ರಾಜಕೀಯ

ದ್ವೇಷದ ರಾಜಕಾರಣ ಮುಂದೆ ಬಿಜೆಪಿ ನಾಯಕರಿಗೆ ಶಾಪವಾಗಲಿದೆ: ರಾಮಲಿಂಗಾರೆಡ್ಡಿ 

Nagaraja AB

ಬೆಂಗಳೂರು: ದ್ವೇಷದ ರಾಜಕಾರಣ ಮುಂದೆ ಬಿಜೆಪಿ ನಾಯಕರಿಗೆ ಶಾಪವಾಗಲಿದೆ ಎಂದು ಮಾಜಿ  ಗೃಹ ಸಚಿವ, ಕಾಂಗ್ರೆಸ್ ಮುಖಂಡ ರಾಮಲಿಂಗಾರೆಡ್ಡಿ ಭವಿಷ್ಯ ನುಡಿದಿದ್ದಾರೆ.

ನಗರದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪ್ರತಿಪಕ್ಷಗಳನ್ನು ರಾಜಕೀಯವಾಗಿ ಮುಗಿಸುವ ತಂತ್ರ ರೂಪಿಸಿದ್ದು, ಆದಾಯ ತೆರಿಗೆ ಇಲಾಖೆ, ಕೇಂದ್ರ ತನಿಖಾ ದಳ ಹಾಗೂ ಜಾರಿ ನಿರ್ದೇಶನಾಲಯಗಳು ಬಿಜೆಪಿಯ ಸುಪರ್ದಿಯಲ್ಲಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸರ್ಕಾರಿ ಸಂಸ್ಥೆಗಳು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಕೆಲಸ ಮಾಡಬೇಕೆ ಹೊರತು ಬಿಜೆಪಿಯ ನಿರ್ದೇಶನದಂತೆ ಕೆಲಸ ಮಾಡಬಾರದು. ದೇಶದಲ್ಲಿ ಬಿಜೆಪಿ ಕೆಟ್ಟ ಸಂಪ್ರದಾಯವನ್ನು ಬೆಳೆಸುತ್ತಿದೆ. ಪಕ್ಷದ ಮುಖಂಡ ಡಿಕೆ ಶಿವಕುಮಾರ್ ಅವರನ್ನು ಇಡಿ ವಶಕ್ಕೆ ಪಡೆದು ದುರುದ್ದೇಶಪೂರಕವಾಗಿ ಅವರಿಗೆ ಕಿರುಕುಳ ನೀಡಲಾಗುತ್ತಿದೆ ಎಂದು ಆರೋಪಿಸಿದರು.

SCROLL FOR NEXT