ರಾಜಕೀಯ

ಉಡುಪಿ: ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಗೆ ರಾಜೀನಾಮೆ

Raghavendra Adiga

ಉಡುಪಿ: ಕಳೆದ ಲೋಕಸಭೆ ಚುನಾವಣೆಯಲ್ಲಿ ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಿದ್ದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಜೆಡಿಎಸ್ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.

ಮಂಗಳವಾರ ಮಧ್ವರಾಜ್ ತಮ್ಮ ರಾಜೀನಾಮೆ ಪತ್ರವನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಸಲ್ಲಿಸಿದ್ದಾರೆ.

ಪ್ರಮೋದ್ ಮಧ್ವರಾಜ್ ಅವರ ರಾಜೀನಾಮೆ ಪತ್ರವನ್ನು ಅವರ ಅಧಿಕೃತ ಟ್ವೀಟ್ ಖಾತೆಯಲ್ಲಿಯೂ ಹಂಚಿಕೊಂಡಿದ್ದು "ಕಳೆದ ಚುನಾವಣೆಯಲ್ಲಿ ನಾನು ಉಡುಪಿ-ಚಿಕ್ಕಮಗಳೂರು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದೆ.  ಈ ವಿಚಾರವನ್ನು ನಾನು ವರ್ಷ್ಟರಲ್ಲಿ ಸಹ ಚರ್ಚಿಸಿದ್ದೆ. ಆದರೆ ಆ ನಂತರದ ರಾಜಕೀಯ ಬೆಳವಣಿಗೆಗಳಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡು ಉಡುಪಿ-ಚಿಕ್ಕಮಗಳೂರು ಕ್ಷೇತ್ರವನ್ನು ಜೆಡಿಎಸ್ ಗೆ ಬಿಟ್ಟುಕೊಟ್ಟ ಕಾರಣ ನಾನು ಮೈತ್ರಿ ಅಭ್ಯರ್ಥಿಯಾಗಿ ಜೆಡಿಎಸ್ ನಿಂದ ಸ್ಪರ್ಧಿಸಬೇಕಾಯಿತು" ಎಂದಿದ್ದಾರೆ.

"ಇದೀಗ ರಾಜ್ಯದಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಅಧಿಕಾರದಲ್ಲಿಲ್ಲದ ಕಾರಣ ನಾನು ಇದುವರೆಗೆ ತಾಂತ್ರಿಕ ಕಾರಣಗಳಿಂದ ಹೊಂದಿದ್ದ ಜೆಡಿಎಸ್ ಸದಸ್ಯತ್ವಕ್ಕೆ ರಾಜೀನಾಮೆ ನಿಡುತ್ತಿದ್ದೇನೆ" ಅವರು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

SCROLL FOR NEXT