ಅನಿಲ್ ಲಾಡ್c 
ರಾಜಕೀಯ

ಬಿಜೆಪಿ ಸೇರುತ್ತೇನೆ: ಕಾಂಗ್ರೆಸ್ ನಾಯಕ, ಮಾಜಿ ಶಾಸಕ ಅನಿಲ್ ಲಾಡ್

ಮುಂದಿನ ವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತೇನೆಂದು ಕಾಂಗ್ರೆಸ್ ನಾಯಕ ಹಾಗೂ ಬಳ್ಳಾರಿಯ ಮಾಜಿ ಶಾಸಕ ಅನಿಲ್ ಲಾಡ್ ಅವರು ಶನಿವಾರ ಹೇಳಿದ್ದಾರೆ. 

ಬಳ್ಳಾರಿ: ಮುಂದಿನ ವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತೇನೆಂದು ಕಾಂಗ್ರೆಸ್ ನಾಯಕ ಹಾಗೂ ಬಳ್ಳಾರಿಯ ಮಾಜಿ ಶಾಸಕ ಅನಿಲ್ ಲಾಡ್ ಅವರು ಶನಿವಾರ ಹೇಳಿದ್ದಾರೆ. 

ಪಕ್ಷದ ಸ್ಥಳೀಯ ನಾಯಕರು ನನ್ನನ್ನು ಬದಿಗೊತ್ತುತ್ತಿದ್ದಾರೆ. ಇದರಿಂದ ಮನಸ್ಸಿಗೆ ಬೇಸರವಾಗಿದ್ದು, ಯಾವುದೇ ನಿರೀಕ್ಷೆಗಳಿಲ್ಲದೆ ಬಿಜೆಪಿ ಪಕ್ಷಕ್ಕೆ ಕಾರ್ಯಕರ್ತನಾಗಿ ಮುಂದಿನ ವಾರ ಸೇರ್ಪಡೆಗೊಳ್ಳುತ್ತಿದ್ದೇನೆಂದು ಹೇಳಿದ್ದಾರೆ.
 
ಪಕ್ಷದ ಕಾರ್ಯಕ್ರಮಗಳ ಕುರಿತಂತೆ ನನಗೆ ಯಾವುದೇ ನಾಯಕರು ಮಾಹಿತಿ ನೀಡುತ್ತಿಲ್ಲ. ಬೆಂಗಳೂರಿನಿಂದ ಬಳ್ಳಾರಿಗೆ ಸಿದ್ದರಾಮಯ್ಯ ನಾಯಕತ್ವದಲ್ಲಿ ಪಾದಯಾತ್ರೆ ನಡೆದಿತ್ತು. ಪಕ್ಷ ಗೆದ್ದ ಬಳಿಕ ನನ್ನನ್ನು ಬದಿಗೊತ್ತಲಾಗಿದೆ. ಪಕ್ಷಕ್ಕೆ ಇದೀಗ ನನ್ನ ಅಗತ್ಯವಿಲ್ಲ. ಹೊಸ ಹೊಸ ನಾಯಕರು ಇದೀಗ ಪಕ್ಷಕ್ಕೆ ಬಂದಿದ್ದಾರೆ. ಹಾಗಾಗಿ ಪಕ್ಷಕ್ಕೆ ನಾವು ಬೇಡದವರಾಗಿದ್ದೇವೆ. 

ಒಬ್ಬ ಕಾರ್ಪೋರೇಟರ್ ನನ್ನ ವಿರುದ್ಧ ಮಾತನಾಡಿದರೂ, ಯಾರೂ ಇದರ ವಿರುದ್ಧ ಕ್ರಮ ಕೈಗೊಳ್ಳುವುದಿಲ್ಲ. ಮತ್ತೆ ಚುನಾವಣೆ ಬರುತ್ತಿದ್ದು, ಪಕ್ಷದ ಪ್ರತೀಯೊಬ್ಬ ಹಿರಿಯ ನಾಯಕನೂ ಟಿಕೆಟ್ ಗಾಗಿ ಬೇಡಿಕೆ ಇಡುತ್ತಿದ್ದಾರೆ. ಜನರ ಬಳಿ ಹೋಗಿ ನಾನು ಮತ ಭಿಕ್ಷೆ ಕೇಳಬೇಕು. ಗೆದ್ದ ಬಳಿಕ ಅಧಿಕಾರ ಅವರಿಗೆ. ಹಿರಿಯ ನಾಯಕರಾದ ಕಾರಣ ಅವರಿಗೆ ಆದ್ಯತೆ ನೀಡುತ್ತಾರೆ. ಬಿಜೆಪಿ ಸೇರ್ಪಡೆ ಕುರಿತು ಶ್ರೀರಾಮುಲು ಬಳಿ ಮಾತನಾಡಿದ್ದೇನೆ. ಅದಕ್ಕೆ ಅವರು ಒಪ್ಪಿದ್ದಾರೆ. 


