ಎಚ್.ಡಿ ರೇವಣ್ಣ 
ರಾಜಕೀಯ

ನಮ್ಮ ಕಾರ್ಖಾನೆಯಲ್ಲಿ ಬೆಳೆದ ಮೇಲೆ ಮೇವು ಸಿಕ್ಕಲ್ಲಿಗೆ ಹೋಗುತ್ತಾರೆ: ಎಚ್.ಡಿ ರೇವಣ್ಣ  ಲೇವಡಿ

ಜೆಡಿಎಸ್ ಪಕ್ಷ ಮುಖಂಡರನ್ನು ತಯಾರಿಸುವ ಕಾರ್ಖಾನೆಯಾಗಿದೆ, ಅವರು ಬೆಳೆದ ಮೇಲೆ ಮೇವು ಎಲ್ಲಿ ಸಿಗುತ್ತದೋ ಅಲ್ಲಿಗೆ ಹೋಗುತ್ತಾರೆ ಎಂದು ಶಾಸಕ ಎಚ್.ಡಿ ರೇವಣ್ಣ ಕಟಕಿಯಾಡಿದ್ದಾರೆ.

ಹಾಸನ: ಜೆಡಿಎಸ್ ಪಕ್ಷ ಮುಖಂಡರನ್ನು ತಯಾರಿಸುವ ಕಾರ್ಖಾನೆಯಾಗಿದೆ, ಅವರು ಬೆಳೆದ ಮೇಲೆ ಮೇವು ಎಲ್ಲಿ ಸಿಗುತ್ತದೋ ಅಲ್ಲಿಗೆ ಹೋಗುತ್ತಾರೆ ಎಂದು ಶಾಸಕ ಎಚ್.ಡಿ ರೇವಣ್ಣ ಕಟಕಿಯಾಡಿದ್ದಾರೆ.

ಬೇಲೂರಿನಲ್ಲಿ ಗುರುವಾರ ನಡೆದ ಜೆಡಿಎಸ್ ಕಾರ್ಯಕರ್ತರ ಅಭಿನಂದನಾ ಸಮಾರಂಭದ ಬಳಿಕ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ಮತ್ತು ಕಾಂಗ್ರೆಸ್‌ನಲ್ಲಿ ಬೆಳೆದು ಶಾಸಕರಾಗಿ ಆಯ್ಕೆಯಾದವರು ಬಳಿಕ ಬಿಜೆಪಿಯತ್ತ ಹೊರಟಿರುವ ನಾಯಕರ ವಿರುದ್ಧ ಮಾಜಿ ಸಚಿವ ಎಚ್ ಡಿ ರೇವಣ್ಣ ಕಿಡಿಕಾರಿದರು. 

'ಜೆಡಿಎಸ್ ಪಕ್ಷ ಎಂದರೆ ರಾಜಕೀಯ ನಾಯಕರನ್ನು ತಯಾರಿಸುವ ಕಾರ್ಖಾನೆಯಾಗಿದೆ. ಅವರು ಬೆಳೆದ ಮೇಲೆ ಎಲ್ಲಿ ಮೇವು ಸಿಗುತ್ತದೆಯೋ ಅಲ್ಲಿಗೆ ಹೋಗುತ್ತವೆ' ಎಂದು ವ್ಯಂಗ್ಯವಾಡಿದರು. 

'ಜೆಡಿಎಸ್ ಮತ್ತು ಕಾಂಗ್ರೆಸ್ ಪಕ್ಷದಲ್ಲಿ ಚೆನ್ನಾಗಿ ತಿಂದು ಉಂಡು ಬೆಳೆದ ಶಾಸಕರನ್ನು ಸೆಳೆದುಕೊಂಡು ಬಿಜೆಪಿ ನಾಯಕರು ಅಧಿಕಾರ ಗಿಟ್ಟಿಸಿಕೊಂಡಿದ್ದಾರೆ. ಸಮ್ಮಿಶ್ರ ಸರ್ಕಾರವನ್ನು ಉರುಳಿಸಲು ಸಾವಿರಾರು ಕೋಟಿ ರೂಪಾಯಿ ಚೆಲ್ಲಿದ್ದಾರೆ. ಆದರೆ ನಮ್ಮ ಕೆಲಸಗಳನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೆಲಸದ ವೇಗ ನಿಧಾನವಾಗಬಹುದು. ನಮ್ಮ ಕೆಲಸಗಳನ್ನು ಪೂರ್ಣಗೊಳಿಸಿಯೇ ತೀರುತ್ತೇವೆ' ಎಂದು ಹೇಳಿದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನಕ್ಕೆ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT