ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಶಾಸಕ ಜಮೀರ್ ಅಹ್ಮದ್ ರನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ: ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಆಗ್ರಹ

ಬೆಂಗಳೂರಿನ ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ರನ್ನ ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಮಂಗಳೂರು: ಬೆಂಗಳೂರಿನ ಪಾದರಾಯನಪುರ ಘಟನೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ರನ್ನ ಗೂಂಡಾ ಕಾಯ್ದೆಯಡಿ ಬಂಧಿಸುವಂತೆ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಆಗ್ರಹಿಸಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ  ಮಾತನಾಡಿದ ಅವರು " ಅಧಿಕಾರಿಗಳನ್ನ ಬೆದರಿಸಿ ನನ್ನ ಅನುಮತಿ ಪಡೆದು ಬನ್ನಿ ಎಂದು ಜಮೀರ್ ಹೇಳಲು, ಭಾರತ ಸರ್ವಾಧಿಕಾರಿ ರಾಷ್ಟ್ರವಲ್ಲ. ಪಾದಾರಾಯನಪುರದ ಘಟನೆ ‌ನಡೆದಾಗ ಜವಬ್ದಾರಿಯುತ ಸರ್ಕಾರದ ಪ್ರತಿನಿಧಿಯಾಗಿ ಶಾಸಕ ಜಮೀರ್ ತೆಗೆದುಕೊಂಡ ನಿರ್ಧಾರ ಮತ್ತು ವರ್ತನೆ ಕಾನೂನು ಬಾಹಿರ ಎಂದು ಅಭಿಪ್ರಾಯಪಟ್ಟಿದ್ದಾರೆ. ಜಮೀರ್ ಅಹ್ಮದ್ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಿ ಬಂಧಿಸುವಂತೆ ಅವರು ಆಗ್ರಹಿಸಿದರು.

ಪಾದರಾಯನಪುರದಲ್ಲಿ ನಡೆದಿದ್ದ ಗಲಭೆಗೆ ಸಂಬಂಧಿಸಿದಂತೆ ಮಾತನಾಡಿದ್ದ ಜಮೀರ್ ಅಹ್ಮದ್ ಅವರೆಲ್ಲರೂ ಅವಿದ್ಯಾವಂತರು. ಅವರಿಗೆ ಏನು ತಿಳಿಯುವುದಿಲ್ಲ ಎಂದು ಗಲಭೆಯನ್ನು ಸಮರ್ಥಿಸಿಕೊಂಡಿದ್ದರು. 

ಇದೇ ವೇಳೆ ಆರೋಗ್ಯ ಸಿಬ್ಬಂದಿ ಅವರು ಬೆಳಗ್ಗೆ ಬರಬೇಕಿತ್ತು. ರಾತ್ರಿ ಬಂದಿದ್ದರಿಂದ ಗಲಭೆ ಸಂಭವಿಸಿದೆ. ರಾತ್ರಿ ವೇಳೆ ಕ್ವಾರಂಟೈನ್ ಮಾಡುವ ಅಗತ್ಯವೇನಿತ್ತು ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT