ಸಾಂದರ್ಭಿಕ ಚಿತ್ರ 
ರಾಜಕೀಯ

ಉಪ ಚುನಾವಣೆ: ನಿಷ್ಠೆ ಪಕ್ಷಕ್ಕೋ, ನಾಯಕನಿಗೋ? ಅಡಕತ್ತರಿಯಲ್ಲಿ ಸ್ಥಳೀಯ ನಾಯಕರು!

ಅನರ್ಹ ಶಾಸಕರ 15 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಕೇವಲ ಶಾಸಕರು ಮಾತ್ರ ಗೊಂದಲದಲ್ಲಿ ಮುಳುಗಿಲ್ಲ,  ಸ್ಥಳೀಯ ಕಾರ್ಯಕರ್ತರು ಹಾಗೂ ಕೌನ್ಸಿಲರ್ ಮತ್ತು ಪಂಚಾಯಿತಿ ಸದಸ್ಯರುಗಳು ಕೂಡ ಫುಲ್ ಕನ್ ಫ್ಯೂಸ್ ಆಗಿದ್ದಾರೆ. 

ಬೆಂಗಳೂರು: ಅನರ್ಹ ಶಾಸಕರ 15 ವಿಧಾನಸಭೆ ಕ್ಷೇತ್ರಗಳಿಗೆ ಉಪ ಚುನಾವಣೆ ಘೋಷಣೆಯಾಗಿದ್ದು, ಕೇವಲ ಶಾಸಕರು ಮಾತ್ರ ಗೊಂದಲದಲ್ಲಿ ಮುಳುಗಿಲ್ಲ,  ಸ್ಥಳೀಯ ಕಾರ್ಯಕರ್ತರು ಹಾಗೂ ಕೌನ್ಸಿಲರ್ ಮತ್ತು ಪಂಚಾಯಿತಿ ಸದಸ್ಯರುಗಳು ಕೂಡ ಫುಲ್ ಕನ್ ಫ್ಯೂಸ್ ಆಗಿದ್ದಾರೆ.
 
ಅನರ್ಹರಲ್ಲಿ 12 ಕಾಂಗ್ರೆಸ್ ಶಾಸಕರಿದ್ದು, ಉಳಿದ ಮೂವರು ಜೆಡಿಎಸ್ ಶಾಸಕರಿದ್ದಾರೆ, ಹಿಂದಿನ ಚುನಾವಣೆಯಲ್ಲಿ ಈ ಶಾಸಕರು ಗೆದ್ದು ಬರುವಲ್ಲಿ ಬೆಂಬಲ ನೀಡಿದ್ದ ಮುಖಂಡರು ಈಗ ಡೈಲಮಾದಲ್ಲಿದ್ದಾರೆ, ತಮ್ಮ ನಿಷ್ಠೆ ತಮ್ಮ ನಾಯಕನಿಗೋ ಅಥವಾ ಪಕ್ಷಕ್ಕೆ ನೀಡುವುದೋ ಎಂಬ ಗೊಂದಲದಲ್ಲಿದ್ದಾರೆ,

ಬೆಂಗಳೂರಿನ ಯಶವಂತಪುರ, ಕೆ.ಆರ್ ಪುರಂ, ಶಿವಾಜಿನಗರ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಪ್ರಾಬಲ್ಯವಿದೆ, ಕಾಂಗ್ರೆಸ್ ಶಾಸಕರಿದ್ದಾರೆ, ಮಹಾಲಕ್ಷ್ಮಿ ಲೇಔಟ್ ನಲ್ಲಿ ಜೆಡಿಎಸ್ ಶಾಸಕರು ಆಯ್ಕೆಯಾಗಿದ್ದರು,. ಪ್ರತಿಯೊಂದು ವಿಧಾನ ಸಭೆ ಕ್ಷೇತ್ರಗಳಲ್ಲಿ 8 ಬಿಬಿಎಂಪಿ ವಾರ್ಡ್ ಗಳಿದ್ದು, ಎರಡರಲ್ಲೂ ಕಾಂಗ್ರೆಸ್ ಮತ್ತು ಜೆಡಿಎಸ್ ಕೌನ್ಸಿಲರ್ ಗಳಿದ್ದಾರೆ.

ಯಶವಂತಪುರ ವಿಧಾನಸಬೆ ಕ್ಷೇತ್ರಗಳಲ್ಲಿ ಮೂರು ಬಿಬಿಎಂಪಿ ವಾರ್ಡ್ ಗಳಲ್ಲಿ ಕಾಂಗ್ರೆಸ್ ಕೌನ್ಸಿಲರ್ ಗಳಿದ್ದಾರೆ, ಯಶವಂತಪುರ ಶಾಸಕ ಎಸ್ ,ಟಿ ಸೋಮಶೇಖರ್ ಅನರ್ಹಗೊಂಡಿದ್ದಾರೆ. ಕೆ.ಆರ್ ಪುರಂ ನಲ್ಲಿ  ಭೈರತಿ ಬಸವರಾಜ್ ಅವರಿಗೆ ಇಬ್ಬರು ಕಾಂಗ್ರೆಸ್ ಕೌನ್ಸಿಲರ್ ಗಳು ಬೆಂಬಲಿಸಿದ್ದರು.

ಇನ್ನೂ ಮಹಾಲಕ್ಷ್ಮಿ ಲೇಔಟ್ ನಲ್ಲಿ ಇರುವ ಇಬ್ಬರು ಜೆಡಿಎಸ್ ಕೌನ್ಸಿಲರ್ ಗಳು ಅನರ್ಹ ಶಾಸಕ ಗೋಪಾಲಯ್ಯ ಅವರನ್ನು ಬೆಂಬಲಿಸಿದ್ದರು. ಹೀಗಾಗಿ ಉಪ ಚುನಾವಣೆ ಘೋಷಣೆಯಾಗಿರುವ ಎಲ್ಲಾ ಕ್ಷೇತ್ರಗಳಲ್ಲಿ ಗೊಂದಲು ಮೂಡಿದೆ ತಮ್ಮ ನಾಯಕನನ್ನು ಬೆಂಬಲಿಸಬೇಕೋ ಅಥವಾ ಪಕ್ಷಕ್ಕೆ ನಿಷ್ಠೆ ತೋರಿಸಬೇಕೋ ಎಂಬ  ಗೊಂದಲದಲ್ಲಿ ಸಿಲುಕಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಯುದ್ಧ ತೀವ್ರ: ಪಾಕಿಸ್ತಾನದ ಏರ್ ಸ್ಟ್ರೈಕ್ ಗೆ ಅಫ್ಘಾನಿಸ್ತಾನದಿಂದ ಕ್ಷಿಪಣಿ ದಾಳಿ ಉತ್ತರ

ಇತಿಹಾಸ ಬರೆದ Sherry Singh, 48 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತಕ್ಕೆ 'ಮಿಸ್ ಯೂನಿವರ್ಸ್' ಕಿರೀಟ!

20 ವರ್ಷ ಸಾಕಿ ಬೆಳೆಸಿದ 'ಅಶ್ವತ್ಥ'ಕ್ಕೆ ಕಿಡಿಗೇಡಿಗಳ ಕೊಡಲಿ ಪೆಟ್ಟು, ಬಿಕ್ಕಿ ಬಿಕ್ಕಿ ಅತ್ತ 'ವೃಕ್ಷಮಾತೆ', ಇಬ್ಬರ ಬಂಧನ, video viral

ಅಭಿಷೇಕ್ ಶರ್ಮಾನನ್ನು ಮೂರೇ ಎಸೆತಗಳಲ್ಲಿ ಔಟ್ ಮಾಡುತ್ತೇನೆ: ಪಾಕ್ ನ 152.65 kmph ವೇಗಿಯ ಉದ್ಧಟತನದ ಮಾತು

ಡಿಕೆ ಶಿವಕುಮಾರ್ ಇದ್ದ ವೇದಿಕೆಯಲ್ಲೇ ಹೈಡ್ರಾಮಾ: RSS ಸಮವಸ್ತ್ರದಲ್ಲಿ ಬಿಜೆಪಿ ಶಾಸಕ ಮುನಿರತ್ನ ಧರಣಿ! Video

SCROLL FOR NEXT