ಕೆ.ಎಸ್ ಈಶ್ವರಪ್ಪ 
ರಾಜಕೀಯ

ಸಿದ್ದರಾಮಯ್ಯ ವಿರುದ್ಧ 'ವಡ್ಡ' ಪದಬಳಕೆ: ಈಶ್ವರಪ್ಪ ವಿರುದ್ಧ ಬೋವಿ ಜನಾಂಗ ಆಕ್ರೋಶ

ಕೇಂದ್ರ ಸಚಿವ ಅಮಿತ್ ಶಾ ಅವರ ಬಗ್ಗೆ 'ದಡ್ಡ' ಪದ ಪ್ರಯೋಗ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ವಡ್ಡ' ಎಂದು ಕರೆದಿದ್ದ ಸಚಿವ ಈಶ್ವರಪ್ಪ ವಿರುದ್ಧ ಬೋವಿ  ಸಮುದಾಯ ಆಕ್ರೋಶ ವ್ಯಕ್ತ ಪಡಿಸಿದೆ.

ಬೆಂಗಳೂರು: ಕೇಂದ್ರ ಸಚಿವ ಅಮಿತ್ ಶಾ ಅವರ ಬಗ್ಗೆ 'ದಡ್ಡ' ಪದ ಪ್ರಯೋಗ ಮಾಡಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು 'ವಡ್ಡ' ಎಂದು ಕರೆದಿದ್ದ ಸಚಿವ ಈಶ್ವರಪ್ಪ ವಿರುದ್ಧ ಬೋವಿ  ಸಮುದಾಯ ಆಕ್ರೋಶ ವ್ಯಕ್ತ ಪಡಿಸಿದೆ.

ವಡ್ಡ ಸಮುದಾಯಕ್ಕೆ ಮಾಡಿರುವ ಅಪಮಾನಕ್ಕಾಗಿ ಈಶ್ವರಪ್ಪ ಅವರು ಬೇಷರತ್ ಕ್ಷಮಾಪಣೆ ಕೇಳಬೇಕು ಎಂದು ಮಾಜಿ ಸಂಸದ ಧ್ರುವ ನಾರಾಯಣ ಆಗ್ರಹಿಸಿದ್ದಾರೆ.

ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾ ಗೊಳಿಸಬೇಕು ಇಲ್ಲದಿದ್ದಲ್ಲಿ ದಸರಾ ಉತ್ಸವವನ್ನು ಬಾಯ್ಕಾಟ್ ಮಾಡಿ ಈಶ್ವರಪ್ಪ ಅವರಿಗೆ ಘೇರಾವ್ ಹಾಕುವುದಾಗಿ ಎಚ್ಚರಿಕೆ ನೀಡಿದ್ದಾರೆ. 

ಶಿವಮೊಗ್ಗದ ವೀರಶೈವ ಕಲ್ಯಾಣ ಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಜನ್ಮದಿನಾಚರಣೆ ಪ್ರಯುಕ್ತ ಮಂಗಳವಾರ ಹಮ್ಮಿಕೊಂಡಿದ್ದ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪಾಲ್ಗೊಂಡು ನಂತರ ಸುದ್ದಿಗಾರರೊಂದಿಗೆ ಮಾತನಾಡಿದ್ದ ಈಶ್ವರಪ್ಪ
ಉತ್ತರಿಸುವ ಭರದಲ್ಲಿ'ವಡ್ಡ' ಪದ ಪ್ರಯೋಗ ಮಾಡಿದ್ದರು.

ತಕ್ಷಣ ಸುಧಾರಿಸಿಕೊಂಡ ಅವರು, ವಡ್ಡರ ಬಗ್ಗೆ ನನಗೆ ಅಪಾರ ಗೌರವ ಇದೆ. ಅವರು ಶ್ರಮಿಕರು ಎಂದು ಸಮಜಾಯಿಷಿ ನೀಡಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

ಪಶ್ಚಿಮ ಬಂಗಾಳ ವೈದ್ಯಕೀಯ ವಿದ್ಯಾರ್ಥಿನಿ ಗ್ಯಾಂಗ್ ರೇಪ್ ಕೇಸ್: ಮೂವರ ಬಂಧನ

SCROLL FOR NEXT