ವಿ.ಸೋಮಣ್ಣ ಬಿ.ಎಸ್.ಯಡಿಯುರಪ್ಪ 
ರಾಜಕೀಯ

ಮೈಸೂರಲ್ಲಿ ಸರಿಯಿದ್ರು, ದಾವಣಗೆರೆಲಿ ಏನಾಯ್ತೋ ಗೊತ್ತಿಲ್ಲ: ಸಚಿವ ವಿ. ಸೋಮಣ್ಣ

ಮೊನ್ನೆಯೆಲ್ಲಾ ಅವರು ದಸರಾ ಉದ್ಘಾಟನಾ ಕಾರ್ಯಕ್ರಮದ ವೇಳೆ ಖುಷಿಯಾಗಿಯೆ ಇದ್ದರು.ಆದರೆ ದಾವಣಗೆರೆಗೆ ಹೋದಾಗ ಏನಾಗಿದೆಯೋ ನನಗೆ ತಿಳಿದಿಲ್ಲ.ಯಡಿಯೂರಪ್ಪ ಅವರಿಗೆ ಅನುಭವವಿದೆ. ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗ ಒತ್ತಡ ಇರುತ್ತದೆ ಅವರು ಯಾವ ಅರ್ಥದಲ್ಲಿ ಹೀಗೆ ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಸಚಿವ ವಿ.ಸೋಮಣ್ಣ ಅವರು ಹೇಳಿದ್ದಾರೆ.

ಮೈಸೂರು:  ಮೊನ್ನೆಯೆಲ್ಲಾ ಅವರು ದಸರಾ ಉದ್ಘಾಟನಾ ಕಾರ್ಯಕ್ರಮದ ವೇಳೆ ಖುಷಿಯಾಗಿಯೆ ಇದ್ದರು.ಆದರೆ ದಾವಣಗೆರೆಗೆ ಹೋದಾಗ ಏನಾಗಿದೆಯೋ ನನಗೆ ತಿಳಿದಿಲ್ಲ.ಯಡಿಯೂರಪ್ಪ ಅವರಿಗೆ ಅನುಭವವಿದೆ. ಮುಖ್ಯಮಂತ್ರಿ ಸ್ಥಾನದಲ್ಲಿದ್ದಾಗ ಒತ್ತಡ ಇರುತ್ತದೆ ಅವರು ಯಾವ ಅರ್ಥದಲ್ಲಿ ಹೀಗೆ ಹೇಳಿದ್ದಾರೆ ಎನ್ನುವುದು ಗೊತ್ತಿಲ್ಲ ಎಂದು ಸಚಿವ ವಿ.ಸೋಮಣ್ಣ ಅವರು ಹೇಳಿದ್ದಾರೆ.
  
ನಗರದಲ್ಲಿ ಸುದ್ದಿಗಾರರೊಂದಿಗೆ  ಜೊತೆ ಮಾತನಾಡಿದ ಅವರು, ಬಿಎಸ್ ಯಡಿಯೂರಪ್ಪ ಅವರದೇ ದೃಷ್ಟಿಯಲ್ಲಿ ರಾಜ್ಯವನ್ನು ಅಭಿವೃದ್ಧಿ ಮಾಡುವ ಕಲ್ಪನೆ ಹೊಂದಿದ್ದಾರೆ. ಅಘೋಚರವಾಗಿ ಅವರಿಗೆ ಏನಾದರೂ ಇರಿಸು ಮುರಿಸು ಆದರೆ ಕೆಲ ಕಾಲ ಸಿಟ್ಟಾಗಿ ನಂತರ ಸರಿ ಹೋಗುತ್ತಾರೆ. ಸರ್ಕಾರದ ಮಟ್ಟದಲ್ಲಿ ಸಣ್ಣಪುಟ್ಟ ನ್ಯೂನತೆ ಇದ್ದರೆ ಅದನ್ನು ಸರಿಪಡಿಸಿಕೊಂಡು ಅವರು ಸರ್ಕಾರ ನಡೆಸುತ್ತಾರೆ ಎಂದು ಅವರು ಹೇಳಿದರು. 
  
ಅನರ್ಹ ಶಾಸಕರ ಬಗ್ಗೆ ಉಮೇಶ್ ಕತ್ತಿ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ವಿ.ಸೋಮಣ್ಣ, ಅನರ್ಹ ಶಾಸಕರು ತ್ಯಾಗ ಮಾಡಿದ್ದಾರೆ. ಅವರ ಕೊಡುಗೆ ಅಪಾರವಾಗಿದ್ದು, ಅವರ ಬಗ್ಗೆ ಲಘುವಾಗಿ ಮಾತಾಡಬಾರದು.ಉಮೇಶ್ ಕತ್ತಿ ಭೇಟಿ ಮಾಡಿದರೆ ಮುಲಾಜಿಲ್ಲದೇ ಕೆಟ್ಟ ಭಾಷೆಯಲ್ಲಿ ಅವರಿಗೆ ಈ ಬಗ್ಗೆ ಕೇಳುತ್ತೇನೆ. ಕತ್ತಿ ನೀಡಿರುವ ಹೇಳಿಕೆಗಳು ಎಂದಾದರೂ ಸರಿ ಇದೆಯಾ(?) ಎಂದು ಅವರು ಪ್ರಶ್ನೆ ಮಾಡಿದರು.
  
ಅಲ್ಲದೇ ಈ ವಿಚಾರದಲ್ಲಿ ಅನಾವಶ್ಯಕವಾಗಿ ಹೇಳಿಕೆ ನೀಡಿ ಪದೇ ಪದೇ ಮುಖ್ಯಮಂತ್ರಿ ಅವರಿಗೆ ತಲೆ ಬಿಸಿ ಮಾಡಬಾರದು. ನಾನು ಉಮೇಶ್ ಕತ್ತಿ ಪರಸ್ಪರ ಆತ್ಮೀಯರು. ನಾವು ಸದಾ ಸಲಿಗೆಯಿಂದ ಮಾತಾಡುತ್ತೇನೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಆ ದೇಶಕ್ಕೂ ನಾನೇ 'ಹಂಗಾಮಿ' ಸರ್ವೋಚ್ಛ ನಾಯಕ': Donald Trump ಘೋಷಣೆ, ಬೆಚ್ಚಿಬಿದ್ದ ವೆನೆಜುವೆಲಾ!

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

SCROLL FOR NEXT