ಸಂಗ್ರಹ ಚಿತ್ರ 
ರಾಜಕೀಯ

ಉಪ ಸಮರದಲ್ಲಿ ಅನರ್ಹರ ಸ್ಪರ್ಧೆ; ಸೋಮವಾರ ಭವಿಷ್ಯ ನಿರ್ಧಾರ!

ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನ ಅನರ್ಹ ಶಾಸಕರ ಭವಿಷ್ಯ ಸೋಮವಾರ ನಿರ್ಧಾರವಾಗಲಿದ್ದು, ಇದಕ್ಕೂ ಮುನ್ನವೇ ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವುದು ಅನರ್ಹಶಾಸಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ನ ಅನರ್ಹ ಶಾಸಕರ ಭವಿಷ್ಯ ಸೋಮವಾರ ನಿರ್ಧಾರವಾಗಲಿದ್ದು, ಇದಕ್ಕೂ ಮುನ್ನವೇ ಕೇಂದ್ರ ಚುನಾವಣಾ ಆಯೋಗ ಉಪ ಚುನಾವಣೆಗೆ ದಿನಾಂಕ ಘೋಷಣೆ ಮಾಡಿರುವುದು ಅನರ್ಹಶಾಸಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ರಾಜ್ಯದಲ್ಲಿ ಅನರ್ಹ ಶಾಸಕರ ಕ್ಷೇತ್ರಗಳಿಗೆ ಚುನಾವಣೆ ಘೋಷಣೆಯಾಗಿದ್ದು, ನಿನ್ನೆ ಕೇಂದ್ರ ಚುನಾವಣಾ ಆಯೋಗ ಮಹಾರಾಷ್ಟ್ರ ಮತ್ತು ಹರ್ಯಾಣ ವಿಧಾನಸಭೆಗೆ ಚುನಾವಣೆ ಘೋಷಣೆ ಮಾಡಿದ ಬೆನ್ನಲ್ಲೇ ಕರ್ನಾಟಕದ ವಿವಿಧ ಕ್ಷೇತ್ರಗಳಿಗೂ ಉಪ ಚುನಾವಣೆ ಘೋಷಣೆ ಮಾಡಿದೆ. 

ಆದರೆ ಹಾಲಿ ಉಪ ಚುನಾವಣೆಯಲ್ಲಿ ಅನರ್ಹಗೊಂಡ ಶಾಸಕರು ಸ್ಪರ್ಧೆ ಮಾಡುವಂತಿಲ್ಲ ಎಂದು ಆಯೋಗ ಸ್ಪಷ್ಟ ಪಡಿಸಿದ್ದು, ಇದು ಅನರ್ಹ ಶಾಸಕರಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ. ಇದೇ ಸೋಮವಾರ ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಹೀಗಾಗಿ ನ್ಯಾಯಾಲಯ ಯಾವ ತೀರ್ಪುನೀಡಲಿದೆ ಎಂಬುದರ ಮೇಲೆ ಅನರ್ಹ ಶಾಸಕರ ಉಪ ಚುನಾವಣಾ ಸ್ಪರ್ಧೆಯ ಭವಿಷ್ಯ ಅಡಗಿದೆ. 

ಇನ್ನು ನಿನ್ನೆ ಚುನಾವಣಾ ಆಯೋಗ ಉಪ ಸಮರದ ವೇಳಾಪಟ್ಟಿ ಘೋಷಣೆ ಮಾಡಿದ್ದು, ಅಥಣಿ, ಕಾಗವಾಡ, ಗೋಕಾಕ್, ಯಲ್ಲಾಪುರ, ಹಿರೇಕೆರೂರು, ರಾಣಿಬೆನ್ನೂರು, ವಿಜಯನಗರ, ಚಿಕ್ಕಬಳ್ಳಾಪುರ, ಕೆಆರ್ ಪುರ, ಯಶವಂತಪುರ, ಮಹಾಲಕ್ಷ್ಮೀ ಲೇಔಟ್, ಶಿವಾಜಿನಗರ, ಹೊಸಕೋಟೆ, ಕೆಆರ್ ಪೇಟೆ, ಹುಣಸೂರು ಕ್ಷೇತ್ರಗಳಿಗೆ ಅ.21 ರಂದು ಮತದಾನ ನಡೆಯಲಿದ್ದು ಅ.24 ರಂದು ಮತ ಎಣಿಕೆ ನಡೆಯಲಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT