ಶ್ರೀರಾಮುಲು 
ರಾಜಕೀಯ

ಜಿಲ್ಲಾ ಉಸ್ತುವಾರಿ ನೇಮಕ: ಬಳ್ಳಾರಿ ಮೇಲಿನ ಹಿಡಿತ ಕಳೆದುಕೊಂಡ್ರಾ ಶ್ರೀರಾಮುಲು! 

ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬಳ್ಳಾರಿ ಉಸ್ತುವಾರಿಯನ್ನಾಗಿ ನೇಮಿಸಿರುವುದರಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು  ಅವರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.

ಬಳ್ಳಾರಿ: ಉಪಮುಖ್ಯಮಂತ್ರಿ ಲಕ್ಷ್ಮಣ ಸವದಿ ಅವರನ್ನು ಬಳ್ಳಾರಿ ಉಸ್ತುವಾರಿಯನ್ನಾಗಿ ನೇಮಿಸಿರುವುದರಿಂದ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು  ಅವರಿಗೆ ಮತ್ತೊಮ್ಮೆ ಹಿನ್ನಡೆಯಾಗಿದೆ.

ಈ ಮೊದಲು ಶ್ರೀರಾಮುಲು ಅವರನ್ನು ಯಡಿಯೂರಪ್ಪ ಅವರ ಉತ್ತರಾಧಿಕಾರಿ ಎಂದೇ ಬಿಂಬಿಸಲಾಗಿತ್ತು. ಆದರೆ ಅವರಿಗೆ ಡಿಸಿಎಂ ಹುದ್ದೆ ತಪ್ಪುವ ಮೂಲಕ ಶ್ರೀರಾಮುಲು ಅವರ ಕನಸು ನುಚ್ಚು ನೂರಾಗಿದೆ.

ಸೋಮವಾರ ಸಿಎಂ ಯಡಿಯೂರಪ್ಪ ಅಧಿಕೃತವಾಗಿ ಜಿಲ್ಲಾ ಉಸ್ತುವಾರಿ ಸಚಿವರನ್ನು ಸೇಮಿಸಿದ್ದು,  ಬಳ್ಳಾರಿಗೆ ಲಕ್ಷ್ಮಣ ಸವದಿ ಅವರನ್ನು ನೇಮಿಸಲಾಗಿದೆ. ಶ್ರೀರಾಮುಲು ಅವರಿಗೆ ಯಾದಗಿರಿ ಉಸ್ತುವಾಹಿ ವಹಿಸಲಾಗಿದೆ,

ಆದರೆ ಈ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿರುವ ಶ್ರೀರಾಮುಲು, ಹೈಕಮಾಂಡ್ ನಿರ್ಧಾರಕ್ಕೆ ಬದ್ಧವಾಗಿರುವುದಾಗಿ ತಿಳಿಸಿದ್ದಾರೆ. ಜನಾರ್ದನ ರೆಡ್ಡಿ  ಅವರಿಲ್ಲದೇ ಶ್ರೀರಾಮುಲು ಕೈಯ್ಯಲ್ಲಿ ಬಳ್ಳಾರಿ ನಿಯಂತ್ರಣ ಸಾಧ್ಯವಿಲ್ಲ ಎಂಬುದು ಬಿಜೆಪಿ ಹೈಕಮಾಂಡ್ ಗೆ ಮನವರಿಕೆಯಾಗಿದೆ ಹೀಗಾಗಿ ಅವರಿಗೆ ಬಳ್ಳಾರಿ ಉಸ್ತುವಾರಿ ನೀಡಿಲ್ಲ ಪಕ್ಷದ ಮೂಲಗಳು ತಿಳಿಸಿವೆ, 

ಇದಕ್ಕೆ ತಾಜಾ ಉದಾಹರಣೆ ಎಂದರೇ ಕಳೆದ ಲೋಕಸಭೆ ಚುನಾವಣೆಯಲ್ಲಿ ಬಳ್ಳಾರಿ ಸಿಟಿಯಲ್ಲಿ ಪಕ್ಷಕ್ಕೆ ಅತಿ ಹೆಚ್ಚಿನ ಮತಗಳು ಬಂದಿವೆ, ಆದರೆ ಗ್ರಾಮೀಣ ಭಾಗದಲ್ಲಿ ಕಡಿಮೆಯಾಗಿದೆ. ರೆಡ್ಡಿ ಸಹೋದರರು ಮತ್ತು ಶ್ರೀರಾಮುಲು ಅವರ ಕಪಿಮುಷ್ಟಿಯಿಂದ  ಬಳ್ಳಾರಿಯನ್ನು ಬಿಡಿಸಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT