ಕೆಪಿಸಿಸಿ ಅಧ್ಯಕ್ಷರು 
ರಾಜಕೀಯ

ಡಿಕೆಶಿ ಬಂಧನ ವಿರೋಧಿಸಿ ಬುಧವಾರ ರಾಜ್ಯವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಕರೆ 

ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಬುಧವಾರ ರಾಜ್ಯವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ.ಬುಧವಾರ ಪಕ್ಷದ  ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ತಿಳಿಸಿದರು.

ಬೆಂಗಳೂರು: ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ ಬುಧವಾರ ರಾಜ್ಯವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ಕರೆ ನೀಡಿದೆ.

ಡಿಕೆ ಶಿವಕುಮಾರ್ ಬಂಧನ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್,  ರಾಜಕೀಯ ದುರುದ್ದೇಶದಿಂದ ಡಿಕೆ ಶಿವಕುಮಾರ್ ಅವರನ್ನು ಬಂಧಿಸಲಾಗಿದೆ. ದ್ವೇಷದ ಕುತಂತ್ರದ ರಾಜಕಾರಣ ಮಾಡುತ್ತಿರುವ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ಬಳಸಿಕೊಂಡು ವಿರೋಧ ಪಕ್ಷಗಳ ನಾಯಕರನ್ನು ಮುಗಿಸುವ ಹೀನಕೃತ್ಯಕ್ಕಿಳಿದಿದೆ ಎಂದು ಆರೋಪಿಸಿದರು.

ಡಿಕೆ ಶಿವಕುಮಾರ್ ಅವರ ಬಂಧನವನ್ನು ತೀವ್ರವಾಗಿ ಖಂಡಿಸುವುದಾಗಿ ಹೇಳಿದ ಅವರು , ಕಾಂಗ್ರೆಸ್ ಪಕ್ಷ ಕಾರ್ಯಕರ್ತರ ಸೈದ್ದಾಂತಿಕ ಹೋರಾಟ ಮತ್ತಷ್ಟು ತೀವ್ರಗೊಳ್ಳಲಿದೆ. ಬುಧವಾರ ಪಕ್ಷದ  ಜಿಲ್ಲಾಧ್ಯಕ್ಷರ ನೇತೃತ್ವದಲ್ಲಿ ರಾಜ್ಯವ್ಯಾಪಿ ಪ್ರತಿಭಟನೆ ನಡೆಸಲಾಗುವುದು ಎಂದು ತಿಳಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಕನ್ನಡ ಬಂದಿದ್ರೆ ಇನ್ನೂ ಚೆನ್ನಾಗಿ ಮಾತನಾಡುತ್ತಿದ್ದೆ': ಕಾಂಗ್ರೆಸ್ ಸಿಎಂಗಳ ಎದುರೇ ಪ್ರಧಾನಿ ಮೋದಿ ಗುಣಗಾನ ಮಾಡಿದ ಆಂಧ್ರ ಸಿಎಂ Chandrababu Naidu!

ಪೋಕ್ಸೋ ಪ್ರಕರಣ: ವಚನಾನಂದ ಶ್ರೀಗೆ ಹೈಕೋರ್ಟ್​ ಬಿಗ್ ಶಾಕ್; ನಿರೀಕ್ಷಣಾ ಜಾಮೀನು ರದ್ದು

ಗೆಳೆಯನ ಅಂತ್ಯಕ್ರಿಯೆಗೆ ಕಣ್ಣೀರಿಡುತ್ತ ಓಡಿಬಂದ ಕೃಷಿ ತಾಪಂಡ; ವೈಶಾಕ್ ಕುಟುಂಬಸ್ಥರಿಂದ ನಟಿಗೆ ತೀವ್ರ ತರಾಟೆ!

ಬಾಂಗ್ಲಾದೇಶ: ದೀಪು ದಾಸ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಅನುಮಾನಾಸ್ಪದ ರೀತಿಯಲ್ಲಿ ಶವವಾಗಿ ಪತ್ತೆ?, Video!

ಶಾಶ್ವತ ವಿದ್ಯುತ್ ಸಂಪರ್ಕ: ಕರ್ನಾಟಕ ಸರ್ಕಾರದ ಬೊಕ್ಕಸಕ್ಕೆ 1,094 ಕೋಟಿ ರೂ. ಆದಾಯ ಸಂಗ್ರಹದ ನಿರೀಕ್ಷೆ!