ಸಂಗ್ರಹ ಚಿತ್ರ 
ರಾಜಕೀಯ

ಗಣೇಶ ಮೂರ್ತಿ,ಸೀರೆ ಹಂಚಿದರೂ ಡಾ. ಸುಧಾಕರ್ ಉಪ ಚುನಾವಣೆಯಲ್ಲಿ ಗೆಲ್ಲಲು ಸಾಧ್ಯವಿಲ್ಲ- ವೀರಪ್ಪ ಮೊಯ್ಲಿ

ಅನರ್ಹ ಶಾಸಕ ಡಾ. ಎಂ. ಸುಧಾಕರ್ ಜನರಿಗೆ ಗಣೇಶ ಮೂತ್ರಿ, ಸೀರೆಗಳನ್ನು ಹಂಚಿದರೂ ಮುಂದಿನ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂದು ಮಾಜಿ ಸಂಸದ ಎಂ. ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ.

ಚಿಕ್ಕಬಳ್ಳಾಪುರ: ಅನರ್ಹ ಶಾಸಕ ಡಾ. ಎಂ. ಸುಧಾಕರ್ ಜನರಿಗೆ ಗಣೇಶ ಮೂತ್ರಿ, ಸೀರೆಗಳನ್ನು ಹಂಚಿದರೂ ಮುಂದಿನ ಚುನಾವಣೆಯಲ್ಲಿ ಗೆಲ್ಲುವುದಿಲ್ಲ ಎಂದು ಮಾಜಿ ಸಂಸದ ಎಂ. ವೀರಪ್ಪ ಮೊಯ್ಲಿ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ಸವಾಲನ್ನು ಸಮರ್ಥವಾಗಿ ನಿಭಾಯಿಸುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಇದೆ.ಅಮೃತ ಕುಡಿದವರನ್ನೇ ಉಳಿಸುವುದಕ್ಕೆ ಸಾಧ್ಯವಿಲ್ಲ ಇನ್ನು ವಿಷ ಕುಡಿದವರು ಬದುಕುಳಿಯುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಬಿಜೆಪಿ ಜೊತೆ ಹೋದ ಶಾಸಕರ ಇಂದಿನ ಪರಿಸ್ಥಿತಿ ಹೀಗಿದ್ದು, ರಾಜ್ಯ ಬಿಜೆಪಿ ಸರ್ಕಾರ ಹೆಚ್ಚು ದಿನ ಉಳಿಯುವುದಿಲ್ಲ ಎಂದರು.

ಅನರ್ಹ ಶಾಸಕರು ಸುಪ್ರೀಂಕೋರ್ಟ್  ಕದ ತಟ್ಟಿದ್ದಾರೆ. ಆದರೆ, ನ್ಯಾಯಾಲಯದ ತೀರ್ಪು ತಕ್ಷಣಕ್ಕೆ ನೀಡದಿದ್ದರೆ ಅನರ್ಹ ಶಾಸಕರು ಅನರ್ಹರಾಗಿಯೇ ಉಳಿಯಲಿದ್ದಾರೆ ತೀರ್ಪಿಗೆ ಮೊದಲೇ ಚುನಾವಣೆ ನಡೆದರೆ ಅನರ್ಹರು ಚುನಾವಣೆಯಲ್ಲಿ ಸ್ಪರ್ಧಿಸುವಂತಿಲ್ಲ. ಮತದಾರರಿಗೆ ಸುಧಾಕರ್ ಏನೇ ಆಮಿಷಗಳು ನೀಡಿದರೂ ಕ್ಷೇತ್ರದ ಜನತೆ ಅವರಿಗೆ ತಕ್ಕ ಪಾಠವನ್ನಂತೂ ಕಲಿಸಲಿದ್ದಾರೆ ಎಂದು ಸುಧಾಕರ್ ಗೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT