ಪುಟ್ಟಣ್ಣ 
ರಾಜಕೀಯ

ಯಾರಿಗೆ ನೋವಾದರೂ, ಸತ್ತರೂ ವರಿಷ್ಠರಿಗೆ ಏನೂ ಅನಿಸಲ್ಲ: ಜೆಡಿಎಸ್ ಶಾಸಕ ಪುಟ್ಟಣ್ಣ ಗುಡ್ ಬೈ!

ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ   ಪಕ್ಷ ಬಿಡಲು ತೀರ್ಮಾನಿಸಿದ್ದೇನೆ, ಇನ್ನೂ ಹಲವು ಶಾಸಕರು ಪಕ್ಷಾಂತರ ಮಾಡಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. 

ರಾಮನಗರ: ಜೆಡಿಎಸ್​ ಪಕ್ಷದೊಳಗಿನ ರೆಬೆಲ್​ ಶಾಸಕರ ಭಿನ್ನಾಭಿಪ್ರಾಯವನ್ನು ಶಮನಗೊಳಿಸಿ ಮತ್ತೆ ಪಕ್ಷವನ್ನು ಕಟ್ಟುವ ಸಲುವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಶಾಸಕರಿಗೆ ವಿದೇಶ ಪ್ರವಾಸ ಸೇರಿದಂತೆ ಹಲವಾರು ಕಸರತ್ತುಗಳಲ್ಲಿ ತೊಡಗಿರುವ  ದಿನದಲ್ಲಿ ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ   ಪಕ್ಷ ಬಿಡಲು ತೀರ್ಮಾನಿಸಿದ್ದೇನೆ, ಇನ್ನೂ ಹಲವು ಶಾಸಕರು ಪಕ್ಷಾಂತರ ಮಾಡಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. 

ಜೆಡಿಎಸ್​ ಪಕ್ಷ ತೊರೆಯುವ ಕುರಿತು ರಾಮನಗರದಲ್ಲಿ ಹೇಳಿಕೆ ನೀಡಿರುವ ಪುಟ್ಟಣ್ಣ, "ಪಕ್ಷದಲ್ಲಿ ಯಾರಿಗೆ ನೋವಾದರೂ, ಯಾರೇ ಸತ್ತರು ವರಿಷ್ಠರಿಗೆ ಏನೂ ಅನಿಸಲ್ಲ. ಹೀಗಾಗಿ ಪಕ್ಷದಲ್ಲಿ ಸಾಕಷ್ಟು ಜನ ಶಾಸಕರು ನೋವು ಅನುಭವಿಸಿದ್ದು, ಬಹುತೇಕ ಎಲ್ಲಾ ಶಾಸಕರೂ ಪಕ್ಷ ತ್ಯಜಿಸುವ ಕುರಿತು ಚರ್ಚೆ ನಡೆಸಿದ್ದೇವೆ. ಹಿರಿಯ ನಾಯಕ ಬಸವರಾಜ ಹೊರಟ್ಟಿ ಜೊತೆಗೂ ಚರ್ಚೆ ಮಾಡಿ ಮುಂದಿನ ನಡೆಯನ್ನು ತೀರ್ಮಾನಿಸಲಾಗುವುದು" ಎಂದು ತಿಳಿಸಿದ್ದಾರೆ.

ಬಸವರಾಜ ಹೊರಟ್ಟಿ ಸೇರಿದಂತೆ ಅನೇಕ ಜೆಡಿಎಸ್​ ವಿಧಾನ ಪರಿಷತ್​ ಸದಸ್ಯರು  ಪಕ್ಷದ ವರಿಷ್ಠರ ವಿರುದ್ಧ ಕಿಡಿಕಾರಿದ್ದು, "ತಮ್ಮನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗುತ್ತಿದೆ. ಪಕ್ಷದ ವರಿಷ್ಠರಾದ ಕುಮಾರಸ್ವಾಮಿ ತಮ್ಮ ವಿರುದ್ಧ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ" ಎಂದು ಆರೋಪಿಸಿದ್ದರು.  

ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಿಗೆ ಮತ್ತೋರ್ವ  ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ ಬಹಿರಂಗವಾಗಿ ಪಕ್ಷವನ್ನು ತ್ಯಜಿಸುವ ಮಾತನ್ನಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್​ ಪಕ್ಷದಿಂದ ಸತತ ಮೂರು ಬಾರಿ ಬೆಂಗಳೂರು ಶಿಕ್ಷಣ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗಿರುವ ಪುಟ್ಟಣ್ಣ ಅವರ ಅವಧಿ 2020ರ ವೇಳೆಗೆ ಅಂತ್ಯವಾಗಲಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT