ರಮೇಶ್ ಜಾರಕಿಹೊಳಿ 
ರಾಜಕೀಯ

ಐಟಿ-ಇಡಿ ತನಿಖೆಯಿಂದ ತಪ್ಪಿಸಿಕೊಳ್ಳಲು ರಮೇಶ್ ಜಾರಕಿಹೊಳಿಯಿಂದ ಸಮ್ಮಿಶ್ರ ಸರ್ಕಾರ ಪತನ!

ಬಿಜೆಪಿಯಲ್ಲಿ ಹಲವು ಮಂದಿ ಇಡಿ ಕೈಗೆ ಸಿಕ್ಕಿಕೊಂಡಿದ್ದಾರೆ, ಆದರೆ ಅವರ ವಿರುದ್ಧ ಯಾವ ತನಿಖೆಯಿಲ್ಲ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮನೆ ಮೇಲೆ ಕೆಲವು ತಿಂಗಳ ಹಿಂದೆ ಐಟಿ ದಾಳಿ ನಡೆದಿತ್ತು,

ಬೆಳಗಾವಿ: ಮಾಜಿ ಸಚಿವ ಡಿಕೆ ಶಿವಕುಮಾರ್ ಬಂಧನ ರಾಜಕೀಯ ಧ್ವೇಷದಿಂದ ಕೂಡಿದ್ದಾಗಿದೆ ಎಂದು ಕಾಂಗ್ರೆಸ್ ನಾಯಕ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. 

ಬಿಜೆಪಿಯಲ್ಲಿ ಹಲವು ಮಂದಿ ಇಡಿ ಕೈಗೆ ಸಿಕ್ಕಿಕೊಂಡಿದ್ದಾರೆ, ಆದರೆ ಅವರ ವಿರುದ್ಧ ಯಾವ ತನಿಖೆಯಿಲ್ಲ, ಅನರ್ಹ ಶಾಸಕ ರಮೇಶ್ ಜಾರಕಿಹೊಳಿ ಮನೆ ಮೇಲೆ ಕೆಲವು ತಿಂಗಳ ಹಿಂದೆ ಐಟಿ ದಾಳಿ ನಡೆದಿತ್ತು, ಅದಾದ ನಂತರ ಅವರು ತರಾತುರಿಯಲ್ಲಿ ಬಿಜೆಪಿಗೆ ಹಾರಿದರು, ಅದಾದ ನಂತರ ಇಡಿ ಕೈಗೆ ಸಿಕ್ಕಿ ಹಾಕಿಕೊಳ್ಳಬಹುದು ಎಂಬ ಭಯದಿಂದ ರಾಜ್ಯದಲ್ಲಿದ್ದ ಸಮ್ಮಿಶ್ರ ಸರ್ಕಾರ ಉರುಳಿಸಿದರು ಎಂದು ಸತೀಶ್ ಜಾರಕಿಹೊಳಿ ಆರೋಪಿಸಿದ್ದಾರೆ. 

ಬಿಜೆಪಿಗೆ ಸೇರುವಂತೆ ಸಿವಕುಮಾರ್ ಅವರನ್ನು ಆಹ್ವಾನಿಸಲಾಗಿತ್ತು,  ಆದರೆ ಅವರು ನಿರಾಕರಿಸಿದರು, ಹೀಗಾಗಿ ಅವರನ್ನು ಬಂಧಿಸಲಾಗಿದೆ,  ಕಾಂಗ್ರೆಸ್ ನ ಹಲವು ನಾಯಕರ ವಿರುದ್ಧ ಇದೇ ರೀತಿಯ ಪ್ರಕರಣಗಳು ದಾಖಲಾಗಿದ್ದವು, ಆದರೆ ಅವರು ಬಿಜೆಪಿ ಸೇರಿದ ಕಾರಣ ಅವರ ವಿರುದ್ಧದ ಕೇಸ್ ಗಳನ್ನು ಮುಚ್ಚಿ ಹಾಕಲಾಗಿದೆ ಎಂದು ಹೇಳಿದ್ದಾರೆ.

ಬಿಜೆಪಿ ಸರ್ಕಾರ ಯಾವತ್ತೂ ಜನರ ಒಳಿತಿಗಾಗಿ ಕೆಲಸ ಮಾಡಿಲ್ಲ, ಪ್ರವಾಹ ಪೀಡಿತ ಜನರಿಗೆ ,ಸರಿಯಾದ ರೀತಿಯಲ್ಲಿ ಪರಿಹಾರ ಕಾರ್ಯ ಕೈಗೊಂಡಿಲ್ಲ ಎಂದು ದೂರಿದ್ದಾರೆ,.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT