ಸಂಗ್ರಹ ಚಿತ್ರ 
ರಾಜಕೀಯ

ಫೋನ್  ಟ್ಯಾಪಿಂಗ್ ಪ್ರಕರಣ: ಯಾವುದೇ ಭಯ ಇಲ್ಲ- ಎಚ್ ಡಿ ಕುಮಾರಸ್ವಾಮಿ

ದೂರವಾಣಿ ಕದ್ದಾಲಿಕೆ ವಿಚಾರದಲ್ಲಿ ತಮಗೆ ಯಾವುದೇ ಭಯ ಇಲ್ಲ. ಎಲ್ಲ ಸರ್ಕಾರಗಳ ಆಡಳಿತಾವಧಿಯಲ್ಲಿಯೂ ಫೋನ್ ಟ್ಯಾಪಿಂಗ್ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ದೂರವಾಣಿ ಕದ್ದಾಲಿಕೆ ವಿಚಾರದಲ್ಲಿ ತಮಗೆ ಯಾವುದೇ ಭಯ ಇಲ್ಲ. ಎಲ್ಲ ಸರ್ಕಾರಗಳ ಆಡಳಿತಾವಧಿಯಲ್ಲಿಯೂ ಫೋನ್ ಟ್ಯಾಪಿಂಗ್ ನಡೆದಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್ .ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಹಿರಿಯ ಪೊಲೀಸ್ ಅಧಿಕಾರಿ ಅಲೋಕ್ ಕುಮಾರ್ ನಿವಾಸದ ಮೇಲೆ ಸಿಬಿಐ ಅಧಿಕಾರಿಗಳು ದಾಳಿ ನಡೆಸಿ ವಿಚಾರಣೆ ಮಾಡಿರುವ ಹಿನ್ನೆಲೆಯಲ್ಲಿ ಜೆ.ಪಿ.ಭವನದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾರು ಯಾರ ನಿವಾಸದ ಮೇಲಾದರೂ ದಾಳಿ ಮಾಡಲಿ. ಆ ಬಗ್ಗೆ ತಮ್ಮನ್ನು ಪ್ರಶ್ನಿಸುವ ಅವಶ್ಯಕತೆಯಿಲ್ಲ. ಅಲೋಕ್ ಕುಮಾರ್ ನಿವಾಸದ ಮೇಲಿನ ಸಿಬಿಐ ದಾಳಿಗೂ ತಮಗೂ ಯಾವುದೇ ಸಂಬಂಧವಿಲ್ಲ ಎಂದರು.

ಎಲ್ಲಾ ಸರ್ಕಾರದಲ್ಲಿಯೂ ಫೋನ್ ಟ್ಯಾಪಿಂಗ್ ನಡೆಸುವುದು ಸಹಜ. ದೇಶದ ಕಾನೂನಿನಲ್ಲಿ ತನಿಖಾ ಸಂಸ್ಥೆಗಳು ದಾಳಿ ನಡೆಸುವ ಹಾಗೂ ಪರಿಶೀಲಿಸುವ ಹಕ್ಕು ಹೊಂದಿವೆ. ತಮ್ಮನ್ನು ಬೇಕಾದರೂ ತನಿಖೆಗೆ ಒಳಪಡಿಸಲಿ. ಇದಕ್ಕೆಲ್ಲ ಗಾಬರಿ ಪಡುವುದಿಲ್ಲ. ಅಲೋಕ್ ಕುಮಾರ್ ಈಗಲೂ ದಕ್ಷ ಅಧಿಕಾರಿಯಾಗಿಯೇ ಇದ್ದಾರೆ ಎಂದು ಕುಮಾರಸ್ವಾಮಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT