ಜಿಗ್ನೇಶ್‌ ಮೇವಾನಿ 
ರಾಜಕೀಯ

ಆರ್ಥಿಕ ಬಿಕ್ಕಟ್ಟು, ನಿರುದ್ಯೋಗ ಸಮಸ್ಯೆ ಮರೆ ಮಾಚಲು ಟಿಪ್ಪು ವಿವಾದ: ಜಿಗ್ನೇಶ್ ಮೇವಾನಿ

ದೇಶದ ಅನಾರೋಗ್ಯ ಪೀಡಿತ ಆರ್ಥಿಕ ವ್ಯವಸ್ಥೆ, ನಿರುದ್ಯೋಗದಂತಹ ನೈಜ ಮತ್ತು ಜ್ವಲಂತ ಸಮಸ್ಯೆಗಳನ್ನು ಮರೆ ಮಾಚಲು ರಾಜ್ಯದ ಬಿಜೆಪಿ ಸರ್ಕಾರ ಮೈಸೂರು ಹುಲಿ ಟಿಪ್ಪು ಸುಲ್ತಾನ್ ವಿಚಾರವನ್ನು...

ಚಿತ್ರದುರ್ಗ: ದೇಶದ ಅನಾರೋಗ್ಯ ಪೀಡಿತ ಆರ್ಥಿಕ ವ್ಯವಸ್ಥೆ, ನಿರುದ್ಯೋಗದಂತಹ ನೈಜ ಮತ್ತು ಜ್ವಲಂತ ಸಮಸ್ಯೆಗಳನ್ನು ಮರೆ ಮಾಚಲು ರಾಜ್ಯದ ಬಿಜೆಪಿ ಸರ್ಕಾರ ಮೈಸೂರು ಹುಲಿ ಟಿಪ್ಪು ಸುಲ್ತಾನ್ ವಿಚಾರವನ್ನು ಎಳೆದು ತಂದಿದೆ ಎಂದು ಗುಜರಾತ್ ಶಾಸಕ ಜಿಗ್ನೇಶ್ ಮೇವಾನಿ ಆಪಾದಿಸಿದ್ದಾರೆ.

ಟಿಪ್ಪು ಸುಲ್ತಾನ್ ಅಧ್ಯಾಯವನ್ನು ಪಠ್ಯಪುಸ್ತಕದಿಂದ ಕೈಬಿಡುವ ನಿರ್ಧಾರ ತೆಗೆದುಕೊಳ್ಳುವ ಮೂಲಕ ಸರ್ಕಾರ ನೈಜ ಸಮಸ್ಯೆಗಳಿಂದ ಜನರ ದಾರಿ ತಪ್ಪಿಸುವ ಪ್ರಯತ್ನ ನಡೆಸಿದೆ. ಇದು ಸಂಘಪರಿವಾರದ ಕಾರ್ಯಸೂಚಿಯಾಗಿದ್ದು, ಕೋಮುವಾದಿ ಮನೋಧೋರಣೆಯನ್ನು ಪ್ರತಿಬಿಂಬಿಸುತ್ತದೆ ಎಂದರು.

ಕಳೆದ ೨೦೧೮ರ ಎಪ್ರಿಲ್‌ನಲ್ಲಿ ನಗರದಲ್ಲಿ ನಡೆದ ಸಂವಾದ ಕಾರ್ಯಕ್ರಮವೊಂದರಲ್ಲಿ 'ಮೋದಿ ಕಾರ್ಯಕ್ರಮದಲ್ಲಿ ಕುರ್ಚಿ ತೂರಿ’ ಎಂಬ ವಿವಾದಾಸ್ಪದ ಹೇಳಿಕೆ ನೀಡಿದ ಆರೋಪದ ಮೇಲೆ ಜಿಗ್ನೇಶ್ ವಿರುದ್ದ ಪ್ರಕರಣ ದಾಖಲಾಗಿತ್ತು. ಇದರ ವಿಚಾರಣೆಗಾಗಿ ಅವರು ಇಂದು ಜಿಲ್ಲಾ ನ್ಯಾಯಾಲಯಕ್ಕೆ ಹಾಜರಾಗಲು ಆಗಮಿಸಿದಾಗ ಸುದ್ದಿಗಾರರೊಂದಿಗೆ ಮಾತನಾಡಿದರು. 

ಟಿಪ್ಪು ಸುಲ್ತಾನ್ ಅವರ ಹೆಸರನ್ನೇ ಇಲ್ಲವಾಗಿಸುವ ಯತ್ನ ನಡೆಯುತ್ತಿದೆ. ಇದು ಸಂಘ ಪರಿವಾರ ಮತ್ತು ಬಿಜೆಪಿಯ ಹಿಡನ್ ಅಜೆಂಡಾ ಆಗಿದೆ ಎಂದು ಮೇವಾನಿ ವಾಗ್ದಾಳಿ ನಡೆಸಿದರು.

ವೈವಿಧ್ಯತೆಯಲ್ಲೂ ಏಕತೆಯಿಂದಿರುವುದೇ ನಮ್ಮ ದೇಶದ ಸೌಂದರ್ಯ. ಆದರೆ, ಆರೆಸ್ಸೆಸ್ ಈ ವೈವಿಧ್ಯತೆಯನ್ನೇ ಕೊಲ್ಲಲು ಹೊರಟಿದೆ. ಹಿಂದೂ ಮುಸ್ಲಿಮರ ಮಧ್ಯೆ ಇರುವ ಕಂದಕವನ್ನೇ ಇನ್ನಷ್ಟು ದೊಡ್ಡದಾಗಿ ಮಾಡುತ್ತಿದೆ. ಆರೆಸ್ಸೆಸ್ ಮತ್ತು ಬಿಜೆಪಿಗೆ ಮುಸ್ಲಿಮರು ಹಾಗೂ ದಲಿತರು ದ್ವಿತೀಯ ದರ್ಜೆ ನಾಗರಿಕರಾಗಿದ್ದಾರೆ. ಕೆಲಸಕ್ಕೆ ಮಾತ್ರ ಅವರನ್ನು ಬಳಸಿಕೊಳ್ಳುವುದು ಅವರ ಅಜೆಂಡಾ ಎಂದು ಆರೋಪಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

30 ನಿಮಿಷಗಳಲ್ಲಿ ಹಿಂದಕ್ಕೆ ಹೋಗಿ: ಶಾಂತಿ ಮಾತುಕತೆ ಮಧ್ಯೆ ಹಾರ್ಮುಜ್'ಗೆ ನುಗ್ಗಿದ ಅಮೆರಿಕದ Destroyer ಯುದ್ಧನೌಕೆಗೆ ಇರಾನ್ ಎಚ್ಚರಿಕೆ!

"ಇರಾನ್ ದೊಡ್ಡ ಮಟ್ಟದಲ್ಲಿ ಸೋಲುತ್ತಿದೆ": ಮಾತುಕತೆ ಮುಕ್ತಾಯಕ್ಕೂ ಮುನ್ನ ಟ್ರಂಪ್ ಘೋಷಣೆ

IPL 2026: ಸ್ಯಾಮ್ಸನ್ ಬ್ಯಾಟಿಂಗ್ ಅಬ್ಬರ; DC ವಿರುದ್ಧ CSK ಗೆ 23 ರನ್ ಗಳ ಭರ್ಜರಿ ಜಯ

ಖ್ಯಾತ ಗಾಯಕಿ ಆಶಾ ಭೋಸ್ಲೆಗೆ ಹೃದಯಾಘಾತ: ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲು

IPL 2026: ಚೆನ್ನೈ ಪರ ಸಂಜು ಸ್ಯಾಮ್ಸನ್ ಸ್ಫೋಟಕ ಬ್ಯಾಟಿಂಗ್; MS ಧೋನಿ ದಾಖಲೆ ಪುಡಿ; ದಿಗ್ಗಜರ ಗುಂಪಿಗೆ ಸೇರ್ಪಡೆ

SCROLL FOR NEXT