ಡಿಕೆ ಶಿವಕುಮಾರ್ 
ರಾಜಕೀಯ

ಡಿಕೆ ಶಿವಕುಮಾರ್ ಬಂಧನವನ್ನು ರಾಜಕೀಯಗೊಳಿಸಬೇಡಿ: ಬಿಜೆಪಿ ಒಕ್ಕಲಿಗ ನಾಯಕರ ಆಕ್ರೋಶ

ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ  ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ, ಆದರೆ ಈ ಪ್ರತಿಭಟನೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದೆ.

ಬೆಂಗಳೂರು/ಮೈಸೂರು:  ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ವಿರೋಧಿಸಿ  ಬುಧವಾರ ಬೆಂಗಳೂರಿನಲ್ಲಿ ಬೃಹತ್ ಪ್ರತಭಟನಾ ರ್ಯಾಲಿ ಹಮ್ಮಿಕೊಳ್ಳಲಾಗಿದೆ, ಆದರೆ ಈ ಪ್ರತಿಭಟನೆಗೆ ಬಿಜೆಪಿ ಭಾರೀ ವಿರೋಧ ವ್ಯಕ್ತಪಡಿಸಿದೆ.

ಪ್ರಮುಖವಾಗಿ ಬಿಜೆಪಿಯ ಒಕ್ಕಲಿಗ ನಾಯಕರು ಡಿಕೆಶಿವಕುಮಾರ್ ಬಂಧನವನ್ನು ರಾಜಕೀಯಗೊಳಿಸುತ್ತಿರುವುದಕ್ಕೆ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ಮಾಜಿ ಸಚಿವ, ಕಾಂಗ್ರೆಸ್ ಸಚಿವ ಡಿಕೆ ಶಿವಕುಮಾರ್  ಅವರನ್ನು ಜಾರಿ ನಿರ್ದೇಶನಾಲಯ ಬಂಧಿಸಿರುವುದಕ್ಕೆ ಕಾಂಗ್ರೆಸ್  ಪಕ್ಷ ಜಾತಿಯ ಬಣ್ಣ ಬಳಿಯುವುದು ನಾಚಿಕೆಗೇಡಿನ ಸಂಗತಿ ಎಂದು ಕಂದಾಯ ಸಚಿವ ಆರ್ . ಅಶೋಕ್ ಟೀಕಿಸಿದ್ದಾರೆ.

ಮತ್ತೊಬ್ಬ ಒಕ್ಕಲಿಗ ನಾಯಕ ಡಿಸಿಎಂ ಡಾ. ಸಿಎನ್ ಅಶ್ವತ್ಥ ನಾರಾಯಣ ಕಾಂಗ್ರೆಸ್ ವಿರುದ್ದ ಹರಿಹಾಯ್ದಿದ್ದಾರೆ. ಸಮಾಜದಲ್ಲಿ ಭ್ರಷ್ಟಾಚಾರ ತೀವ್ರವಾಗಿದ್ದು, ಜಾತಿ ಮೀರಿ ಭ್ರಷ್ಟಾಚಾರ ವಿರುದ್ದ ಹೋರಾಡಬೇಕಿದೆ. ಡಿ.ಕೆ.ಶಿವಕುಮಾರ್ ಬಂಧನ ವಿಚಾರದಲ್ಲಿ ಸಮಾಜದವರು ಶಾಂತಿಯುತವಾಗಿ ತಮ್ಮ ಭಾವನೆ ವ್ಯಕ್ತಪಡಿಸಲಿ. ಹಿಂದೆ ಕುಮಾರಸ್ವಾಮಿಯವರು ಮುಖ್ಯಮಂತ್ರಿಯಾಗಿದ್ದಾಗ ಎಷ್ಟರ ಮಟ್ಟಿಗೆ ಭ್ರಷ್ಟಾಚಾರ ವಿರುದ್ದ ಆಡಳಿತ ನಡೆಸಿದ್ದರು? ಈಗ ಜನರಿಗೆ ಹೋರಾಡುವಂತೆ ಕರೆ ಕೊಡುತ್ತಾರೆ. ನಾನು ಕುಮಾರಸ್ವಾಮಿ, ಡಿ.ಕೆ.ಶಿವಕುಮಾರ್ ಸೇರಿದಂತೆ ಇತರೆ ನಾಯಕರಲ್ಲೂ ಮನವಿ ಮಾಡುತ್ತೇನೆ. ನಮ್ಮೆಲ್ಲರ ಹೋರಾಟ ಭ್ರಷ್ಟಾಚಾರ, ಬೇನಾಮಿ ಆಸ್ತಿ ವಿರುದ್ದ ಇರಬೇಕು ಎಂದು ಹೇಳಿದ್ದಾರೆ.

ಇನ್ನೂ ಈ ಬಗ್ಗೆ ಪ್ರತಿಕ್ರಿಯಿಸಿರುವ ಪ್ರವಾಸೋದ್ಯಮ ಸಚಿವ ಸಿ.ಟಿ ರವಿ, ಸತ್ಯಾಸತ್ಯೆಗಳನ್ನು ತಿಳಿದುಕೊಳ್ಳದೇ ಡಿಕೆಶಿ ಬಂಧನವನ್ನು ಭಾವನಾತ್ಮಕ ವಿಷಯವನ್ನಾಗಿಸಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT