ಪುಟ್ಟಣ್ಣ 
ರಾಜಕೀಯ

ಯಾರಿಗೆ ನೋವಾದರೂ, ಸತ್ತರೂ ವರಿಷ್ಠರಿಗೆ ಏನೂ ಅನಿಸಲ್ಲ: ಜೆಡಿಎಸ್ ಶಾಸಕ ಪುಟ್ಟಣ್ಣ ಗುಡ್ ಬೈ!

ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ   ಪಕ್ಷ ಬಿಡಲು ತೀರ್ಮಾನಿಸಿದ್ದೇನೆ, ಇನ್ನೂ ಹಲವು ಶಾಸಕರು ಪಕ್ಷಾಂತರ ಮಾಡಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. 

ರಾಮನಗರ: ಜೆಡಿಎಸ್​ ಪಕ್ಷದೊಳಗಿನ ರೆಬೆಲ್​ ಶಾಸಕರ ಭಿನ್ನಾಭಿಪ್ರಾಯವನ್ನು ಶಮನಗೊಳಿಸಿ ಮತ್ತೆ ಪಕ್ಷವನ್ನು ಕಟ್ಟುವ ಸಲುವಾಗಿ ಮಾಜಿ ಸಿಎಂ ಕುಮಾರಸ್ವಾಮಿ ಶಾಸಕರಿಗೆ ವಿದೇಶ ಪ್ರವಾಸ ಸೇರಿದಂತೆ ಹಲವಾರು ಕಸರತ್ತುಗಳಲ್ಲಿ ತೊಡಗಿರುವ  ದಿನದಲ್ಲಿ ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ   ಪಕ್ಷ ಬಿಡಲು ತೀರ್ಮಾನಿಸಿದ್ದೇನೆ, ಇನ್ನೂ ಹಲವು ಶಾಸಕರು ಪಕ್ಷಾಂತರ ಮಾಡಲಿದ್ದಾರೆ ಎಂದು ಹೊಸ ಬಾಂಬ್ ಸಿಡಿಸಿದ್ದಾರೆ. 

ಜೆಡಿಎಸ್​ ಪಕ್ಷ ತೊರೆಯುವ ಕುರಿತು ರಾಮನಗರದಲ್ಲಿ ಹೇಳಿಕೆ ನೀಡಿರುವ ಪುಟ್ಟಣ್ಣ, "ಪಕ್ಷದಲ್ಲಿ ಯಾರಿಗೆ ನೋವಾದರೂ, ಯಾರೇ ಸತ್ತರು ವರಿಷ್ಠರಿಗೆ ಏನೂ ಅನಿಸಲ್ಲ. ಹೀಗಾಗಿ ಪಕ್ಷದಲ್ಲಿ ಸಾಕಷ್ಟು ಜನ ಶಾಸಕರು ನೋವು ಅನುಭವಿಸಿದ್ದು, ಬಹುತೇಕ ಎಲ್ಲಾ ಶಾಸಕರೂ ಪಕ್ಷ ತ್ಯಜಿಸುವ ಕುರಿತು ಚರ್ಚೆ ನಡೆಸಿದ್ದೇವೆ. ಹಿರಿಯ ನಾಯಕ ಬಸವರಾಜ ಹೊರಟ್ಟಿ ಜೊತೆಗೂ ಚರ್ಚೆ ಮಾಡಿ ಮುಂದಿನ ನಡೆಯನ್ನು ತೀರ್ಮಾನಿಸಲಾಗುವುದು" ಎಂದು ತಿಳಿಸಿದ್ದಾರೆ.

ಬಸವರಾಜ ಹೊರಟ್ಟಿ ಸೇರಿದಂತೆ ಅನೇಕ ಜೆಡಿಎಸ್​ ವಿಧಾನ ಪರಿಷತ್​ ಸದಸ್ಯರು  ಪಕ್ಷದ ವರಿಷ್ಠರ ವಿರುದ್ಧ ಕಿಡಿಕಾರಿದ್ದು, "ತಮ್ಮನ್ನು ಪಕ್ಷದಲ್ಲಿ ಮೂಲೆಗುಂಪು ಮಾಡಲಾಗುತ್ತಿದೆ. ಪಕ್ಷದ ವರಿಷ್ಠರಾದ ಕುಮಾರಸ್ವಾಮಿ ತಮ್ಮ ವಿರುದ್ಧ ನಿರ್ಲಕ್ಷ್ಯ ಧೋರಣೆ ತಾಳಿದ್ದಾರೆ" ಎಂದು ಆರೋಪಿಸಿದ್ದರು.  

ರಾಜ್ಯ ರಾಜಕೀಯದಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿರುವ ಬೆನ್ನಿಗೆ ಮತ್ತೋರ್ವ  ಜೆಡಿಎಸ್​ ವಿಧಾನ ಪರಿಷತ್​ ಸದಸ್ಯ ಪುಟ್ಟಣ್ಣ ಬಹಿರಂಗವಾಗಿ ಪಕ್ಷವನ್ನು ತ್ಯಜಿಸುವ ಮಾತನ್ನಾಡಿರುವುದು ಕುತೂಹಲಕ್ಕೆ ಕಾರಣವಾಗಿದೆ.

ಜೆಡಿಎಸ್​ ಪಕ್ಷದಿಂದ ಸತತ ಮೂರು ಬಾರಿ ಬೆಂಗಳೂರು ಶಿಕ್ಷಣ ಪದವೀಧರರ ಕ್ಷೇತ್ರದಿಂದ ವಿಧಾನ ಪರಿಷತ್​ಗೆ ಆಯ್ಕೆಯಾಗಿರುವ ಪುಟ್ಟಣ್ಣ ಅವರ ಅವಧಿ 2020ರ ವೇಳೆಗೆ ಅಂತ್ಯವಾಗಲಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಕೃಷ್ಣಾ ಮೇಲ್ದಂಡೆ ಯೋಜನೆ-3: ಸರ್ವಪಕ್ಷ ನಾಯಕರೊಂದಿಗೆ ಶೀಘ್ರದಲ್ಲೇ ಸಭೆ; ಡಿಕೆ.ಶಿವಕುಮಾರ್

SCROLL FOR NEXT