ವಿ. ಸೋಮಣ್ಣ (ಸಂಗ್ರಹ ಚಿತ್ರ) 
ರಾಜಕೀಯ

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಇಲ್ಲ: ಸಚಿವ ವಿ. ಸೋಮಣ್ಣ 

ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದಿಲ್ಲ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮೂರು ವರ್ಷ ಒಂಭತ್ತು ತಿಂಗಳು ಅಧಿಕಾರದಲ್ಲಿರುತ್ತದೆ ಎಂದು ವಸತಿ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದ್ದಾರೆ. 

ಬೆಂಗಳೂರು: ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದಿಲ್ಲ. ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಸರ್ಕಾರ ಮೂರು ವರ್ಷ ಒಂಭತ್ತು ತಿಂಗಳು ಅಧಿಕಾರದಲ್ಲಿರುತ್ತದೆ ಎಂದು ವಸತಿ ಸಚಿವ ವಿ.ಸೋಮಣ್ಣ ಮಂಗಳವಾರ ಹೇಳಿದ್ದಾರೆ. 

ವಿಕಾಸಸೌಧದ ಕೊಠಡಿ ಸಂಖ್ಯೆ 143ರ ತಮ್ಮ ಕಚೇರಿ ಪೂಜೆ ನೆರವೇರಿದ ಬಳಿಕ, ಸುದ್ದಿಗಾರರೊಂದಿಗೆ, ಮಧ್ಯಂತರ ಚುನಾವಣೆ ಬಗ್ಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿರುವ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅನುಭವಿ ರಾಜಕಾರಣಿ, ಅವರ ದೃಷ್ಟಿಕೋನ ಯಾವ ರೀತಿ ಇದೆಯೋ ಗೊತ್ತಿಲ್ಲ. ಸಿದ್ದರಾಮಯ್ಯ ಅವರು ತಮ್ಮ ಅನುಭವದಲ್ಲಿ ಮಧ್ಯಂತರ ಚುನಾವಣೆ ಬರುತ್ತದೆ ಎಂದು ಹೇಳಿರಬಹುದು. ಆದರೆ, ನನ್ನ ಅನುಭವದಲ್ಲಿ ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಬರುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 

ಈ ಸರ್ಕಾರದ ಅವಧಿ ಮುಗಿದ ನಂತರ ಬರುವ ವಿಧಾನಸಭಾ ಚುನಾವಣೆಯಲ್ಲೂ ಮತ್ತೆ ಬಿಜೆಪಿಯೇ ಗೆದ್ದು ಅಧಿಕಾರ ಹಿಡಿಯಲಿದೆ. ಜನ ಕೂಡ ಸದ್ಯಕ್ಕೆ ಚುನಾವಣೆ ಬಯಸಿಲ್ಲ ಎಂದು ಸಿದ್ದರಾಮಯ್ಯ ಅವರಿಗೆ ಟಾಂಗ್ ನೀಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT