ಎಚ್ ಡಿ ರೇವಣ್ಣ 
ರಾಜಕೀಯ

ಮುಖ್ಯ ಎಂಜಿನಿಯರ್ ಹುದ್ದೆಗಳನ್ನು ಮಾರುಕಟ್ಟೆಯಲ್ಲಿ ಬಿಡ್ ಮಾಡುವಂತೆ ಹರಾಜಿಗಿಟ್ಟಿದ್ದಾರೆ- ಎಚ್ ಡಿ ರೇವಣ್ಣ

ರಾಜ್ಯದಲ್ಲಿ ಎಪಿಎಂಸಿ ಮಾರುಕಟ್ಟೆಗಳಲ್ಲಿ ತರಕಾರಿ, ರೈತರ ಉತ್ಪನ್ನಗಳಿಗೆ ಬಿಡ್ ಕೂಗುವಂತೆ ಮುಖ್ಯ ಎಂಜಿನಿಯರ್ ಹುದ್ದೆಗಳಿಗೆ ಬಿಡ್ ಕೂಗಲಾಗುತ್ತಿದೆ. ಈ ಪಾಪದ ಕೆಲಸ ಮಾಡಲು ಯಡಿಯೂರಪ್ಪ ಮುಖ್ಯಮಂತ್ರಿ ಆಗಿರಬೇಕೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಸರ್ಕಾರದ ನಡೆ ವಿರುದ್ಧ ಕಿಡಿಕಾರಿದ್ದಾರೆ.

ಹಾಸನ: ರಾಜ್ಯದಲ್ಲಿ ಎಪಿಎಂಸಿ ಮಾರುಕಟ್ಟೆಗಳಲ್ಲಿ ತರಕಾರಿ, ರೈತರ ಉತ್ಪನ್ನಗಳಿಗೆ ಬಿಡ್ ಕೂಗುವಂತೆ ಮುಖ್ಯ ಎಂಜಿನಿಯರ್ ಹುದ್ದೆಗಳಿಗೆ ಬಿಡ್ ಕೂಗಲಾಗುತ್ತಿದೆ. ಈ ಪಾಪದ ಕೆಲಸ ಮಾಡಲು ಯಡಿಯೂರಪ್ಪ ಮುಖ್ಯಮಂತ್ರಿ ಆಗಿರಬೇಕೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಸರ್ಕಾರದ ನಡೆ ವಿರುದ್ಧ ಕಿಡಿಕಾರಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಖ್ಯ ಎಂಜಿನಿಯರ್ ಗಳ ಪದೋನ್ನತಿ ಕಡತವನ್ನು ಎರಡು ತಿಂಗಳುಗಳಿಂದ ವಿಲೇವಾರಿ ಮಾಡದೆ ಇರಿಸಿಕೊಂಡಿದ್ದ ಮುಖ್ಯಮಂತ್ರಿ ಯಡಿಯೂರಪ್ಪ, 24 ಮುಖ್ಯ ಎಂಜಿನಿಯರ್ ಗಳಿಗೆ ಬಡ್ತಿ ಮೂಲಕ ಪದೋನ್ನತಿ ನೀಡುವ ಕಡತಕ್ಕೆ ಸಹಿ ಹಾಕಿದ್ದಾರೆ.24 ಜನರಲ್ಲಿ 17 ಎಂಜಿನಿಯರ್ ಗಳಿಗೆ ಮಾತ್ರ ಬಡ್ತಿ ಆದೇಶ ನೀಡಿದ್ದು, ಒಂದು ಸಮಾಜಕ್ಕೆ ಸೇರಿದವರು ಎಂಬ ಕಾರಣಕ್ಕಾಗಿ ಏಳು ಜನರ ಪದೋನ್ನತಿ ತಡೆ ಹಿಡಿದಿದ್ದಾರೆ. ಒಂದು ಸಮಾಜವನ್ನು ಗುರಿಯಾಗಿಸಿಕೊಂಡು ಕೆಲಸ ಮಾಡುತ್ತಿರುವುದು ನಾಚಿಕೇಗೇಡಿನ ಸಂಗತಿ ಎಂದರು.

ಒಂದೊಂದು ಬಡ್ತಿಗೆ ಎಷ್ಟೆಷ್ಟು ಹಣ ಪಡೆದಿದ್ದೀರಾ? ಈ ಅಧಿಕಾರಿಗಳ ಮೇಲೆ ತನಿಖೆ ಏಕೆ ನಡೆಯುತ್ತಿಲ್ಲ? ಏಳು ಜನರ ಬಡ್ತಿಗೆ ತಡೆ ಹಿಡಿದಿರುವ ಕಾರಣ ಬಹಿರಂಗಪಡಿಸಲಿ ಎಂದು ಅವರು ಸರ್ಕಾರಕ್ಕೆ ಸವಾಲು ಹಾಕಿದರು.

ಒಕ್ಕಲಿಗ ಸಮಾಜವನ್ನು ಮುಗಿಸಬೇಕು ಎನ್ನುವ ಕಾರಣಕ್ಕಾಗಿಯೇ ಡಿಕೆ ಶಿವಕುಮಾರ್ ಅವರನ್ನು ಗುರಿಯಾಗಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಆದರೆ, ಆ ಸಮಾಜವನ್ನು ಮುಗಿಸಲು ಬಿಜೆಪಿಯಿಂದ ಸಾಧ್ಯವಿಲ್ಲ. ಎಪ್ಪತ್ತೈದು ವರ್ಷ ದಾಟಿದವರಿಗೆ ಹುದ್ದೆ ಇಲ್ಲ ಎಂಬ ನಿಯಮದಿಂದ ಯಡಿಯೂರಪ್ಪ ಅವರಿಗೆ ಬಿಜೆಪಿ ವಿನಾಯಿತಿ ನೀಡಿದೆ. ಅವರಿಗೆ ದೇವರು ಶಿಕ್ಷೆ ಕೊಡುವ ಕಾಲ ಬರುತ್ತದೆ. ಸಮಾಜದವರನ್ನು ಮುಗಿಸಲು ಪ್ರಯತ್ನ ಪಟ್ಟವರು ಮನೆಗೆ ಹೋಗಿದ್ದಾರೆ ಎಂದು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.

ದೇವೇಗೌಡರ ಕುಟುಂಬದಲ್ಲಿ ಉತ್ತರಾಧಿಕಾರಿ ನೇಮಕ ಪದ್ಧತಿ ಇಲ್ಲ. ಜನರು ಒಪ್ಪುವವರೆಗೆ ಮಾತ್ರ ರಾಜಕೀಯದಲ್ಲಿರುತ್ತೇವೆ. ಆದರೆ, ಮುಖ್ಯಮಂತ್ರಿ ಯಡಿಯೂರಪ್ಪ ತಮ್ಮ ಉತ್ತರಾಧಿಕಾರಿಯಾಗಿ ಬಿ.ವೈ. ವಿಜಯೇಂದ್ರ ಅವರನ್ನು ನೇಮಿಸಿದ್ದಾರೆ. ಮುಂದೆ ಅವರಿಗೆ ಅಧಿಕಾರ ಸಿಗುವುದಿಲ್ಲ ಎಂದು ತಮ್ಮ ಮಕ್ಕಳಿಗೆ, ಮೊಮ್ಮಕ್ಕಳಿಗೆ ಸಾಕಾಗುವಷ್ಟು ಹಣ ಮಾಡಿಕೊಳ್ಳುವ ಉದ್ದೇಶದಿಂದ ತಮ್ಮ ಪುತ್ರನಿಗೆ ಪೂರ್ಣ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ವಲಸೆ ವೀಸಾ ಅರ್ಜಿದಾರರಿಗೆ ಟ್ರಂಪ್‌ ಸರ್ಕಾರ ಶಾಕ್‌: ವಲಸೆ ನೀತಿ ಮತ್ತಷ್ಟು ಕಠಿಣ, ವಿಶ್ವದಾದ್ಯಂತ VISA ಸಂದರ್ಶನಗಳಿಗೆ ಬ್ರೇಕ್‌..!

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಡವರ ಬದುಕಿಗೆ ಬೆಲೆ ಏರಿಕೆ ಬರೆ: ‘ಅಚ್ಛೇ ದಿನ್ ಆಯ್ತು ದುಬಾರಿ ದಿನ್: ಅಗತ್ಯ ವಸ್ತುಗಳ ಬೆಲೆ ಏರಿಕೆ ಬೆನ್ನಲ್ಲೇ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ವಾಗ್ದಾಳಿ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!