ  ಹೇಳಿದ್ದಾರೆ, 

ಸಭೆಯಲ್ಲಿ ಉತ್ತರ ಕರ್ನಾಟಕ ಪ್ರವಾಹ ಪರಿಸ್ಥಿತಿಯ ಬಗ್ಗೆ  ಪಕ್ಷದ ನಾಯಕರುಗಳ ಜೊತೆ ಚರ್ಚಿಸಲಾಯಿತು. ಜೊತೆಗೆ ಕೈಗೊಳ್ಳಬೇಕಾದ ಪರಿಹಾರ ಕಾರ್ಯಗಳ ಬಗ್ಗೆಯೂ ವಿವರಿಸಲಾಯಿತು. ಆದರೆ ಸಭೆಯಲ್ಲಿ ಕೆಎಸ್ ಈಶ್ವರಪ್ಪ, ಸಿಟಿ ರವಿ ಸೇರಿದಂತೆ ಹಲವು ನಾಯಕರು ಬುಧವಾರ ನಡೆದ ಸಭೆಗೆ ಗೈರಾಗಿದ್ದರು ಎಂದು ಮೂಲಗಳು ತಿಳಿಸಿವೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT