ಪ್ರಿಯಾಂಕ್ ಖರ್ಗೆ 
ರಾಜಕೀಯ

ಜಾರಿ ನಿರ್ದೇಶನಾಲಯ ಜೊತೆ ಡಿ.ಕೆ.ಶಿವಕುಮಾರ್ ರಾಜಿ ಮಾಡಿಕೊಂಡಿಲ್ಲ: ಪ್ರಿಯಾಂಕ್ ಖರ್ಗೆ ಟಾಂಗ್

ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಬೇಕಾದಂತೆ ಉತ್ತರ ಕೊಡುತ್ತಿಲ್ಲ,ರಾಜೀ ಮಾಡಿಕೊಳ್ಳಲಿಲ್ಲ ಎಂಬ ಕಾರಣಕ್ಕಾಗಿ ಪಕ್ಷದ ಮುಖಂಡ ಡಿ ಕೆ ಶಿವಕುಮಾರ್ ಅವರ ಬಂಧಿಸಲಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಕಲಬುರಗಿ: ಜಾರಿ ನಿರ್ದೇಶನಾಲಯ ಅಧಿಕಾರಿಗಳಿಗೆ ಬೇಕಾದಂತೆ ಉತ್ತರ ಕೊಡುತ್ತಿಲ್ಲ,ರಾಜೀ ಮಾಡಿಕೊಳ್ಳಲಿಲ್ಲ ಎಂಬ ಕಾರಣಕ್ಕಾಗಿ ಪಕ್ಷದ ಮುಖಂಡ ಡಿ ಕೆ ಶಿವಕುಮಾರ್ ಅವರ ಬಂಧಿಸಲಾಗಿದೆ ಎಂದು ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾನೂನು ಎಲ್ಲರಿಗೂ ಒಂದೇ ಇರಬೇಕು. ಆದರೆ ಕೇಂದ್ರ ಹಾಗೂ ರಾಜ್ಯದ ಬಿಜೆಪಿ ಸರ್ಕಾರದಲ್ಲಿ ಕಾನೂನಿನಡಿ ಎಲ್ಲರಿಗೂ ಸಮಾನ ನ್ಯಾಯ ಸಿಗುತ್ತಿಲ್ಲದಿರುವುದು ದುರ್ದೈವ. ಡಿ.ಕೆ.ಶಿವಕುಮಾರ್ ನಾಲ್ಕು ದಿನಗಳ ಕಾಲ ಜಾರಿ ನಿರ್ದೇಶಾನಲಯದ ವಿಚಾರಣೆಗೆ ಸತತವಾಗಿ ಹಾಜರಾಗಿದ್ದಾರೆ. ಆದರೂ ಅವರು ತನಿಖೆಗೆ ಸಂಪೂರ್ಣ ಸಹಕಾರ ನೀಡುತ್ತಿಲ್ಲ ಎಂದು ಕಾರಣ ನೀಡಿ ಬಂಧಿಸಿರುವುದರ ಅರ್ಥವೇನು? ಎಂದು ಅವರು ಪ್ರಶ್ನಿಸಿದರು.

ದಾಳಿ ಮಾಡಿದ್ದು ಆದಾಯ ತೆರಿಗೆ, ಬಂಧನ ಮಾಡಿರುವುದು ಜಾರಿ ನಿರ್ದೇಶಾನಲಯ.ಈ ಎರಡಕ್ಕೂ ಒಂದಕ್ಕೊಂದು ಸಂಬಂಧವಿಲ್ಲ. ಸರ್ಕಾರಿ ಸ್ವಾಯತ್ತ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ತನ್ನ ರಾಜಕೀಯ ದುರುದ್ದೇಶಕ್ಕೆ, ವಿಪಕ್ಷಗಳನ್ನು ಹಣಿಯಲು ದುರ್ಬಳಕೆ ಮಾಡಿಕೊಳ್ಳುತ್ತಿದೆ. ದೇಶದ ಸಂವಿಧಾನಕ್ಕೆ ತಲೆ ಬಾಗಿ ಡಿ.ಕೆ.ಶಿವಕುಮಾರ್ ಕಾನೂನು ರೀತ್ಯಾ ಹೋರಾಟ ಮಾಡುತ್ತಿದ್ದಾರೆ. ಕೇಂದ್ರ ಬಿಜೆಪಿ ನಾಯಕರ ತುಘಲಕ್ ದರ್ಬಾರ್ ವಿರುದ್ಧ ಹೋರಾಟ ಮಾಡಿ, ಕೇಂದ್ರದ ನಡವಳಿಕೆ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಪಕ್ಷ ಮಾಡಲಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸಭೆ ಬಳಿಕ ಬೆಂಗಳೂರಿನಲ್ಲಿ ಶಕ್ತಿ ಪ್ರದರ್ಶನಕ್ಕೆ ಸಿದ್ದರಾಮಯ್ಯ ಸಜ್ಜು: ಬೆಂಬಲಿಗರ ಜೊತೆ ಮಹತ್ವದ ಸಭೆ, ಹೆಚ್ಚಿದ ಕುತೂಹಲ

ಹೈಕಮಾಂಡ್ ಸೂಚನೆಗೆ ಮಣಿದ ಸಿದ್ದರಾಮಯ್ಯ: ಮುಖ್ಯಮಂತ್ರಿ ಸ್ಥಾನ ತ್ಯಜಿಸಲು ಸಮ್ಮತಿ; ಕಾಂಗ್ರೆಸ್ ಪವರ್ ಶಿಫ್ಟ್‌ಗೆ ಕೌಂಟ್‌ಡೌನ್ ಶುರು, ಡಿಕೆಶಿಗೆ ಸಿಎಂ ಪಟ್ಟ..?

ಬೆಂಗಳೂರಿಗೂ ಎಂಟ್ರಿ ಕೊಟ್ಟಿತೇ ಮಹಾಮಾರಿ ಎಬೋಲಾ? ಆಫ್ರಿಕಾದಿಂದ ಬಂದ ಮಹಿಳೆಯಲ್ಲಿ ಸೋಂಕಿನ ಲಕ್ಷಣ ಪತ್ತೆ, ಆರೋಗ್ಯ ಇಲಾಖೆ ಹೈ ಅಲರ್ಟ್

CMRL ಹಣ ಅಕ್ರಮ ವರ್ಗಾವಣೆ ಪ್ರಕರಣ: ಕೇರಳ ಮಾಜಿ ಸಿಎಂ ಪಿಣರಾಯಿ ವಿಜಯನ್ ನಿವಾಸದ ಮೇಲೆ ED ದಾಳಿ..!

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

SCROLL FOR NEXT