ಲಕ್ಷ್ಮಣ್ ಸವದಿ 
ರಾಜಕೀಯ

ಅಥಣಿಯಿಂದ ಲಕ್ಷ್ಮಣ್ ಸವದಿ ಸ್ಪರ್ಧಿಸುವುದಿಲ್ಲ: ರಮೇಶ್ ಜಿಗಜಿಣಗಿ 

ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕರಿಗೆ ಅವಕಾಶವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿರುವ ಹಿನ್ನಲೆಯಲ್ಲಿ ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ. 

ವಿಜಯಪುರ: ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕರಿಗೆ ಅವಕಾಶವಿಲ್ಲ ಎಂದು ಚುನಾವಣಾ ಆಯೋಗ ಸ್ಪಷ್ಟನೆ ನೀಡಿರುವ ಹಿನ್ನಲೆಯಲ್ಲಿ ಬಿಜೆಪಿ ಇಕ್ಕಟ್ಟಿಗೆ ಸಿಲುಕಿದೆ. ಮೈತ್ರಿ ಸರ್ಕಾರ ಮುರಿದು ಬಿದ್ದು ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಭಾರತೀಯ ಜನತಾ ಪಾರ್ಟಿ ಅಧಿಕಾರಕ್ಕೆ ಬರುವಲ್ಲಿ ಅನರ್ಹ ಶಾಸಕರು ಅದರಲ್ಲೂ ರಮೇಶ್ ಜಾರಕಿಹೊಳಿಯವರದ್ದು ಬಹುಮುಖ್ಯ ಪಾತ್ರವಿದೆ. ಹೀಗಾಗಿ ಈ ಸಂದರ್ಭದಲ್ಲಿ ಬಿಜೆಪಿ ಕೂಡ ಕೈಕೊಟ್ಟುಬಿಟ್ಟರೆ ಅನರ್ಹ ಶಾಸಕರಿಗೆ ದ್ರೋಹ ಬಗೆದಂತೆ ಆಗುತ್ತದೆ.


ಭಾರತೀಯ ಜನತಾ ಪಕ್ಷ ಅನರ್ಹ ಶಾಸಕರ ಕೈಬಿಡುವುದಿಲ್ಲ ಎಂದು ಮಾಜಿ ಕೇಂದ್ರ ಸಚಿವ ರಮೇಶ್ ಜಿಗಜಿಣಗಿ ಹೇಳುತ್ತಾರೆ. ನಿನ್ನೆ ವಿಜಯಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಿಗಜಿಣಗಿ, ರಮೇಶ್ ಜಾರಕಿಹೊಳಿಯಿಂದಾಗಿ ಬಿಜೆಪಿ ಇಂದು ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದಿದೆ. ಪಕ್ಷ ಅವರ ಶ್ರಮವನ್ನು ಗುರುತಿಸಿ ಗೋಕಾಕ್ ನಿಂದ ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಲಿದೆ ಎನ್ನುತ್ತಾರೆ.


15 ಕ್ಷೇತ್ರಗಳಿಗೆ ಅಕ್ಟೋಬರ್ 21ರಂದು ಉಪ ಚುನಾವಣೆ ನಡೆಸುವುದಾಗಿ ನಿನ್ನೆ ಭಾರತೀಯ ಚುನಾವಣಾ ಆಯೋಗ ಪ್ರಕಟಿಸಿದೆ. ನಿನ್ನೆಯಿಂದಲೇ ಈ ಕ್ಷೇತ್ರಗಳಲ್ಲಿ ಚುನಾವಣಾ ನೀತಿ ಸಂಹಿತೆ ಜಾರಿಗೆ ಬಂದಿದೆ. ಅಥಣಿ ಕ್ಷೇತ್ರದಿಂದ ಕಾಂಗ್ರೆಸ್ ನಲ್ಲಿದ್ದ ಮಹೇಶ್ ಕುಮಟಳ್ಳಿ ರಾಜೀನಾಮೆ ನೀಡಿ ಬಿಜೆಪಿ ಅಧಿಕಾರಕ್ಕೆ ಬರಲು ಸಹಾಯ ಮಾಡಿರುವುದರಿಂದ ಉಪ ಮುಖ್ಯಮಂತ್ರಿ ಲಕ್ಷ್ಮಣ್ ಸವದಿಗೆ ಅಥಣಿಯಿಂದ ಸ್ಪರ್ಧಿಸಲು ಟಿಕೆಟ್ ನೀಡುವುದಿಲ್ಲ, ಲಕ್ಷ್ಮಣ್ ಸವದಿಗೆ ಪಾರ್ಟಿ ಹೈಕಮಾಂಡ್ ಬೇರೆಯದೇ ಯೋಜನೆ ಹಾಕಿಕೊಂಡಿದ್ದು ಅದು ಭವಿಷ್ಯದಲ್ಲಿ ಗೊತ್ತಾಗಲಿದೆ ಎನ್ನುತ್ತಾರೆ ರಮೇಶ್ ಜಿಗಜಿಣಗಿ.


ಕಾಂಗ್ರೆಸ್ ಮಾಜಿ ಗೃಹ ಸಚಿವ ಎಂಬಿ ಪಾಟೀಲ್, ಉಪ ಚುನಾವಣೆಯಲ್ಲಿ ಜನರು ಕಾಂಗ್ರೆಸ್ ಪರ ಶೇಕಡಾ 100ರಷ್ಟು ಮತ ಹಾಕಲಿದ್ದಾರೆ ಎಂಬ ವಿಶ್ವಾಸ ನನಗಿದೆ. ಅನರ್ಹ ಶಾಸಕರ ಬಗ್ಗೆ ಕ್ಷೇತ್ರದ ಜನತೆಗೆ ಸಿಟ್ಟು ಇದ್ದು ಅದನ್ನು ಉಪ ಚುನಾವಣೆಯ ಫಲಿತಾಂಶದಲ್ಲಿ ಹೊರಹಾಕಲಿದ್ದಾರೆ. ಕಾಂಗ್ರೆಸ್ ಕನಿಷ್ಠ 11 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಲಿದೆ ಎಂದರು. 


ನಿನ್ನೆ ಉಪ ಚುನಾವಣೆ ದಿನಾಂಕಗಳನ್ನು ಚುನಾವಣಾ ಆಯೋಗ ಘೋಷಣೆ ಮಾಡುತ್ತಿದ್ದಂತೆ ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಮತ್ತು ಬಿಜೆಪಿ ಪಕ್ಷಗಳು ಚುನಾವಣಾ ಪ್ರಚಾರಕ್ಕೆ ಸಿದ್ದತೆ ಮಾಡಿಕೊಂಡಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT