ರಾಜಕೀಯ

ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಗೆ ಟಿಕೆಟ್ ಇಲ್ಲ- ಶಾಸಕ ಉಮೇಶ್ ಕತ್ತಿ 

Nagaraja AB

ಚಿಕ್ಕೋಡಿ: ಉಪ ಚುನಾವಣೆಯಲ್ಲಿ ಸ್ಪರ್ಧಿಸಲು ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ಲಭ್ಯವಿಲ್ಲ ಎಂದು ಬಿಜೆಪಿ ಮುಖಂಡ ಹಾಗೂ ಶಾಸಕ ಉಮೇಶ್ ಕತ್ತಿ ಹೇಳಿದ್ದಾರೆ.

ಹುಕ್ಕೇರಿ ದಸರಾ ಉತ್ಸವದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರಿಗೆ ಟಿಕೆಟ್ ಲಭ್ಯವಿಲ್ಲ. ಆದರೆ, ಕಾಗವಾಡ ಮಾಜಿ ಶಾಸಕ ರಾಜು ಕಾಗೆ ಅವರಿಗೆ ಟಿಕೆಟ್ ದೊರೆಯಲಿದೆ ಎಂದರು.

ಅನರ್ಹ ಶಾಸಕ ಶ್ರೀಮಂತ ಪಾಟೀಲ್ ಅವರ ಪರಿಸ್ಥಿತಿ ಹೇಗೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಅವರು, ಅನರ್ಹ ದಾರಿಗೆ ಅವರಿಗೆ ನಮ್ಮ ದಾರಿ ನಮಗೆ ಎಂದರು. 

SCROLL FOR NEXT