ಎಚ್,ವಿಶ್ವನಾಥ್ 
ರಾಜಕೀಯ

ರಮೇಶ್ ಕುಮಾರ್ ಆದೇಶಕ್ಕೆ ವಿರುದ್ಧವಾಗಿ ಸುಪ್ರೀಂ ಕೋರ್ಟ್ ತೀರ್ಪು ಬರಲಿದೆ: ಎಚ್.ವಿಶ್ವನಾಥ್

17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಕೋರ್ಟ್ ಸೆಪ್ಟಂಬರ್ 23 ಕ್ಕೆ ಮುಂದೂಡಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದು ಗೊಳಿಸಲಿದೆ ಎಂದು ಮಾಜಿ ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.

ಮೈಸೂರು: 17 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಸುಪ್ರೀಕೋರ್ಟ್ ಸೆಪ್ಟಂಬರ್ 23 ಕ್ಕೆ ಮುಂದೂಡಿದ್ದು, ಮಾಜಿ ಸ್ಪೀಕರ್ ರಮೇಶ್ ಕುಮಾರ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ರದ್ದು ಗೊಳಿಸಲಿದೆ ಎಂದು ಮಾಜಿ ಅನರ್ಹ ಶಾಸಕ ಎಚ್. ವಿಶ್ವನಾಥ್ ಹೇಳಿದ್ದಾರೆ.

ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಸರ್ಕಾರವನ್ನು ಪತನಗೊಳಿಸಿದ ಅನರ್ಹ ಶಾಸಕರು ಬಿಜೆಪಿ ಸರ್ಕಾರವನ್ನು ಅಧಿಕಾರಕ್ಕೆ ತರಲು ಪ್ರಮುಖ ಪಾತ್ರ ವಹಿಸಿದ್ದರು.

ಸುಪ್ರೀಂಕೋರ್ಟ್ ತಮ್ಮ ಪರ ತೀರ್ಪು ನೀಡಲಿದ್ದು, ಆದಷ್ಟು ಶೀಘ್ರವೇ ಯಡಿಯೂರಪ್ಪ ಅವರ ಸಂಪುಟ ಸೇರುವುದಾಗಿ ಅನರ್ಹ ಶಾಸಕರು ವಿಶ್ವಾಸ ವ್ಯಕ್ತ ಪಡಿಸಿದ್ದಾರೆ, 

ಮೂಲಗಳ  ಪ್ರಕಾರ ಕೆಲವು ಅನರ್ಹ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರ ಜೊತೆಗೂಡಿ ಕೇಂದ್ರ ಸಚಿವ ಅಮಿತ್ ಶಾ, ಅವರನ್ನು ಭೇಟಿ ಮಾಡಿ ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಚರ್ಚಿಸಿದ್ದಾರೆ ಎನ್ನಲಾಗಿದೆ. 

ಇನ್ನು ಪಕ್ಷದ ಹೈಕಮಾಂಡ್ ಮತ್ತು ಸಿಎಂ ಯಡಿಯೂರಪ್ಪ ಅನರ್ಹ ಶಾಸಕರಿಗೆ ಭರವಸೆ ನೀಡಿದ್ದು ತಾವು ನೀಡಿದ್ದ ಮಾತನ್ನು ಉಳಿಸಿಕೊಳ್ಳುವುದಾಗಿ ವಿಶ್ವಾಸ ತುಂಬಿದ್ದಾರೆ ಎನ್ನಲಾಗಿದೆ.

ಅರ್ಜಿ ವಿಚಾರಣೆ ಮುಂದೂಡಿರುವುದರಿಂದ ನಮಗೆ ಹಿನ್ನಡೆಯಾಗಿಲ್ಲ, ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆಯಿರುವುದಾಗಿ ಅನರ್ಹ ಶಾಸಕರಾದ ಎಸ್ ಟಿ ಸೋಮಶೇಖರ್ ಮತ್ತು ಎಚ್ ವಿಶ್ವನಾಥ್ ಹೇಳಿದ್ದಾರೆ.

ಮುಂಬರುವ ವಿಧಾನಸಭೆ ಉಪ ಚುನಾವಣೆಯನ್ನು ಗಮನದಲ್ಲಿರಿಸಿಕೊಂಡಿರುವ  ವಿಶ್ವನಾಥ್ ಪುತ್ರ ಅಮಿತ್ ದೇವರಹಟ್ಟಿ ಈಗಾಗಲೇ ಹುಣಸೂರು ಕ್ಷೇತ್ರದಲ್ಲಿ ತಮ್ಮ ಕೆಲಸ ಆರಂಭಿಸಿದ್ದಾರೆ, 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT