ಸಿದ್ದರಾಮಯ್ಯ 
ರಾಜಕೀಯ

ಏಪ್ರಿಲ್ ತಿಂಗಳಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ: ಸಿದ್ದರಾಮಯ್ಯ

ಇನ್ನು ಕೆಲವೇ ತಿಂಗಳುಗಳು ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಬಾಗಲಕೋಟೆ: ಇನ್ನು ಕೆಲವೇ ತಿಂಗಳುಗಳು ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದು ಮಾಜಿ ಮುಖ್ಯಮಂತ್ರಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಹೇಳಿದ್ದಾರೆ. 

ಪ್ರವಾಹ ಪರಿಸ್ಥಿತಿ ಪರಿಶೀಲನೆ ನಡೆಸುವ ಸಲುವಾಗಿ ಬಾದಾಮಿ ಕ್ಷೇತ್ರಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಯಡಿಯೂರಪ್ಪ ಸರ್ಕಾರ ಇನ್ನು ಕೆಲವೇ ತಿಂಗಳು ಮಾತ್ರ ಅಧಿಕಾರದಲ್ಲಿರಲಿದ್ದು, ಜನರು ಯಡಿಯೂರಪ್ಪ ಹಾಗೂ ಅವರ ಸರ್ಕಾರದ ಮೇಲೆ ಭರವಸೆಗಳನ್ನು ಇಟ್ಟುಕೊಳ್ಳಬಾರದು ಎಂದು ಹೇಳಿದ್ದಾರೆ. 

ಹೇಳಿಕೊಳ್ಳುವಂತಹ ಕೆಲಸಗಳನ್ನು ಬಿಜೆಪಿ ಮಾಡುತ್ತಿಲ್ಲ. ಸ್ಥಳೀಯ ಜನರು ಯಡಿಯೂರಪ್ಪ ಅವರ ಮೇಲೆ ಭರವಸೆಗಳನ್ನು ಇಟ್ಟುಕೊಳ್ಳಬಾರದು. ಆಡಳಿತಾರೂಢ ಸರ್ಕಾರ ಏಪ್ರಿಲ್ ಅಥವಾ ಮೇ ತಿಂಗಳಿನಲ್ಲಿ ಉರುಳಲಿದೆ. ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ. ಜನರ ಸಂಕಷ್ಟವನ್ನು ಪರಿಹರಿಸಲಿದೆ ಎಂದು ತಿಳಿಸಿದ್ದಾರೆ. 

ಪ್ರವಾಹ ಪೀಡಿತ ಗ್ರಾಮಗಳ ವಾಸ್ತವಿಕ ಪರಿಸ್ಥಿತಿಯನ್ನು ಯಡಿಯೂರಪ್ಪ ಅವರಿಗೆ ತಿಳಿಸಲು ನನ್ನಿಂದ ಸಾಧ್ಯವಾದಷ್ಟು ಪ್ರಯತ್ನವನ್ನು ನಾವು ಮಾಡಿದ್ದೇವೆ. ನನ್ನಿಂದ ಸಾಧ್ಯವಾದ ಕೆಲಸಗಳನ್ನೂ ನಾನು ಮಾಡಿದ್ದೇನೆ. ನೆರೆ ಪರಿಹಾರ ಕುರಿತು ಬಿಜೆಪಿ ಸರ್ಕಾರ ನಿರ್ಲಕ್ಷ್ಯ ವಹಿಸುತ್ತಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT