ಎಚ್ ಡಿ ದೇವೇಗೌಡ 
ರಾಜಕೀಯ

ವಿಧಾನಸಭೆಗೆ ಮಧ್ಯಂತರ ಚುನಾವಣೆ ಶತಸಿದ್ಧ, ಜೆಡಿಎಸ್ ಏಕಾಂಗಿ ಸ್ಪರ್ಧೆ: ಎಚ್ ಡಿ ದೇವೇಗೌಡ

ಉಪ ಚುನಾವಣೆಗೆ ಕಾಂಗ್ರೆಸ್‍ ಜೊತೆ ಮೈತ್ರಿಮಾಡಿಕೊಳ್ಳಲು ಪ್ರಯತ್ನ ನಡೆಸುತ್ತಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ವಿಧಾನಸಭೆ ಮಧ್ಯಂತರ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಸೋಮವಾರ ಹೇಳಿದ್ದಾರೆ.

ಬೆಂಗಳೂರು: ಉಪ ಚುನಾವಣೆಗೆ ಕಾಂಗ್ರೆಸ್‍ ಜೊತೆ ಮೈತ್ರಿಮಾಡಿಕೊಳ್ಳಲು ಪ್ರಯತ್ನ ನಡೆಸುತ್ತಿರುವ ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡ ಅವರು, ವಿಧಾನಸಭೆ ಮಧ್ಯಂತರ ಚುನಾವಣೆಗೆ ಸ್ವತಂತ್ರವಾಗಿ ಸ್ಪರ್ಧಿಸುವುದಾಗಿ ಸೋಮವಾರ ಹೇಳಿದ್ದಾರೆ.

2020ರ ಜನವರಿ ಅಥವಾ ಫೆಬ್ರವರಿ ತಿಂಗಳಿನಲ್ಲಿ ಮಧ್ಯಂತರ ಚುನಾವಣೆ ಎದುರಾಗುವ ಸಾಧ್ಯತೆಯಿದೆ ಎಂದು ಭವಿಷ್ಯ ನುಡಿದಿರುವ ಮಾಜಿ ಪ್ರಧಾನಿ, ಮಧ್ಯಂತರ ಚುನಾವಣೆಗೆ ಪಕ್ಷ ಏಕಾಂಗಿಯಾಗಿ ಕಣಕ್ಕಿಳಿಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ಇಂದಿನ ರಾಜಕೀಯ ಪರಿಸ್ಥಿತಿ ನೋಡಿದರೆ ಮಧ್ಯಂತರ ಚುನಾವಣೆ ಸಾಧ್ಯತೆ ಹೆಚ್ಚಿದೆ. ಮುಖಂಡರು ಮೈಮರೆಯದೇ ಪಕ್ಷ ಸಂಘಟನೆ ಮಾಡಿ. ಮಧ್ಯಂತರ ಚುನಾವಣೆ ಬಂದರೆ ನಾವು ಏಕಾಂಗಿಯಾಗಿ ಸ್ಪರ್ಧೆ ಮಾಡೋಣ ಎಂದು ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದಲ್ಲಿ ಒಳ್ಳೆಯ ಕೆಲಸ ಮಾಡಿದರೂ ಯಾರು ಬೆಂಬಲ ಕೊಡಲಿಲ್ಲ.  ಹೀಗಾಗಿ ನಾವು ಮತ್ತೆ ಆ ತಪ್ಪು ಮಾಡಲ್ಲ. ಏಕಾಂಗಿಯಾಗಿ ಎಲ್ಲಾ ಚುನಾವಣೆ ಎದುರಿಸೋಣ. ಕುಮಾರಸ್ವಾಮಿ ಸಿಎಂ ಆದಾಗ ಮಾಡಿದ ಕೆಲಸವನ್ನು ಮನೆ ಮನೆಗೆ ತಲುಪಿಸಿ. ಮಧ್ಯಂತರ ಚುನಾವಣೆ ನಡೆದರೆ ಜೆಡಿಎಸ್​ಗೆ ಗೆಲುವು ನಿಶ್ಚಿತ ಎಂದರು.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಜೂನ್ 30ರೊಳಗೆ ಮುಗಿಸಿ: ರಾಜ್ಯ ಸರ್ಕಾರಕ್ಕೆ 'ಸುಪ್ರೀಂ' ಗಡುವು

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಕ್ರಿಕೆಟ್ ಇತಿಹಾಸದಲ್ಲೇ ಮೊದಲು: ಅಂತಾರಾಷ್ಟ್ರೀಯ ಕ್ರಿಕೆಟ್ ಲೀಗ್ ನಲ್ಲಿ ಜೊತೆಯಾಗಿ ಕಣಕ್ಕಿಳಿದ ಅಪ್ಪ-ಮಗ.. ಯಾರಿವರು?

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

SCROLL FOR NEXT