ಮುಖ್ಯಮಂತ್ರಿಗಳೊಂದಿಗೆ ನೇರವಾಗಿ ಮಾತನಾಡುವುದು ತಪ್ಪಾಗುತ್ತದೆ. ಹೀಗಾಗಿ ನಾನು ಸ್ಥಳೀಯ ನಾಯಕರೊಂದಿಗೆ ಮಾತನಾಡಿದ್ದೇನೆ. ಶ್ರೀರಾಮುಲು ಹಾಗೂ ಆನಂದ್ ಸಿಂಗ್ ಇಬ್ಬರೂ ಸ್ವಾಗತಿಸಿದ್ದಾರೆ. ಸಂತೋಷ್ ಜೀ ಹಾಗೂ ಯಡಿಯೂರಪ್ಪ ಅವರ ಬಳಿ ಅವರೇ ನನ್ನನ್ನು ಕರೆದುಕೊಂಡು ಹೋಗುತ್ತಾರೆಂದು ತಿಳಿಸಿದ್ದಾರೆ. 

ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಳ್ಳುವ ಕುರಿತು ಈಗಾಗಲೇ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಮಾಹಿತಿ ನೀಡಿದ್ದೇನೆ. ನಾನು ಯಾರಿಗೂ ಬೆನ್ನಿಗೆ ಚೂರಿ ಹಾಕಿಲ್ಲ. ನಾನು ಎಲ್ಲಿಯೂ ಓಡಿ ಹೋಗುತ್ತಿಲ್ಲ ಎಂದಿದ್ದಾರೆ. 

ಅನಿಲ್ ಲಾಡ್ ಅವರ ಈ ನಿರ್ಧಾರ ಇದೀಗ ಕಾಂಗ್ರೆಸ್ ನಾಯಕರಿಗೆ ಆಘಾತವನ್ನು ತಂದಿದೆ. 

ಅನಿಲ್ ಲಾಡ್ ಅವರ ಹೇಳಿಕೆ ಸಾಕಷ್ಟು ಆಶ್ಚರ್ಯವನ್ನು ತಂದಿದೆ. ಪಕ್ಷ ತೊರೆಯುವ ಕುರಿತು ನಮಗೆ ಯಾವುದೇ ಮಾಹಿತಿಗಳಿಲ್ಲ ಎಂದು ಕಾಂಗ್ರೆಸ್ ವಕ್ತಾರ ಪತ್ರೇಶ್ ಹಿರೇಮಠ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಪ್ಯಾಕ್ಸ್ ಸಿಲಿಕಾ ಅಲೈಯನ್ಸ್‌ನ ಸದಸ್ಯ ದೇಶವಾಗಲಿದೆ; ಅಮೆರಿಕಕ್ಕೆ ಭಾರತಕ್ಕಿಂತ ಮುಖ್ಯ ದೇಶ ಮತ್ತೊಂದಿಲ್ಲ: ಸೆರ್ಗಿಯೊ ಗೋರ್

CM ಕುರ್ಚಿ ಗುದ್ದಾಟ: ಅಗತ್ಯವಿದ್ದಾಗ ಸಿದ್ದರಾಮಯ್ಯ, ಶಿವಕುಮಾರ್‌ರನ್ನು ಮಾತುಕತೆಗೆ ಕರೆಯಲಾಗುವುದು; ಮಲ್ಲಿಕಾರ್ಜುನ ಖರ್ಗೆ

'sir' ವಿವಾದ ಕೊನೆಗೂ ಅಂತ್ಯ: 'ಸರ್.. ನೀವು ನನ್ನ ಹಿರಿಯರು': ಕಿಚ್ಚಾ ಸುದೀಪ್ ಗೆ ಧನ್ಯವಾದ ಹೇಳಿದ ನಟ ಯಶ್!

ಟಿ20 ವಿಶ್ವಕಪ್: 'ಅಲ್ಲಿ ಬೇಡ ಅಂದ್ರೆ ಇಲ್ಲಿ ಆಡಿ..': ಬಾಂಗ್ಲಾದೇಶಕ್ಕೆ ಹೊಸ ಮೈದಾನಗಳ ಸೂಚಿಸಿದ ICC

ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ದಳಪತಿ ವಿಜಯ್ ಅಭಿನಯದ 'ಜನ ನಾಯಗನ್'

SCROLL FOR NEXT