ಎಚ್.ಡಿ ದೇವೇಗೌಡ ಮತ್ತು ಕುಮಾರಸ್ವಾಮಿ 
ರಾಜಕೀಯ

'ಎಚ್.ಡಿ ದೇವೇಗೌಡ ಮತ್ತು ಕುಮಾರಸ್ವಾಮಿಗೆ ದೇಹವೆಲ್ಲಾ ಬಂಗಾರ, ಕಿವಿ ಮಾತ್ರ ಹಿತ್ತಾಳೆ'

ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ದೇಹವೆಲ್ಲಾ ಬಂಗಾರ, ಕಿವಿ ಮಾತ್ರ ಹಿತ್ತಾಳೆ, ಹೀಗಾಗಿ ಯಾರು ಏನು ಚಾಡಿ ಹೇಳಿದರೂ ಕೇಳಿ ಬಿಡುತ್ತಾರೆ

ಮಂಡ್ಯ: ಮಾಜಿ ಪ್ರಧಾನಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿಗೆ ದೇಹವೆಲ್ಲಾ ಬಂಗಾರ, ಕಿವಿ ಮಾತ್ರ ಹಿತ್ತಾಳೆ, ಹೀಗಾಗಿ ಯಾರು ಏನು ಚಾಡಿ ಹೇಳಿದರೂ ಕೇಳಿ ಬಿಡುತ್ತಾರೆ ಎಂದು ಮಾಜಿ ಸಂಸದ ಎಲ್.ಆರ್. ಶಿವರಾಮೇಗೌಡ ಅಸಮಾಧಾನ ವ್ಯಕ್ತ ಪಡಿಸಿದ್ದಾರೆ.

ನಾಗಮಂಗಲದಲ್ಲಿ ಮಾತನಾಡಿದ ಅವರು, ಕೆಲ ಭಟ್ಟಂಗಿಗಳು ಕುಮಾರಸ್ವಾಮಿಗೆ ನನ್ನ ಬಗ್ಗೆ ಚಾಡಿ ಚುಚ್ಚಿದ್ದಾರೆ ಎಂದು ಕಿಡಿಕಾರಿದರು.ಜೆಡಿಎಸ್ ಮತ್ತು ನನ್ನ ಸಂಬಂಧ ಚೆನ್ನಾಗಿದೆ. 20 ವರ್ಷದಿಂದ ಅಧಿಕಾರ ಇಲ್ಲದ ನನ್ನನ್ನು ಜೆಡಿಎಸ್ ಪಕ್ಷ ಸಂಸದನನ್ನಾಗಿ ಮಾಡಿದೆ. ಕುಮಾರಸ್ವಾಮಿ ನಮ್ಮ ನಾಯಕ. ಏಕವಚನದಲ್ಲಿ ಮಾತನಾಡೋ ರೈಟ್ಸ್  ಇದೆ ಮಾತನಾಡಲಿ ಬಿಡಿ ಎಂದರು.

ನಿಖಿಲ್ ಕುಮಾರಸ್ವಾಮಿ ಸೋಲಿಗೆ ಮಂಡ್ಯ ಜೆಡಿಎಸ್ ಮುಖಂಡರು ಕಾರಣರಲ್ಲ. ಜಿಲ್ಲೆಯ ಜನ ಸ್ವಾಭಿಮಾನಕ್ಕೆ ಮತಕೊಡಬೇಕೆಂದು ಕೊಟ್ಟಿದ್ದಾರೆ. ಜೆಡಿಎಸ್ ವರಿಷ್ಠರ ಮೇಲೆ ಗೌರವವಿದೆ. ದೇವೇಗೌಡರು ಹಲವು ಒಕ್ಕಲಿಗ ನಾಯಕರನ್ನು ಬೆಳೆಸಿದ್ದಾರೆ. ನನ್ನ ಮುಂದೆ ಯಾವುದೇ ಅವಕಾಶ ಇಲ್ಲ. ನಾನು ಜೆಡಿಎಸ್ ಪಕ್ಷದಲ್ಲೇ ಇರುತ್ತೇನೆ ಎಂದು ಸ್ಪಷ್ಟಪಡಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

SCROLL FOR NEXT