ಸಂಗ್ರಹ ಚಿತ್ರ 
ರಾಜಕೀಯ

ಉಪ ಚುನಾವಣೆಗೆ 3 ಪಕ್ಷಗಳ ಭರದ ಸಿದ್ಧತೆ: ಸಂದಿಗ್ಧ ಸ್ಥಿತಿಯಲ್ಲಿ ಅನರ್ಹ ಶಾಸಕರು

ರಾಜ್ಯದ 17 ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿರುವಾಗಲೇ ಕೇಂದ್ರ ಚುನಾವಣಾ ಆಯೋಗ ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಪ್ರಕಟಗೊಳಿಸಿದ ಬಳಿಕ ಅನರ್ಹ ಶಾಸಕರಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗಿದೆ. 

ಬೆಂಗಳೂರು: ರಾಜ್ಯದ 17 ಅನರ್ಹ ಶಾಸಕರ ಪ್ರಕರಣ ಸುಪ್ರೀಂಕೋರ್ಟ್ ಅಂಗಳದಲ್ಲಿರುವಾಗಲೇ ಕೇಂದ್ರ ಚುನಾವಣಾ ಆಯೋಗ ರಾಜ್ಯದ 15 ಕ್ಷೇತ್ರಗಳಿಗೆ ಉಪ ಚುನಾವಣೆ ಪ್ರಕಟಗೊಳಿಸಿದ ಬಳಿಕ ಅನರ್ಹ ಶಾಸಕರಲ್ಲಿನ ಆತಂಕ ಮತ್ತಷ್ಟು ಹೆಚ್ಚಾಗಿದೆ. 

ಉಪ ಚುನಾವಣೆಗೆ ಚುನಾವಣಾ ಆಯೋಗ ದಿನಾಕ ಪ್ರಕಟಿಸುತ್ತಿದ್ದಂತೆಯೇ ರಾಜ್ಯದ ಪ್ರಮುಖ ಮೂರು ಪಕ್ಷಗಳು ಚುನಾವಣೆಗೆ ಭರದ ಸಿದ್ಥತೆಗಳನ್ನು ನಡೆಸಲು ಆರಂಭಿಸಿದೆ. 

15 ವಿಧಾನಸಭಾ ಕ್ಷೇತ್ರಗಳ ಚುನಾವಣೆ ಅ.21 ರಂದು ನಡೆಯಲಿದ್ದು, ಮತ ಎಣಿಕೆ ಕಾರ್ಯ ಅ.24ಕ್ಕೆ ನಡೆಯಲಿದೆ. 15 ವಿಧಾನಸಭಾ ಕ್ಷೇತ್ರಗಳ ಪೈಕಿ 7 ಉತ್ತರ ಕರ್ನಾಟಕದ್ದೇ ಆಗಿದೆ. ಈಗಾಗಲೇ 11 ಜಿಲ್ಲೆಗಳಲ್ಲಿ ನೀತಿ ಸಂಹಿತೆ ಜಾರಿಯಾಗಿದೆ. 

ಉಪಚುನಾವಣೆ ಹಿನ್ನಲೆಯಲ್ಲಿ ನೀತಿ ಸಂಹಿತೆ ಜಾರಿ ಮಾಡಿರುವ ಚುನಾವಣಾ ಆಯೋಗ ಪ್ರವಾಹ ಪರಿಹಾರ ಕಾರ್ಯಗಳು ಹಾಗೂ ತುರ್ತು ಕಾರ್ಯಗಳನ್ನು ನಡೆಸುವಂತೆ ಅನುಮತಿ ನೀಡಿದೆ. 

ರಾಯಚೂರು ಜಿಲ್ಲೆಯ ಮಸ್ಕಿ ಹಾಗೂ ಆರ್.ಆರ್.ನಗರ ವಿಧಾನಸಭಾ ಕ್ಷೇತ್ರಗಳ 2018 ವಿಧಾನಸಭಾ ಚುನಾವಣೆ ವಿಚಾರಣೆ ಹೈಕೋರ್ಟ್ ನಲ್ಲಿ ಬಾಕಿಯಿರಿುವುದರಿಂದ ಈ ಎರಡು ಕ್ಷೇತ್ರಗಳಿಗೆ ಉಪ ಚುನಾವಣೆ ದಿನಾಂಕ ಘೋಷಣೆ ಮಾಡಿಲ್ಲ. 

ಈ ಉಪ ಚುನಾಣೆ ಬಿಜೆಪಿ ಸರ್ಕಾರಕ್ಕೆ ಅತ್ಯಂತ ಮುಖ್ಯವಾಗಿದೆ. ಸದನದ ಸಂಖ್ಯಾಬಲ 207 ಆಗಿದ್ದು, ಬಿಜೆಪಿ 104 ಶಾಸಕರನ್ನು ಹೊಂದಿದೆ. ಮತ್ತೆ ಅಧಿಕಾರಕ್ಕೆ ಬರಲು ಉಪ ಚುನಾವಣೆಯಲ್ಲಿ ಬಿಜೆಪಿ 10 ಸ್ಥಾನಗಳಲ್ಲಿ ಗೆಲವು ಸಾಧಿಸಲೇಬೇಕಿದೆ. ಉಪ ಚುನಾವಣೆಯಲ್ಲಿ ಗೆಲುವು ತಮ್ಮದಾಗಿಸಿಕೊಳ್ಳಲು ಕಾಂಗ್ರೆಸ್ ಹಾಗೂ ಜೆಡಿಎಸ್ ಭಾರಿ ಹೋರಾಟಕ್ಕಿಳಿದಿದ್ದು, ಬಿಜೆಪಿಯ ಗೆಲುವಿನ ಹಾದಿ ಅಷ್ಟೊಂದು ಸುಲಭವಾಗಿಲ್ಲ. 

ಈ ನಡುವೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನಗರದ ಮಲ್ಲೇಶ್ವರಂನಲ್ಲಿರುವ ಸರ್ಕಾರಿ ಗೆಸ್ಟ್ ಹೌಸ್ ನಲ್ಲಿ ರೆಬೆಲ್ ಶಾಸಕರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. 

ಇದಲ್ಲದೆ, ರಾಜಧಾನಿ ದೆಹಲಿಗೆ ತೆರಳಿ ಚುನಾವಣಾ ತಂತ್ರಗಳ ಕುರಿತಂತೆ ಪಕ್ಷದ ವರಿಷ್ಟರೊಂದಿಗೆ ಮಾತುಕತೆ ನಡೆಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT