ರಾಜಕೀಯ

ಕೊಟ್ಟಿದ್ದನ್ನು ಕಿತ್ತುಕೊಳ್ಳುವುದು ಯಾವ ನ್ಯಾಯ ? ಹೆಚ್.ಡಿ.ಕುಮಾರಸ್ವಾಮಿ

Shilpa D

ಬೆಂಗಳೂರು: ವಿರೋಧ ಪಕ್ಷಗಳ ಶಾಸಕರ ಕ್ಷೇತ್ರಗಳಿಗೆ ಅನುದಾನ ಕಡಿತಗೊಳಸಿರುವ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರುದ್ಧ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಕಿಡಿ ಕಾರಿದ್ದು, ಕೊಟ್ಟಿದನ್ನು ಕಿತ್ತುಕೊಳ್ಳುವುದು ಯಾವ ರೀತಿಯ ನ್ಯಾಯ? ಎಂದು ಪ್ರಶ್ನಿಸಿದ್ದಾರೆ.

ಯಡಿಯೂರಪ್ಪ ಆಪರೇಷನ್ ಕಮಲಕ್ಕೆ ಕುಖ್ಯಾತಿಯಾಗಿದ್ದಾರೆ. ಆಪರೇಷನ್ ಕಮಲ ಮೂಲಕ ರಾಜಕಾರಣದಲ್ಲಿ ನೀಚಪರಂಪರೆಗೆ ಕಾರಣವಾಗಿದ್ದ ಯಡಿಯೂರಪ್ಪ ಇದೀಗ ಮತ್ತೊಂದು ಹೊಸ ಪರಂಪರೆಗೆ ನಾಂದಿ ಹಾಡಿದ್ದಾರೆ. 

ಬಹುಮತ ಸರ್ಕಾರ ನಿಗದಿಪಡಿಸಿದ್ದ ಕ್ಷೇತ್ರಗಳ ಅಭಿವೃದ್ಧಿಯ ಅನುದಾನವನ್ನು ಕಡಿತ ಮಾಡಿ ತಮ್ಮ 'ಪಕ್ಷಪಾತಿ' ನಿಲುವನ್ನು ಪ್ರತಿಪಾದಿಸಿದ್ದಾರೆ. ಅಗತ್ಯವಿದ್ದರೆ ಮತ್ತಷ್ಟು ನೀಡಬೇಕೇ ಹೊರತು ಕೊಟ್ಟಿರುವುದನ್ನು ಕಸಿದುಕೊಳ್ಳಬಾರದು. ಕೊಟ್ಟಿರುವುದನ್ನು ಕಿತ್ತುಕೊಳ್ಳುವುದು ನ್ಯಾಯವೇ ? ಎಂದು ಕುಮಾರಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.

SCROLL FOR NEXT